HomeUncategorizedಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣದ ವಿಚಾರಣೆ ಹೊಣೆ ಸಿಐಡಿಗೆ ಹಸ್ತಾಂತರ

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣದ ವಿಚಾರಣೆ ಹೊಣೆ ಸಿಐಡಿಗೆ ಹಸ್ತಾಂತರ

- Advertisement -
- Advertisement -

ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಪ್ರಕರಣದಲ್ಲಿ ಪಕ್ಷದ ಕಾರ್ಯಕರ್ತನಿಂದ ಆರೋಪ ಹೊರಿಸಲಾಗಿದ್ದು, ಅಸ್ವಾಭಾವಿಕ ಅಪರಾಧ ಸೇರಿದಂತೆ ಆರೋಪದ ಮೇಲೆ ರೇವಣ್ಣ ಬಂಧನವಾಗಿದೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಅವರನ್ನು ಹಾಸನದಲ್ಲಿ ಬಂಧಿಸಲಾಗಿದೆ.

ಪಕ್ಷದ ಕಾರ್ಯಕರ್ತನ ಮೇಲಿನ ಲೈಂಗಿಕ ದೌರ್ಜನ್ಯ ಸೇರಿದಂತೆ ಐಪಿಸಿಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 377, 342, 506, 34 ಐಪಿಸಿ ಕಲಂಗಳ ಅಡಿಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಕಡತವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಗಿದೆ, ತಕ್ಷಣವೇ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಬೇಕು ಎಂದು ಅಧಿಕೃತ ಸಂದೇಶದಲ್ಲಿ ಪೊಲೀಸ್ ಮಹಾನಿರ್ದೇಶಕರಿಂದ ಸಿಐಡಿ ಮತ್ತು ಹಾಸನದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗಿದೆ ಎಮದು ತಿಳಿದುಬಂದಿದೆ.

ಈ ನಿರ್ದೇಶನವು ಪ್ರಕರಣದ ಕಡತವನ್ನು ಕಳುಹಿಸಲು ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ಮತ್ತು ಸಂಬಂಧಪಟ್ಟ ತನಿಖಾ ಅಧಿಕಾರಿಗೆ ಖುದ್ದಾಗಿ ಹಸ್ತಾಂತರಿಸುವಂತೆ ಸೂಚನೆ ನೀಡಿದೆ.  ಹೆಚ್ಚಿನ ತನಿಖೆಗೆ ವ್ಯವಸ್ಥೆ ಮಾಡಲು ಮತ್ತು ವಿವರವಾದ ವರದಿಯನ್ನು ಸಲ್ಲಿಸಲು ಕೇಳಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, “ಯುವಕನ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಸೂರಜ್‌ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ವಿವರಿಸಿದರು.

“ಇದೇ ರೀತಿಯ ಪ್ರಕರಣಗಳ ಸರಣಿಯನ್ನು ಸಿಐಡಿಗೆ ನೀಡಲಾಯಿತು; ಇದನ್ನು ಸಿಐಡಿಗೂ ನೀಡಲಾಗುತ್ತಿದೆ, ಆ ಬಗ್ಗೆ ಏನು ಕ್ರಮ ಕೈಗೊಳ್ಳಬೇಕೋ, ಅದನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಆದರೆ, ಆರೋಪಿ ಸೂರಜ್ ರೇವಣ್ಣ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ‘ದೂರು ಬಂದಿದೆ, ಅದರ ಆಧಾರದ ಮೇಲೆ ಕಾನೂನು ಪ್ರಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳಲಾಗುತ್ತಿದೆ. ಅದಲ್ಲದೆ, ಅವರು ಆರೋಪಿಸಿರುವ ಯಾವುದೇ ರಾಜಕೀಯ ಷಡ್ಯಂತ್ರದ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

ಸೂರಜ್ ಅವರನ್ನು ಬಂಧಿಸುವ ಮೊದಲು ಹಾಸನದ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಅಪರಾಧ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ವಿಚಾರಣೆ ನಡೆಸಲಾಯಿತು. ನಂತರ ಅವರನ್ನು ಹಾಸನ ವೈದ್ಯಕೀಯ ಸಂಸ್ಥೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆ ನಂತರ ನಂತರ ಜೆಡಿ(ಎಸ್) ಎಂಎಲ್‌ಸಿ ವಿರುದ್ಧ ಐಪಿಸಿ ಸೆಕ್ಷನ್ 377 (ಬಲವಂತದ ಲೈಂಗಿಕ ಕಿರುಕುಳ), 342 (ತಪ್ಪಾದ ಬಂಧನ), ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಶನಿವಾರ ಸಂಜೆ ಪ್ರಕರಣ ದಾಖಲಿಸಲಾಗಿದೆ.

ಆದರೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಮೇಲಿನ ಆರೋಪವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. “ವ್ಯಕ್ತಿ ನಮ್ಮಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಸುಳ್ಳು ದೂರು ದಾಖಲಿಸಿದ್ದಾರೆ” ಎಂದು ಆರೋಪಿಸಿದರು.

ಶುಕ್ರವಾರ, ಪೊಲೀಸರು ಜೆಡಿ (ಎಸ್) ಕಾರ್ಯಕರ್ತನ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಿದ್ದಾರೆ. ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ದೂರು ನೀಡಿದ್ದಾರೆ. ಪಕ್ಷದ ಕಾರ್ಯಕರ್ತ ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯದ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಕುಮಾರ್ ದೂರಿದ್ದಾರೆ. ಈ ವ್ಯಕ್ತಿ ಆರಂಭದಲ್ಲಿ 5 ಕೋಟಿಗೆ ಬೇಡಿಕೆಯಿಟ್ಟಿದ್ದು, ನಂತರ ಅದನ್ನು 2 ಕೋಟಿಗೆ ಇಳಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸೂರಜ್ ಅವರ ಸಹೋದರ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಕಳೆದ ತಿಂಗಳು ಜರ್ಮನಿಯಿಂದ ಹಿಂದಿರುಗಿದ ನಂತರ ಅವರನ್ನು ಬಂಧಿಸಲಾಯಿತು. ಹಾಸನ ಲೋಕಸಭಾ ಕ್ಷೇತ್ರದಿಂದ ಸೋತಿದ್ದ ಪ್ರಜ್ವಲ್, ಜರ್ಮನಿಯಿಂದ ಮರಳಿದ ನಂತರ ಮೇ 31 ರಂದು ಬಂಧನಕ್ಕೊಳಗಾದರು. ಅವರ ಪೋಷಕರಾದ ಎಚ್ ಡಿ ರೇವಣ್ಣ ಮತ್ತು ಭವಾನಿ ಅವರು ಅಪಹರಣ ಆರೋಪದ ಮೇಲೆ ಜಾಮೀನಿನ ಮೇಲೆ ಹೊರಗಿದ್ದಾರೆ.

ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...