Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...