Homeಕರ್ನಾಟಕಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಂತರ, ರಾಜ್ಯದ ಮತ್ತೋರ್ವ ಪ್ರಭಾವಿ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗುರುವಾರ ತಡರಾತ್ರಿ, ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಬಿಎಸ್‌ವೈ ಬಾಲಕಿಗೆ ದೌರ್ಜನ್ಯ ನೀಡಿದ್ದಾರೆ ಎನ್ನಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ತಾಯಿ ದೂರು ನೀಡಿದ್ದಾರೆ.

ಪೋಕ್ಸೋ ಹಾಗೂ 354(A) ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಬಾಲಕಿ ಜತೆಗೆ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಆ ನಂತರ ಅಪ್ರಾಪ್ತೆಯನ್ನ ಕೋಣೆ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯು ಅಪ್ರಾಪ್ತೆಯ ಖಾಸಗಿ ಅಂಗಾಗಳನ್ನ ಮುಟ್ಟಿರುವ ಬಗ್ಗೆ ದೂರು ದಾಖಲಿಸಲಾಗಿದೆ. ಕೊಠಡಿಯಿಂದ ಹೊರಬಂದ ಯಡಿಯೂರಪ್ಪ ಅವರು ತಾಯಿಯ ಬಳಿ ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಭಾವಿ ರಾಜಕಾರಣಿ, ನಾಲ್ಕು ಸಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ನಡೆಸಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇದೀಗ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಗುರುವಾರ ತಡರಾತ್ರಿ ಎಫ್‌ಐಆರ್‌ ದಾಖಲಾಗಿದೆ.

ಗುರುವಾರ ಸಂಜೆ 6 ಗಂಟೆಯ ವೇಳೆಗೆ ಸಂತ್ರಸ್ತ ತಾಯಿ ಮತ್ತು ಮಗಳು ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಲು ಯತ್ನಿಸಿದ್ದಾರೆ. ಆದರೆ, ಮಹಿಳೆ ಈ ಹಿಂದೆ ಕೂಡ ಹಕವರ ವಿರುದ್ಧ ದೂರು ದಾಖಲಿಸಿದ್ದರು ಎನ್ನುವ ಕಾರಣ ನೀಡಿ, ಪೊಲೀಸರು ತಕ್ಷಣವೇ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ತಾಯಿ ಮತ್ತು ಮಗಳು ತಮಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕು ಎಂದು ಪಟ್ಟು ಹಿಡಿದಿದ್ದರಿಂದ, ಮಹಿಳಾಪರ ಹೋರಾಟಗಾರರು ಒತ್ತಡ ಹೇರಿದ ನಂತರ ರಾತ್ರಿ 12 ಗಂಟೆಯ ವೇಳೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಪೋಕ್ಸೋ ಕಾನೂನಿನ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಯಡಿಯೂರಪ್ಪ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆಯ ಸೆಕ್ಷನ್‌ 8ರ ಪ್ರಕಾರ ಆರೋಪ ಸಾಭೀತಾದಲ್ಲಿ ಕನಿಷ್ಠ ಮೂರು ವರ್ಷ, ಕೆಲವೊಮ್ಮೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಆಗಬಹುದು. ಜೊತೆಗೆ ದಂಡವನ್ನೂ ವಿಧಿಸಬಹುದು.

ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳಕ್ಕೆ ಶಿಕ್ಷೆಯನ್ನು ವಿಧಿಸುತ್ತದೆ. ಇಷ್ಟವಿಲ್ಲದಿದ್ದರೂ ಲೈಂಗಿಕ ಅಭಿವ್ಯಕ್ತಿಯನ್ನು ಮಾಡುವುದು, ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಅಥವಾ ವಿನಂತಿಯನ್ನು ಮಾಡುವುದು, ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲವಾದದ್ದನ್ನು ತೋರಿಸುವುದು ಶಿಕ್ಷಾರ್ಹ ಅಪರಾಧವೆಂದು ಈ ಸೆಕ್ಷನ್ ಹೇಳುತ್ತದೆ.

ದೂರಿನಲ್ಲಿ ಏನಿದೆ?

ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಸಂಬಂಧ ನ್ಯಾಯ ಒದಗಿಸುವಂತೆ ಕೋರಿ, ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು 2024ರ ಫೆಬ್ರುವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಬಾಲಕಿ ಹಾಗೂ ತಾಯಿ ಹೋಗಿದ್ದರು. ಆ ವೇಳೆ 9 ನಿಮಿಷಗಳ ಕಾಲ ಯಡಿಯೂರಪ್ಪ ಇವರೊಂದಿಗೆ ಮಾತನಾಡಿದ್ದರು. ಇಬ್ಬರಿಗೂ ಟೀ ಕುಡಿಸಿದ್ದರು. ಬಾಲಕಿಯು ಯಡಿಯೂರಪ್ಪನವರನ್ನು ತಾತಾ ಎಂದು ಕರೆಯುತ್ತಿದ್ದರು. ಯಡಿಯೂರಪ್ಪ ಬಾಲಕಿಯ ಕೈ ಹಿಡಿದುಕೊಂಡೇ ಮಾತನಾಡುತ್ತಿದ್ದರು. ಬಾಲಕಿಯ ತಾಯಿ ಮಾಜಿ ಮುಖ್ಯಮಂತ್ರಿಯನ್ನು ಅಪ್ಪಾಜಿ ಎಂದು ಸಂಬೋಧಿಸುತ್ತಿದ್ದರು. ಆ ವೇಳೆ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದ ಯಡಿಯೂರಪ್ಪ, ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡು ಇದ್ದರು. ಬಾಲಕಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಯಡಿಯೂರಪ್ಪ ಹೊರಗೆ ಬಿಟ್ಟಿಲ್ಲ. ಆ ವೇಳೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ. ಬಾಲಕಿಯು ರೂಮಿನಿಂದ ಓಡಿಬಂದು ತಾಯಿಗೆ ವಿಷಯವನ್ನು ತಿಳಿಸಿದ್ದಾರೆ. ‘ಹೀಗೇಕೆ ಮಾಡಿದಿರಿ?’ ಎಂದು ತಾಯಿ ಪ್ರಶ್ನಿಸಿದ್ದಾರೆ. “ರೇಪ್‌ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದಿದ್ದಾರೆ. ತಕ್ಷಣವೇ ಯಡಿಯೂರಪ್ಪ ಕ್ಷಮೆ ಯಾಚಿಸುತ್ತಾ, “ಈ ವಿಚಾರವನ್ನು ಹೊರಗಡೆ ಎಲ್ಲಿಯೂ ಹೇಳಬಾರದು” ಎಂದು ತಡೆಯಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳಲು ಹೋದಾಗ ಲೈಂಗಿಕ ಕಿರುಕುಳ ನೀಡಿರುವ ಯಡಿಯೂರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ಪ್ರಸಾರವಾಗದಂತೆ ಬಿಎಸ್‌ವೈ ಬೆಂಬಲಿಗರ ಯತ್ನ:

ಯಡಿಯೂರಪ್ಪನವರ ವಿರುದ್ಧ ಸಂತ್ರಸ್ತ ಬಾಲಕಿ ಮತ್ತು ತಾಯಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದನ್ನು ತಿಳಿದ ಅನೇಕ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು ತಡರಾತ್ರಿಯೇ ಪೊಲೀಸ್ ಠಾಣೆಗೆ ಧಾವಿಸಿದ್ದರು. ಆದರೆ, ‘ಈದಿನ.ಕಾಂ’ ಸೇರಿದಂತೆ ಕೆಲ ಜನಪರ ಇಂಗ್ಲಿಷ್ ಮಾಧ್ಯಮಗಳು ಮಾತ್ರ ಸಂಪೂರ್ಣವಾಗಿ ವರದಿ ಮಾಡಿದ್ದು, ರಾಜ್ಯದ ಪ್ರಮುಖ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಬೇಕಂತಲೇ ನಿರ್ಲಕ್ಷ್ಯ ಮಾಡಿವೆ; ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅನಿವಾರ್ಯವಾಗಿ ಕೆಲ ಮಾಧ್ಯಮಗಳು ಸುದ್ದಿ ಮಾಡಿವೆ.

ಪೊಲೀಸ್ ಠಾಣೆಯ ಎದುರು ಜನ ಜಮಾಯಿಸದಂತೆ ರಸ್ತೆ ಬದಿಯಲ್ಲಿ ನಿಂತಿದ್ದ ಮಾಧ್ಯಮಗಳ ವಾಹನಗಳನ್ನು ಮತ್ತು ಪತ್ರಕರ್ತರನ್ನು ತೆರವು ಮಾಡಿಸಲಾಯಿತು. ಜೊತೆಗೆ ಬಿಎಸ್‌ವೈ ಬೆಂಬಲಿಗರು ಮಾಧ್ಯಮಗಳಲ್ಲಿ ವರದಿಯಾಗುವುದನ್ನು ತಡೆಯಲು ಠಾಣೆಯ ಬಳಿ ದೌಡಾಯಿಸಿದ್ದರು. ಬಿ.ಎಸ್.ಯಡಿಯೂರಪ್ಪನವರ ಬೆಂಬಲಿಗರು, ಮಾಧ್ಯಮದ ಪಿಆರ್‌ಒ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿ, “ಇದು ಸುಳ್ಳು ಪ್ರಕರಣ ದಾಖಲಿಸಲು ಬಂದಿದ್ದಾರೆ, ಯಾವುದೇ ಕಾರಣಕ್ಕೂ ವರದಿ ಮಾಡಬಾರದು” ಎಂದು ತಾಕೀತು ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಬಿಜೆಪಿ ಮುಖಂಡರಾದ ರುದ್ರೇಶ್ ಸೋಂಪುರ ಅವರು ಪತ್ರಕರ್ತರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯಗಳು ಕಂಡುಬಂದವು; ಸ್ಥಳದಲ್ಲಿ ಅವರು ಕೂಗಾಟ ಜೋರಾಗಿತ್ತು. ಲೈಂಗಿಕ ಕಿರುಕುಳ ಘಟನೆಯ ನಂತರದಲ್ಲಿ ಬಿಜೆಪಿಯ ವರಿಷ್ಠರಿಗೆ ಸಂತ್ರಸ್ತರು ದೂರು ನೀಡುವ ಪ್ರಯತ್ನವನ್ನೂ ಮಾಡಿದ್ದರೆಂದು ತಿಳಿದುಬಂದಿದೆ. ಆದರೆ ಯಾವುದೇ ಕ್ರಮ ಜರುಗಿಸದೆ ಇದ್ದರಿಂದ ಅಂತಿಮವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...