Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...