Homeಕರ್ನಾಟಕಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

- Advertisement -
- Advertisement -

ಬೆಂಗಳೂರು: ತನ್ನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ‘ಕೋಮು ದ್ವೇಷ ಹರಡಿದ ಆರೋಪದಡಿ  ದಾಖಲಾಗಿರುವ ಎಫ್‌ಐಆರ್‌ ಮತ್ತು ಈ ಸಂಬಂಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್‌ ಪೂಂಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ರಿಟ್‌ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಹರೀಶ್‌ ‍ಪೂಂಜ ಪರ ಹೈಕೋರ್ಟ್‌ ವಕೀಲ ಪ್ರಸನ್ನ ದೇಶಪಾಂಡೆ ಅವರು, ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಇದು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ಅರ್ಜಿ ವಿಚಾರಣೆ, ಈ ನ್ಯಾಯಪೀಠದ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂಬುದನ್ನು ಮೌಖಿಕವಾಗಿ ವ್ಯಕ್ತಪಡಿಸಿದ್ದಲ್ಲದೆ, ಮುಖ್ಯ ನ್ಯಾಯಮೂರ್ತಿಗಳ ಆದೇಶಕ್ಕೆ ಒಳಪಟ್ಟು ಅರ್ಜಿಯನ್ನು ಇದೇ 8ಕ್ಕೆ ವಿಚಾರಣೆಗೆ ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ಆದೇಶಿಸಿತು.

ಪ್ರಕರಣದ ಹಿನ್ನೆಲೆ

ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ  ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ” ಎಂದು ಪೂಂಜಾ ಹೇಳಿದ್ದರು.

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ” ಎಂದು ಪೂಂಜಾ ತಿಳಿಸಿದ್ದರು.

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಆರೋಪ:  ಶಾಸಕ‌ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...