Homeಕರ್ನಾಟಕಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದದ ಆಪಾದಿತ ಮುಡಾ ನಿವೇಶ ಹಂಚಿಕೆ ಅಕ್ರಮ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆ, ಪ್ರತಿಪಕ್ಷ ನಾಯಕ ಆರ್‌. ಅಶೋಕ್ ವಿರುದ್ದದ ಅಕ್ರಮ ಡಿನೋಟಿಫಿಕೇಷನ್ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ಬುಧವಾರ (ಅ.2) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ “ನಗರದ ಪ್ರತಿಷ್ಠಿತ ಆರ್‌.ಎಂ.ವಿ ಬಡಾವಣೆಯ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 32 ಗುಂಟೆ ಜಮೀನಿನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದ ಇಂದಿನ ಪ್ರತಿಪಕ್ಷ ನಾಯಕ ಆರ್‌. ಅಶೋಕ್, ಆ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಅವರು, ಈ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ವಿವಾದಕ್ಕೀಡಾಗುತ್ತಿದ್ದಂತೆ 2011ರಲ್ಲಿ ಅಶೋಕ್ ಅವರು ನೋಂದಾಯಿತ ದಾನಪತ್ರದ ಮೂಲಕ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಈ ಜಾಗದ ವಿಷಯದಲ್ಲಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ ಅತ್ರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಂದಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಅಶೋಕ್ ಜಮೀನನ್ನು ವಾಪಸ್ ಕೊಟ್ಟಿದ್ದ ಕಾರಣ ತನಿಖೆ ಅಗತ್ಯವಿಲ್ಲ ಎಂದು ಅತ್ರಿಯವರ ಅರ್ಜಿ ವಿಲೇವಾರಿ ಮಾಡಿತ್ತು. ಅಶೋಕ್ ಜೊತೆ ಅಂದಿನ ಸಿಎಂ ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪ ಅವರ ಪಾತ್ರ ಕೂಡ ಭೂಹಗರಣದಲ್ಲಿ ಇತ್ತು ಎಂದು ವಿವರಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆಯಲ್ಲವೇ?

ಅಕ್ರಮವಾಗಿ ಪಡೆದ ಜಮೀನನ್ನು ದಾನವಾಗಿ ವಾಪಸ್ ಕೊಡುವವರೆಗೆ (2003ರಿಂದ 2011) ಅದರಲ್ಲಿ 15 ಶೆಡ್, ಎರಡು ಕಾರ್ ಗ್ಯಾರೇಜ್ ಮತ್ತು ಗೋದಾಮು ನಿರ್ಮಿಸಿ ಕೋಟ್ಯಾಂತರ ರೂಪಾಯಿ ಬಾಡಿಗೆಯನ್ನು ಅಶೋಕ್ ಪಡೆದಿದ್ದಾರೆ. ಇದು ಹಣ ಅಕ್ರಮ ವರ್ಗಾವಣೆ (ತಡೆ) ಕಾಯ್ದೆ(ಪಿಎಂಎಲ್ಎ) ಅಡಿ ಅಪರಾಧ ಅಲ್ಲವೇ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಸಚಿವರಾದ ಹೆಚ್‌.ಕೆ ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಸತೀಶ್ ಜಾರಕಿಹೊಳಿ ಜೊತೆ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್, ಆರ್‌. ಅಶೋಕ್ ಲೊಟ್ಟೆಗೊಲ್ಲಹಳ್ಳಿಯ ಜಮೀನನ್ನು ಅಕ್ರಮ ಡಿನೋಟಿಫೈ ಮಾಡಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಲೊಟ್ಟೆಗೊಲ್ಲಹಳ್ಳಿಯ ಸರ್ವೆ ನಂಬರ್ 10/1, 10/11 ಎಫ್1 ಮತ್ತು 10/11 ಎಫ್ 2ರ 32 ಗುಂಟೆ ಜಮೀನು ನೂರಾರು ಕೋಟಿ ರೂ.ಬೆಲೆ ಬಾಳುತ್ತದೆ. ಈ ಜಮೀನಿಗೆ ಸಂಬಂಧಿಸಿದಂತೆ ಬಿಡಿಎ 24/2/1977ರಲ್ಲಿ ಅಧಿಸೂಚನೆ ಹೊರಡಿಸಿತ್ತು. 27/2/1977ರಂದು ಮತ್ತೊಂದು ಅಧಿಸೂಚನೆ ಹಾಗೂ 31/8/1978ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.

ಇದಾದ ನಂತರ 26/2/2003 ಹಾಗೂ 12/11/2007ರಂದು ಎರಡು ಶುದ್ಧ ಕ್ರಯ ಪತ್ರದ ಮೂಲಕ ಈ ಬಿಡಿಎ ಮಾಲಕತ್ವದ ಅಧಿಸೂಚಿತ ಜಾಗವನ್ನು ಮೂಲ ಮಾಲಕರಿಂದ ಅಶೋಕ್ ಖರೀದಿ ಮಾಡಿದ್ದಾರೆ. 16/10/2009ರಂದು ರಾಮಸ್ವಾಮಿ ಎಂಬವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಜಮೀನನ್ನು ಡಿನೋಟಿಫೈ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆ ಪತ್ರದ ಮೇಲೆ ‘ಕೂಡಲೆ ಕಡತದಲ್ಲಿ ಮಂಡಿಸಿ’ ಎಂದು ಷರಾ ನಮೂದಿಸಿ ಯಡಿಯೂರಪ್ಪ ಆದೇಶ ನೀಡಿದ್ದಾರೆ ಎಂದು ಪರಮೇಶ್ವರ್ ವಿವರಿಸಿದ್ದಾರೆ.

ಅಲ್ಲದೇ, ಎರಡೇ ತಿಂಗಳಲ್ಲಿ ಆ ಜಮೀನನ್ನು ಡಿನೋಟಿಫೈ ಮಾಡಲಾಗುತ್ತದೆ. ಆನಂತರ, ನಿವೃತ್ತ ವಿಂಗ್ ಕಮಾಂಡರ್ ಜಿ.ವಿ.ಅತ್ರಿ ಎಂಬವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುತ್ತಾರೆ. ವಿಷಯ ಗಂಭೀರವಾಗುತ್ತಿದ್ದಂತೆ ಅಶೋಕ್ ಬಿಡಿಎ ಮಾಲಕತ್ವದಲ್ಲಿರುವ ಆ ಜಾಗವನ್ನು 27/8/2011ರಂದು ರಿಜಿಸ್ಟರ್ ಗಿಫ್ಟ್ ಡೀಡ್ ಮೂಲಕ ಸರ್ಕಾರಕ್ಕೆ ವಾಪಸ್ ಕೊಟ್ಟರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ: ಅಜಿತ್ ಬಣ ‘ಗಡಿಯಾರ’ ಚಿಹ್ನೆ ಬಳಸದಂತೆ ತಡೆಯಲು ಪ್ರಯತ್ನ ಮುಂದುವರಿಸಿದ ಶರದ್ ಪವಾರ್; ಸುಪ್ರೀಂ ಕೋರ್ಟಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...