Homeಮುಖಪುಟಜನರ ಭಕ್ತಿಯೊಂದಿಗೆ ಬಿಜೆಪಿ ಆಟವಾಡುತ್ತಿದೆ: ಪ್ರಿಯಾಂಕಾ ಗಾಂಧಿ

ಜನರ ಭಕ್ತಿಯೊಂದಿಗೆ ಬಿಜೆಪಿ ಆಟವಾಡುತ್ತಿದೆ: ಪ್ರಿಯಾಂಕಾ ಗಾಂಧಿ

ಅಯೋಧ್ಯೆಯಲ್ಲಿ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವ ವ್ಯಾಪ್ತಿಯಲ್ಲಿ ಭೂಮಿಯನ್ನು ಕಬಳಿಕೆ ಮಾಡಲಾಗುತ್ತಿದೆ ಎಂಬ ವರದಿಗಳು ಹೊರಬಂದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಮಮಂದಿರ ಟ್ರಸ್ಟ್‌ನವರು ಮತ್ತು ಸರ್ಕಾರಿ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳಿವೆ. ಈ ಭ್ರಷ್ಟಾಚಾರದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ರಾಮಮಂದಿರ ಟ್ರಸ್ಟ್‌ಗಾಗಿ ಏನಾದರೂ ದಾನ ಮಾಡಿದ ದೇಶದ ಅಸಂಖ್ಯಾತ ಜನರ ಭಕ್ತಿಯನ್ನು ರಾಜ್ಯದ ಆಡಳಿತ ಪಕ್ಷವು “ಲೂಟಿ” ಮಾಡುತ್ತಿದೆ. ಜನರ ಭಕ್ತಿಯೊಂದಿಗೆ ಆಟವಾಡುತ್ತಿದೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ದೇಶದ ಬಹುತೇಕ ಪ್ರತಿಯೊಂದು ಮನೆಯವರು ರಾಮಮಂದಿರ ಟ್ರಸ್ಟ್‌ಗೆ ಏನನ್ನಾದರೂ ದೇಣಿಗೆ ನೀಡಿದ್ದಾರೆ. ಮನೆ-ಮನೆಗೆ ತೆರಳಿ ಪ್ರಚಾರ ನಡೆಸಲಾಗಿದೆ. ಇದು ಭಕ್ತಿಯ ವಿಷಯ ಮತ್ತು ಅದರೊಂದಿಗೆ ಆಟವಾಡಲಾಗುತ್ತಿದೆ. ಖರೀದಿಸಲು ಸಾಧ್ಯವಾಗದ ದಲಿತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ” ಎಂದು ದೂರಿದ್ದಾರೆ.

ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ನಂತರ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಬಳಿಕ ಶಾಸಕರು, ಮೇಯರ್‌ಗಳು, ಆಯುಕ್ತರ ಸಂಬಂಧಿಕರು, ಎಸ್‌ಡಿಎಂ ಮತ್ತು ಡಿಐಜಿ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ ಎಂದು ವರದಿಗಳಾಗಿವೆ ಎಂದು ತಿಳಿಸಿದ್ದಾರೆ.

ವರದಿ ಬಂದ ಕೂಡಲೇ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಹಿತಿ) ನವನೀತ್ ಸೆಹಗಲ್ ಅವರು ಬುಧವಾರ ಪಿಟಿಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುವಂತೆ ಕಂದಾಯ ಇಲಾಖೆಗೆ ಆದೇಶಿಸಿದ್ದಾರೆ” ಎಂದು ಸೆಹಗಲ್‌ ಹೇಳಿದ್ದಾರೆ.

“ಹೌದು, ಯುಪಿ ಸರ್ಕಾರವು ಆರೋಪಗಳ ತನಿಖೆಗಾಗಿ ತನಿಖಾ ಆಯೋಗವನ್ನು ನೇಮಿಸುತ್ತಿದೆ, ಯಾರು ತನಿಖೆಯನ್ನು ನಡೆಸುತ್ತಾರೆ? ಇವರು ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿಗಳಾಗಿದ್ದಾರೆ. ಇದರ ಬದಲಿಗೆ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಈ ಪ್ರಕರಣವನ್ನು “ಭೂ ಹಗರಣ” ಎಂದು ಕರೆದಿದ್ದಾರೆ. “ಬಿಜೆಪಿಯೊಂದಿಗೆ ಸಂಪರ್ಕದಲ್ಲಿರುವವರು ಅಯೋಧ್ಯೆ ನಗರದೊಳಗೆ ಭೂಮಿಯನ್ನು ಬಹಿರಂಗವಾಗಿ ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...