Homeಕರ್ನಾಟಕಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದದ ಆಪಾದಿತ ಮುಡಾ ನಿವೇಶ ಹಂಚಿಕೆ ಅಕ್ರಮ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆ, ಪ್ರತಿಪಕ್ಷ ನಾಯಕ ಆರ್‌. ಅಶೋಕ್ ವಿರುದ್ದದ ಅಕ್ರಮ ಡಿನೋಟಿಫಿಕೇಷನ್ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ಬುಧವಾರ (ಅ.2) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ “ನಗರದ ಪ್ರತಿಷ್ಠಿತ ಆರ್‌.ಎಂ.ವಿ ಬಡಾವಣೆಯ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 32 ಗುಂಟೆ ಜಮೀನಿನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದ ಇಂದಿನ ಪ್ರತಿಪಕ್ಷ ನಾಯಕ ಆರ್‌. ಅಶೋಕ್, ಆ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಅವರು, ಈ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ವಿವಾದಕ್ಕೀಡಾಗುತ್ತಿದ್ದಂತೆ 2011ರಲ್ಲಿ ಅಶೋಕ್ ಅವರು ನೋಂದಾಯಿತ ದಾನಪತ್ರದ ಮೂಲಕ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಈ ಜಾಗದ ವಿಷಯದಲ್ಲಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ ಅತ್ರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಂದಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಅಶೋಕ್ ಜಮೀನನ್ನು ವಾಪಸ್ ಕೊಟ್ಟಿದ್ದ ಕಾರಣ ತನಿಖೆ ಅಗತ್ಯವಿಲ್ಲ ಎಂದು ಅತ್ರಿಯವರ ಅರ್ಜಿ ವಿಲೇವಾರಿ ಮಾಡಿತ್ತು. ಅಶೋಕ್ ಜೊತೆ ಅಂದಿನ ಸಿಎಂ ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪ ಅವರ ಪಾತ್ರ ಕೂಡ ಭೂಹಗರಣದಲ್ಲಿ ಇತ್ತು ಎಂದು ವಿವರಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆಯಲ್ಲವೇ?

ಅಕ್ರಮವಾಗಿ ಪಡೆದ ಜಮೀನನ್ನು ದಾನವಾಗಿ ವಾಪಸ್ ಕೊಡುವವರೆಗೆ (2003ರಿಂದ 2011) ಅದರಲ್ಲಿ 15 ಶೆಡ್, ಎರಡು ಕಾರ್ ಗ್ಯಾರೇಜ್ ಮತ್ತು ಗೋದಾಮು ನಿರ್ಮಿಸಿ ಕೋಟ್ಯಾಂತರ ರೂಪಾಯಿ ಬಾಡಿಗೆಯನ್ನು ಅಶೋಕ್ ಪಡೆದಿದ್ದಾರೆ. ಇದು ಹಣ ಅಕ್ರಮ ವರ್ಗಾವಣೆ (ತಡೆ) ಕಾಯ್ದೆ(ಪಿಎಂಎಲ್ಎ) ಅಡಿ ಅಪರಾಧ ಅಲ್ಲವೇ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಸಚಿವರಾದ ಹೆಚ್‌.ಕೆ ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಸತೀಶ್ ಜಾರಕಿಹೊಳಿ ಜೊತೆ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್, ಆರ್‌. ಅಶೋಕ್ ಲೊಟ್ಟೆಗೊಲ್ಲಹಳ್ಳಿಯ ಜಮೀನನ್ನು ಅಕ್ರಮ ಡಿನೋಟಿಫೈ ಮಾಡಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಲೊಟ್ಟೆಗೊಲ್ಲಹಳ್ಳಿಯ ಸರ್ವೆ ನಂಬರ್ 10/1, 10/11 ಎಫ್1 ಮತ್ತು 10/11 ಎಫ್ 2ರ 32 ಗುಂಟೆ ಜಮೀನು ನೂರಾರು ಕೋಟಿ ರೂ.ಬೆಲೆ ಬಾಳುತ್ತದೆ. ಈ ಜಮೀನಿಗೆ ಸಂಬಂಧಿಸಿದಂತೆ ಬಿಡಿಎ 24/2/1977ರಲ್ಲಿ ಅಧಿಸೂಚನೆ ಹೊರಡಿಸಿತ್ತು. 27/2/1977ರಂದು ಮತ್ತೊಂದು ಅಧಿಸೂಚನೆ ಹಾಗೂ 31/8/1978ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.

ಇದಾದ ನಂತರ 26/2/2003 ಹಾಗೂ 12/11/2007ರಂದು ಎರಡು ಶುದ್ಧ ಕ್ರಯ ಪತ್ರದ ಮೂಲಕ ಈ ಬಿಡಿಎ ಮಾಲಕತ್ವದ ಅಧಿಸೂಚಿತ ಜಾಗವನ್ನು ಮೂಲ ಮಾಲಕರಿಂದ ಅಶೋಕ್ ಖರೀದಿ ಮಾಡಿದ್ದಾರೆ. 16/10/2009ರಂದು ರಾಮಸ್ವಾಮಿ ಎಂಬವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಜಮೀನನ್ನು ಡಿನೋಟಿಫೈ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆ ಪತ್ರದ ಮೇಲೆ ‘ಕೂಡಲೆ ಕಡತದಲ್ಲಿ ಮಂಡಿಸಿ’ ಎಂದು ಷರಾ ನಮೂದಿಸಿ ಯಡಿಯೂರಪ್ಪ ಆದೇಶ ನೀಡಿದ್ದಾರೆ ಎಂದು ಪರಮೇಶ್ವರ್ ವಿವರಿಸಿದ್ದಾರೆ.

ಅಲ್ಲದೇ, ಎರಡೇ ತಿಂಗಳಲ್ಲಿ ಆ ಜಮೀನನ್ನು ಡಿನೋಟಿಫೈ ಮಾಡಲಾಗುತ್ತದೆ. ಆನಂತರ, ನಿವೃತ್ತ ವಿಂಗ್ ಕಮಾಂಡರ್ ಜಿ.ವಿ.ಅತ್ರಿ ಎಂಬವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುತ್ತಾರೆ. ವಿಷಯ ಗಂಭೀರವಾಗುತ್ತಿದ್ದಂತೆ ಅಶೋಕ್ ಬಿಡಿಎ ಮಾಲಕತ್ವದಲ್ಲಿರುವ ಆ ಜಾಗವನ್ನು 27/8/2011ರಂದು ರಿಜಿಸ್ಟರ್ ಗಿಫ್ಟ್ ಡೀಡ್ ಮೂಲಕ ಸರ್ಕಾರಕ್ಕೆ ವಾಪಸ್ ಕೊಟ್ಟರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ: ಅಜಿತ್ ಬಣ ‘ಗಡಿಯಾರ’ ಚಿಹ್ನೆ ಬಳಸದಂತೆ ತಡೆಯಲು ಪ್ರಯತ್ನ ಮುಂದುವರಿಸಿದ ಶರದ್ ಪವಾರ್; ಸುಪ್ರೀಂ ಕೋರ್ಟಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...