Homeಕರ್ನಾಟಕಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಇಂದು (ಸೆ.19) ದಾಖಲೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರು ಬಿಎಸ್​ವೈ ಹಾಗೂ ಹೆಚ್​ಡಿಕೆ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್​ಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯಪಾಲರು ಕೆಲ ಪ್ರಕರಣಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಪ್ಪು ಮಾಡಿದವರಿಗೆ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ. ಮಠದ ಹಳ್ಳಿ, ಗಂಗೇನಹಳ್ಳಿ ಬಡಾವಣೆ 7/1 ಬಿ, ಸಿ ಹಾಗೂ ಡಿ ಸರ್ವೆ ನಂಬರ್‌ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿರುತ್ತದೆ. ಇದನ್ನು ಡಿನೋಟಿಫೈ ಮಾಡಬೇಕು ಅಂತ ಯಾರೋ ರಾಜಶೇಖರಯ್ಯ ಅನ್ನೋರು ಅರ್ಜಿ ಕೊಡ್ತಾರೆ. ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 22.08.2007 ರಲ್ಲಿ ಅರ್ಜಿ ಬಂದ ಅದೇ ದಿನ ಸಿಎಂ ಆಗಿದ್ದ ಹೆಚ್‌ಡಿಕೆ ಡಿನೋಟಿಫೈ ಮಾಡಲು ಸೂಚಿಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.

ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು. ಯಾವುದು ಭೂ ಸ್ವಾಧೀನ ಆಗಿತ್ತೋ, ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಅನಿತಾ ಕುಮಾರಸ್ವಾಮಿ ತಾಯಿ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ, ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2010 ಜೂನ್ 5ರಂದು ರಂದು ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಹೇಳಿದರು.

ಡಿ ನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರಿಗೆ ಶುದ್ದ ಕ್ರಯಪತ್ರ ಆಗುತ್ತದೆ . ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಹೌದೋ ಅಲ್ವೋ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್‌ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದೀರ ಕುಮಾರಸ್ವಾಮಿಯವರೇ ಎಂದು ಆರೋಪಿಸಿದರು.

ಲೋಕಾಯುಕ್ತದವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ದ ಎಫ್​ಐಆರ್ ದಾಖಲಾಗಿ ಒಂಭತ್ತು ವರ್ಷಗಳಾಗಿದೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ? ಎಂದು ಪ್ರಶ್ನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಯಾವ ಜಮೀನನ್ನು ಡಿ-ನೋಟಿಫಿಕೇಷನ್ ಮಾಡಲು ಸಾಧ್ಯವೇ ಇಲ್ಲವೋ ಅದನ್ನು ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಇಬ್ಬರೂ ಸೇರಿಕೊಂಡು ಡಿ-ನೋಟಿಫೈ ಮಾಡಿದ್ದಾರೆ. ಈ ಲೂಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ಪಾಲು ಪಡೆದಿದ್ದಾರೆ? ಇದರ ಬಗ್ಗೆ ಇಬ್ಬರೂ ಉತ್ತರ ನೀಡಬೇಕು” ಎಂದರು.

ಸಚಿವ ಸಂತೋಷ್ ಲಾಡ್ ಮಾತನಾಡಿ “ದಾಖಲೆ ಸಮೇತ ನಾವು ಮಾಡಿದ ಆರೋಪಗಳಿಗೆ ಹೆಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯವರು ಉತ್ತರ ನೀಡಬೇಕು. ಡಿನೋಟಿಫಿಕೇಷನ್ ಅಕ್ರಮದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ : ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...