Homeಕರ್ನಾಟಕಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಇಂದು (ಸೆ.19) ದಾಖಲೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರು ಬಿಎಸ್​ವೈ ಹಾಗೂ ಹೆಚ್​ಡಿಕೆ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್​ಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯಪಾಲರು ಕೆಲ ಪ್ರಕರಣಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಪ್ಪು ಮಾಡಿದವರಿಗೆ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ. ಮಠದ ಹಳ್ಳಿ, ಗಂಗೇನಹಳ್ಳಿ ಬಡಾವಣೆ 7/1 ಬಿ, ಸಿ ಹಾಗೂ ಡಿ ಸರ್ವೆ ನಂಬರ್‌ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿರುತ್ತದೆ. ಇದನ್ನು ಡಿನೋಟಿಫೈ ಮಾಡಬೇಕು ಅಂತ ಯಾರೋ ರಾಜಶೇಖರಯ್ಯ ಅನ್ನೋರು ಅರ್ಜಿ ಕೊಡ್ತಾರೆ. ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 22.08.2007 ರಲ್ಲಿ ಅರ್ಜಿ ಬಂದ ಅದೇ ದಿನ ಸಿಎಂ ಆಗಿದ್ದ ಹೆಚ್‌ಡಿಕೆ ಡಿನೋಟಿಫೈ ಮಾಡಲು ಸೂಚಿಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.

ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು. ಯಾವುದು ಭೂ ಸ್ವಾಧೀನ ಆಗಿತ್ತೋ, ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಅನಿತಾ ಕುಮಾರಸ್ವಾಮಿ ತಾಯಿ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ, ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2010 ಜೂನ್ 5ರಂದು ರಂದು ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಹೇಳಿದರು.

ಡಿ ನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರಿಗೆ ಶುದ್ದ ಕ್ರಯಪತ್ರ ಆಗುತ್ತದೆ . ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಹೌದೋ ಅಲ್ವೋ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್‌ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದೀರ ಕುಮಾರಸ್ವಾಮಿಯವರೇ ಎಂದು ಆರೋಪಿಸಿದರು.

ಲೋಕಾಯುಕ್ತದವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ದ ಎಫ್​ಐಆರ್ ದಾಖಲಾಗಿ ಒಂಭತ್ತು ವರ್ಷಗಳಾಗಿದೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ? ಎಂದು ಪ್ರಶ್ನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಯಾವ ಜಮೀನನ್ನು ಡಿ-ನೋಟಿಫಿಕೇಷನ್ ಮಾಡಲು ಸಾಧ್ಯವೇ ಇಲ್ಲವೋ ಅದನ್ನು ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಇಬ್ಬರೂ ಸೇರಿಕೊಂಡು ಡಿ-ನೋಟಿಫೈ ಮಾಡಿದ್ದಾರೆ. ಈ ಲೂಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ಪಾಲು ಪಡೆದಿದ್ದಾರೆ? ಇದರ ಬಗ್ಗೆ ಇಬ್ಬರೂ ಉತ್ತರ ನೀಡಬೇಕು” ಎಂದರು.

ಸಚಿವ ಸಂತೋಷ್ ಲಾಡ್ ಮಾತನಾಡಿ “ದಾಖಲೆ ಸಮೇತ ನಾವು ಮಾಡಿದ ಆರೋಪಗಳಿಗೆ ಹೆಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯವರು ಉತ್ತರ ನೀಡಬೇಕು. ಡಿನೋಟಿಫಿಕೇಷನ್ ಅಕ್ರಮದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ : ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...