Homeಕರ್ನಾಟಕಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

- Advertisement -
- Advertisement -

ಬೆಂಗಳೂರು: ತನ್ನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ‘ಕೋಮು ದ್ವೇಷ ಹರಡಿದ ಆರೋಪದಡಿ  ದಾಖಲಾಗಿರುವ ಎಫ್‌ಐಆರ್‌ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್‌ ಪೂಂಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ರಿಟ್‌ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಹರೀಶ್‌ ‍ಪೂಂಜ ಪರ ಹೈಕೋರ್ಟ್‌ ವಕೀಲ ಪ್ರಸನ್ನ ದೇಶಪಾಂಡೆ ಅವರು, ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇದು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ಅರ್ಜಿ ವಿಚಾರಣೆ, ಈ ನ್ಯಾಯಪೀಠದ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂಬುದನ್ನು ಮೌಖಿಕವಾಗಿ ವ್ಯಕ್ತಪಡಿಸಿದ್ದಲ್ಲದೆ, ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ಒಳಪಟ್ಟು ಅರ್ಜಿಯನ್ನು ಇದೇ 8ಕ್ಕೆ ವಿಚಾರಣೆಗೆ ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ಆದೇಶಿಸಿತು.

ಪ್ರಕರಣದ ಹಿನ್ನೆಲೆ

ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ  ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ” ಎಂದು ಪೂಂಜಾ ಹೇಳಿದ್ದರು.

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ” ಎಂದು ಪೂಂಜಾ ತಿಳಿಸಿದ್ದರು.

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...