Homeಕರ್ನಾಟಕಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದದ ಆಪಾದಿತ ಮುಡಾ ನಿವೇಶ ಹಂಚಿಕೆ ಅಕ್ರಮ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆ, ಪ್ರತಿಪಕ್ಷ ನಾಯಕ ಆರ್‌. ಅಶೋಕ್ ವಿರುದ್ದದ ಅಕ್ರಮ ಡಿನೋಟಿಫಿಕೇಷನ್ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ಬುಧವಾರ (ಅ.2) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ “ನಗರದ ಪ್ರತಿಷ್ಠಿತ ಆರ್‌.ಎಂ.ವಿ ಬಡಾವಣೆಯ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 32 ಗುಂಟೆ ಜಮೀನಿನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದ ಇಂದಿನ ಪ್ರತಿಪಕ್ಷ ನಾಯಕ ಆರ್‌. ಅಶೋಕ್, ಆ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಅವರು, ಈ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ವಿವಾದಕ್ಕೀಡಾಗುತ್ತಿದ್ದಂತೆ 2011ರಲ್ಲಿ ಅಶೋಕ್ ಅವರು ನೋಂದಾಯಿತ ದಾನಪತ್ರದ ಮೂಲಕ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಈ ಜಾಗದ ವಿಷಯದಲ್ಲಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ ಅತ್ರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಂದಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಅಶೋಕ್ ಜಮೀನನ್ನು ವಾಪಸ್ ಕೊಟ್ಟಿದ್ದ ಕಾರಣ ತನಿಖೆ ಅಗತ್ಯವಿಲ್ಲ ಎಂದು ಅತ್ರಿಯವರ ಅರ್ಜಿ ವಿಲೇವಾರಿ ಮಾಡಿತ್ತು. ಅಶೋಕ್ ಜೊತೆ ಅಂದಿನ ಸಿಎಂ ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪ ಅವರ ಪಾತ್ರ ಕೂಡ ಭೂಹಗರಣದಲ್ಲಿ ಇತ್ತು ಎಂದು ವಿವರಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆಯಲ್ಲವೇ?

ಅಕ್ರಮವಾಗಿ ಪಡೆದ ಜಮೀನನ್ನು ದಾನವಾಗಿ ವಾಪಸ್ ಕೊಡುವವರೆಗೆ (2003ರಿಂದ 2011) ಅದರಲ್ಲಿ 15 ಶೆಡ್, ಎರಡು ಕಾರ್ ಗ್ಯಾರೇಜ್ ಮತ್ತು ಗೋದಾಮು ನಿರ್ಮಿಸಿ ಕೋಟ್ಯಾಂತರ ರೂಪಾಯಿ ಬಾಡಿಗೆಯನ್ನು ಅಶೋಕ್ ಪಡೆದಿದ್ದಾರೆ. ಇದು ಹಣ ಅಕ್ರಮ ವರ್ಗಾವಣೆ (ತಡೆ) ಕಾಯ್ದೆ(ಪಿಎಂಎಲ್ಎ) ಅಡಿ ಅಪರಾಧ ಅಲ್ಲವೇ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಸಚಿವರಾದ ಹೆಚ್‌.ಕೆ ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಸತೀಶ್ ಜಾರಕಿಹೊಳಿ ಜೊತೆ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್, ಆರ್‌. ಅಶೋಕ್ ಲೊಟ್ಟೆಗೊಲ್ಲಹಳ್ಳಿಯ ಜಮೀನನ್ನು ಅಕ್ರಮ ಡಿನೋಟಿಫೈ ಮಾಡಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಲೊಟ್ಟೆಗೊಲ್ಲಹಳ್ಳಿಯ ಸರ್ವೆ ನಂಬರ್ 10/1, 10/11 ಎಫ್1 ಮತ್ತು 10/11 ಎಫ್ 2ರ 32 ಗುಂಟೆ ಜಮೀನು ನೂರಾರು ಕೋಟಿ ರೂ.ಬೆಲೆ ಬಾಳುತ್ತದೆ. ಈ ಜಮೀನಿಗೆ ಸಂಬಂಧಿಸಿದಂತೆ ಬಿಡಿಎ 24/2/1977ರಲ್ಲಿ ಅಧಿಸೂಚನೆ ಹೊರಡಿಸಿತ್ತು. 27/2/1977ರಂದು ಮತ್ತೊಂದು ಅಧಿಸೂಚನೆ ಹಾಗೂ 31/8/1978ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.

ಇದಾದ ನಂತರ 26/2/2003 ಹಾಗೂ 12/11/2007ರಂದು ಎರಡು ಶುದ್ಧ ಕ್ರಯ ಪತ್ರದ ಮೂಲಕ ಈ ಬಿಡಿಎ ಮಾಲಕತ್ವದ ಅಧಿಸೂಚಿತ ಜಾಗವನ್ನು ಮೂಲ ಮಾಲಕರಿಂದ ಅಶೋಕ್ ಖರೀದಿ ಮಾಡಿದ್ದಾರೆ. 16/10/2009ರಂದು ರಾಮಸ್ವಾಮಿ ಎಂಬವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಜಮೀನನ್ನು ಡಿನೋಟಿಫೈ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆ ಪತ್ರದ ಮೇಲೆ ‘ಕೂಡಲೆ ಕಡತದಲ್ಲಿ ಮಂಡಿಸಿ’ ಎಂದು ಷರಾ ನಮೂದಿಸಿ ಯಡಿಯೂರಪ್ಪ ಆದೇಶ ನೀಡಿದ್ದಾರೆ ಎಂದು ಪರಮೇಶ್ವರ್ ವಿವರಿಸಿದ್ದಾರೆ.

ಅಲ್ಲದೇ, ಎರಡೇ ತಿಂಗಳಲ್ಲಿ ಆ ಜಮೀನನ್ನು ಡಿನೋಟಿಫೈ ಮಾಡಲಾಗುತ್ತದೆ. ಆನಂತರ, ನಿವೃತ್ತ ವಿಂಗ್ ಕಮಾಂಡರ್ ಜಿ.ವಿ.ಅತ್ರಿ ಎಂಬವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುತ್ತಾರೆ. ವಿಷಯ ಗಂಭೀರವಾಗುತ್ತಿದ್ದಂತೆ ಅಶೋಕ್ ಬಿಡಿಎ ಮಾಲಕತ್ವದಲ್ಲಿರುವ ಆ ಜಾಗವನ್ನು 27/8/2011ರಂದು ರಿಜಿಸ್ಟರ್ ಗಿಫ್ಟ್ ಡೀಡ್ ಮೂಲಕ ಸರ್ಕಾರಕ್ಕೆ ವಾಪಸ್ ಕೊಟ್ಟರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ: ಅಜಿತ್ ಬಣ ‘ಗಡಿಯಾರ’ ಚಿಹ್ನೆ ಬಳಸದಂತೆ ತಡೆಯಲು ಪ್ರಯತ್ನ ಮುಂದುವರಿಸಿದ ಶರದ್ ಪವಾರ್; ಸುಪ್ರೀಂ ಕೋರ್ಟಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...