Homeಕರ್ನಾಟಕಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

- Advertisement -
- Advertisement -

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿದೆ. ಮಠದ ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಬೆಳಕಿಗೆ ಬರುವಲ್ಲಿ ಮೈಸೂರಿನ ಒಡನಾಡಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದ್ದು, ಒಡನಾಡಿ ಸಂಸ್ಥೆಯ ಮುಖ್ಯಸ್ಥರಲ್ಲಿ ಒಬ್ಬರಾದ ಪರಶು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು ಎಂಬ ಭಾವನೆ ಇತ್ತು. ಮಕ್ಕಳ ಹೇಳಿಕೆ ಬಳಿಕ‌ ಸ್ವಾಮೀಜಿಯವರ ಬಗ್ಗೆ ನಮಗೆ ಅಸಹ್ಯ ಹುಟ್ಟಿದೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಬ್ಬರು ಮಕ್ಕಳು ಚಿತ್ರದುರ್ಗದಲ್ಲಿ ಓದುತ್ತಿದ್ದರು. ಆ ಮಕ್ಕಳ ಮೇಲೆ ಸ್ವಾಮೀಜಿಯವರು ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ. ಅವರ ಕಿರುಕುಳದಿಂದ‌ ಬೇಸತ್ತ ಮಕ್ಕಳು ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅಲ್ಲಿ ಸಾಧ್ಯವಾಗದೇ ಇದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದರು” ಎಂದು ತಿಳಿಸಿದ್ದಾರೆ.

“ಆಟೋ ಚಾಲಕನೊಬ್ಬ ಸಹಾಯ ಮಾಡಿ ನಮ್ಮ ಬಳಿ ಹೋಗಿ ನ್ಯಾಯ ಸಿಗುತ್ತದೆ ಎಂದು ಕಳುಹಿಸಿಕೊಟ್ಟರು. ಆ ಇಬ್ಬರು ಮಕ್ಕಳನ್ನು ಆಪ್ತ ಸಮಾಲೋಚನೆ ಮಾಡಿದಾಗ ಸ್ವಾಮೀಜಿಯವರ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ತಕ್ಷಣ ನಾವು ಮಕ್ಕಳು ಹಕ್ಕುಗಳ ರಕ್ಷಣಾ ಕೇಂದ್ರದವರಿಗೆ ವಿಚಾರ ತಲುಪಿಸಿದೆವು. ಅವರೂ ಸಹ ಕೌನ್ಸಲಿಂಗ್‌ ಮಾಡಿ ಮಕ್ಕಳ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಖಚಿತವಾದ ನಂತರ‌ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ನಾವು ಅದಾವುದನ್ನು ಲೆಕ್ಕಿಸದೇ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇದು ಕೇವಲ ಇಬ್ಬರು ಮಕ್ಕಳಿಗೆ ದೌರ್ಜನ್ಯವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಮಕ್ಕಳು ಹೇಳುವ ಪ್ರಕಾರ ಅಲ್ಲಿ 120 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು ಅದೆಷ್ಟು ಮಕ್ಕಳಿಗೆ ಈ ರೀತಿಯ ದೌರ್ಜನ್ಯವಾಗಿದೆ ಎಂದು ನೋಡಬೇಕಿದೆ. ಸರಿಯಾದ ತನಿಖೆಯಾಗಬೇಕಿದೆ. ಇದಕ್ಕೆ ಸಹಕಾರ ಕೊಟ್ಟವರ ವಿರುದ್ದವು ಪ್ರಕರಣ ದಾಖಲು ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅತ್ಯಂತ ಪ್ರಭಾವಿಗಳು ಪರಿಚಯವಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೇ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಹಾಗಾಗಿ‌ ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ನ್ಯಾಯಾಂಗ ತನಿಖೆಯೇ ಆಗಬೇಕು” ಎಂದು ಹೇಳಿದ್ದಾರೆ.

ಮುರುಘ ಶರಣರ ವಿರುದ್ಧ ಮೈಸೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿರುವ ಮಹಿಳಾ ವಾರ್ಡನ್ ನೀಡಿರುವ ದೂರಿನ ಅನ್ವಯ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಮಾಜಿ ಶಾಸಕ ಬಸವರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ತನ್ನನ್ನು ಅತ್ಯಾಚಾರ ಮಾಡಲು ಬಸವರಾಜನ್ ಯತ್ನಿಸಿದ್ದಾರೆಂದು ವಾರ್ಡನ್ ಆರೋಪಿಸಿದ್ದಾರೆ. ಮಠದ ಆಡಳಿತಾಧಿಕಾರಿ ಆಗಿದ್ದ ಅವರು ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದೂ ವಾರ್ಡನ್‌ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಒಡನಾಡಿಯ ಪರಶು ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಬಸವರಾಜನ್‌ ಮೇಲೆ ಪ್ರಕರಣ ದಾಖಲಿಸಿದ್ದರೆ, ಆ ವಿಚಾರವಾಗಿಯೂ ತನಿಖೆಯಾಗಲಿ. ಸತ್ಯ ಹೊರಬರಲಿ. ಮಕ್ಕಳನ್ನು ಮುಂದಿಟ್ಟುಕೊಂಡು ಯಾರೂ ಸುಖಾಸುಮ್ಮನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ. ಸ್ವಾಮೀಜಿಯವರ ಮಾನ ಹರಣ ಮಾಡಲೆಂದು ಇಲ್ಲಿ ಯಾರೂ ಮುಂದಾಗಿಲ್ಲ. ಇದು ಪೌರ ಪ್ರಜ್ಞೆಗೆ ಬಿಟ್ಟ ವಿಚಾರ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ ಧರ್ಮಗುರುಗಳು: ಇಲ್ಲಿದೆ ಪ್ರಮುಖರ ಪಟ್ಟಿ

“ಸರ್ವರ ಏಳ್ಗೆಯಾಗಬೇಕು ಎಂಬುದು ಸಂವಿಧಾನದ ಆಶಯ. ಅದಕ್ಕೆ ವಿರುದ್ಧವಾಗಿ ನಡೆಯುತ್ತಿದ್ದರೆ ನಾವೇನೂ ಮಾಡಲು ಆಗಲ್ಲ. ಮಕ್ಕಳು ನಮ್ಮ ಸಂಸ್ಥೆಯ ಮುಂದೆ ಬಂದರು. ಕಾನೂನು ಸುಪರ್ದಿಗೆ ನೀಡುವುದು ನಮ್ಮ ಜವಾಬ್ದಾರಿಯಾಗಿತ್ತು. ನಾವು ಕಾನೂನು ಸುಪರ್ದಿಗೆ ನೀಡಿದ್ದೇವೆ. ಮಕ್ಕಳ ಕಲ್ಯಾಣ ನ್ಯಾಯಾಧೀಶರ ಗಮನಕ್ಕೆ ತಂದಿದ್ದೇವೆ. ನ್ಯಾಯಾಧೀಶರ ಮೂಲಕ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ” ಎಂದರು.

“ಇಂತಹ ಘಟನೆಗಳು ನಡೆದಾಗ ಜೆವಿನಿಲ್ಲೆ ಜಸ್ಟೀಸ್ ಆಕ್ಟ್ ಹಾಗೂ ಪೋಸ್ಕೊ ಕಾಯ್ದೆ ಪ್ರಕಾರ ಸಿಡಬ್ಲ್ಯೂಸಿ ಗಮನಕ್ಕೆ ತರಬೇಕು. ಮೇಲ್ಮೋಟಕ್ಕೆ ಪ್ರಕರಣ ನಡೆದಿರುವುದು ಕಂಡು ಬಂದಿದೆ. ನಮ್ಮ ಆತ್ಮಸಮಾಲೋಚನಾ ವರದಿ ಹಾಗೂ ಸಿಡಬ್ಲ್ಯೂಸಿ ಆತ್ಮಸಮಾಲೋಚನೆಯ ವರದಿ ಹೊಂದಾಣಿಕೆಯಾಗಿದೆ. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

ಒಡನಾಡಿ ಸಂಸ್ಥೆಯ ಮೇಲೆ ಒತ್ತಡ ಹಾಗೂ ಬೆದರಿಕೆ ಬರುತ್ತಿವೆ ಎಂಬ ವರದಿಯ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಯಾವ ಪ್ರಕರಣದಲ್ಲಿ ನಮಗೆ ಬೆದರಿಕೆ ಬಂದಿಲ್ಲ ಹೇಳಿ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮುರುಗಾ ಶರಣರ ವಿರುದ್ಧ ಎಫ್.ಐ.ಆರ್. ದಾಕಲಾಗುತ್ತಿದ್ದಂತೆಯೇ, ಈ ಪ್ರಕರಣದ ಮತ್ತೊಬ್ಬ ಆರೋಪಿ ವಾರ್ಡನ್, ಬಸವರಾಜನ್ ವಿರುದ್ಧ ಅತ್ಯಾಚಾರದ ದೂರು ದಾಕಲಿಸಿರುವುದು, ಕರ್ನಾಟಕ ಸರ್ಕಾರ ಮುರುಗಾ ಶರಣರ ಪರವಾಗಿ ಕಾರ್ಯಾಚರಣೆಗೆ ಇಳಿದಿರುವುದರ ಸ್ಪಷ್ಟ ಸೂಚನೆ. ಹಾಗಾಗಿ ಈ “ಒಡನಾಡಿ” ಹೇಳಿದಂತೆ ನ್ಯಾಯಾಂಗ ತನಿಕೆಯೇ ಸೂಕ್ತ.

  2. ಈ ದೇಶದ ಕಾನೂನು ಹಣವಂತರು ಮತ್ತು ಅಧಿಕಾರ ಹೊಂದಿದವರ ಕೈಗೊಂಬೆ, ಈ ಖಾವಿ ಬಳಿ ಯರಡು ಇದೆ ಮುಂದೇನಾಗುತ್ತದೆ ಊಹಿಸಲಾರದಷ್ಟು ದಡ್ಡರೇ ನಾವು

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....