Homeಮುಖಪುಟಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

- Advertisement -
- Advertisement -

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎನ್ನುವಂತಹ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಭಾನುವಾರ ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವತ್‌ ಮಾತನಾಡುವಾಗ, ಈ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣ ಸಮುದಾಯ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದು ಬ್ರಾಹ್ಮಣರಿಗೆ ಅವಮಾನ ಮಾಡುವ ಹೇಳಿಕೆ ಎಂದು ವಕೀಲ ಸುಧೀರ್‌ ಕುಮಾರ್‌ ಓಜಾ ಅವರು ಮುಜಾಫರ್‌ಪುರ ಜಿಲ್ಲೆಯ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್‌ನಲ್ಲಿ ಪ್ರಕರಣ ಹೂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 20ಕ್ಕೆ ಮುಂದೂಡಲಾಗಿದೆ.

ಭಾಷಣದಲ್ಲಿ ಭಾಗವತ್ ಮಾತುಗಳು:-
”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಪುರೋಹಿತಶಾಹಿಯೊಂದಿಗೆ ಸಂಬಂಧ ಹೊಂದಿರುವ ಬ್ರಾಹ್ಮಣರ ಬಗ್ಗೆ ಭಾಗವತ್‌ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

“ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಭಾಗವತ್ ಅವರು ಬ್ರಾಹ್ಮಣರ ಬಗ್ಗೆ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿದ ಮೇಲೆ ಸೋಮವಾರ ಸ್ಪಷ್ಟನೆ ನೀಡಿದ್ದ ಭಾಗವತ್, ‘ಪಂಡಿತ್’ ಎನ್ನುವುದರ ಅರ್ಥ ಬ್ರಾಹ್ಮಣರು ಎಂದಲ್ಲ, ಬದಲಾಗಿ ‘ಬುದ್ಧಿಜೀವಿಗಳು’ ಎಂದು ಆತು ತಿರುಗಿಸುವ ಪ್ರಯತ್ನ ಮಾಡಿದರು. ಈ RSS ಕೂಡ ಭಾಗವತ್‌ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಎಂದು ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತು.

ಆದರೆ, ವಕೀಲ ಸುಧೀರ್ ಓಜಾ ಅವರು ದೂರು ಸಲ್ಲಿಸಿದ್ದು,”ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಾನು ಮುಜಫ್ಫರ್‌ಪುರ ಸಿಜೆಎಂ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 505 ಮತ್ತು 506ರ ಅಡಿ (ಶಾಂತಿ ಕದಡುವ ಉದ್ದೇಶದ ಅವಮಾನ) ದೂರು ದಾಖಲಿಸಿದ್ದೇನೆ. ಇದಲ್ಲದೆ, 153 ಮತ್ತು 153ಎ ಸೆಕ್ಷನ್‌ಗಳನ್ನು ಕೂಡ ದೂರಿನಲ್ಲಿ ಸೇರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಭಾಗವತ್ ಅವರು, ಫೆ. 5ರಂದು ಈ ಕೆಟ್ಟ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣರು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ಮತ ಬ್ಯಾಂಕ್ ರಾಜಕಾರಣವನ್ನು ಗಮನದಲ್ಲಿ ಇರಿಸಿಕೊಂಡು ಅವರು ಈ ರೀತಿ ಹೇಳಿದ್ದಾರೆ” ಎಂದು ಸುಧೀರ್ ಓಜಾ ಆರೋಪಿಸಿದ್ದಾರೆ.

”ಭಾಗವತ್ ಅವರ ಅಜಾಗರೂಕ ಹೇಳಿಕೆಯು ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾನಹಾನಿ ಉಂಟುಮಾಡಿದೆ. ಮೋಹನ್ ಭಾಗವತ್ ಅವರ ಹೇಳಿಕೆಯು ದೇಶಾದ್ಯಂತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ಸುಧೀರ್ ಓಜಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...