Homeಕರ್ನಾಟಕಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಂತರ, ರಾಜ್ಯದ ಮತ್ತೋರ್ವ ಪ್ರಭಾವಿ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗುರುವಾರ ತಡರಾತ್ರಿ, ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಬಿಎಸ್‌ವೈ ಬಾಲಕಿಗೆ ದೌರ್ಜನ್ಯ ನೀಡಿದ್ದಾರೆ ಎನ್ನಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ತಾಯಿ ದೂರು ನೀಡಿದ್ದಾರೆ.

ಪೋಕ್ಸೋ ಹಾಗೂ 354(A) ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಬಾಲಕಿ ಜತೆಗೆ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಆ ನಂತರ ಅಪ್ರಾಪ್ತೆಯನ್ನ ಕೋಣೆ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯು ಅಪ್ರಾಪ್ತೆಯ ಖಾಸಗಿ ಅಂಗಾಗಳನ್ನ ಮುಟ್ಟಿರುವ ಬಗ್ಗೆ ದೂರು ದಾಖಲಿಸಲಾಗಿದೆ. ಕೊಠಡಿಯಿಂದ ಹೊರಬಂದ ಯಡಿಯೂರಪ್ಪ ಅವರು ತಾಯಿಯ ಬಳಿ ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಭಾವಿ ರಾಜಕಾರಣಿ, ನಾಲ್ಕು ಸಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ನಡೆಸಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇದೀಗ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಗುರುವಾರ ತಡರಾತ್ರಿ ಎಫ್‌ಐಆರ್‌ ದಾಖಲಾಗಿದೆ.

ಗುರುವಾರ ಸಂಜೆ 6 ಗಂಟೆಯ ವೇಳೆಗೆ ಸಂತ್ರಸ್ತ ತಾಯಿ ಮತ್ತು ಮಗಳು ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಲು ಯತ್ನಿಸಿದ್ದಾರೆ. ಆದರೆ, ಮಹಿಳೆ ಈ ಹಿಂದೆ ಕೂಡ ಹಕವರ ವಿರುದ್ಧ ದೂರು ದಾಖಲಿಸಿದ್ದರು ಎನ್ನುವ ಕಾರಣ ನೀಡಿ, ಪೊಲೀಸರು ತಕ್ಷಣವೇ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ತಾಯಿ ಮತ್ತು ಮಗಳು ತಮಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕು ಎಂದು ಪಟ್ಟು ಹಿಡಿದಿದ್ದರಿಂದ, ಮಹಿಳಾಪರ ಹೋರಾಟಗಾರರು ಒತ್ತಡ ಹೇರಿದ ನಂತರ ರಾತ್ರಿ 12 ಗಂಟೆಯ ವೇಳೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಪೋಕ್ಸೋ ಕಾನೂನಿನ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಯಡಿಯೂರಪ್ಪ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆಯ ಸೆಕ್ಷನ್‌ 8ರ ಪ್ರಕಾರ ಆರೋಪ ಸಾಭೀತಾದಲ್ಲಿ ಕನಿಷ್ಠ ಮೂರು ವರ್ಷ, ಕೆಲವೊಮ್ಮೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಆಗಬಹುದು. ಜೊತೆಗೆ ದಂಡವನ್ನೂ ವಿಧಿಸಬಹುದು.

ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳಕ್ಕೆ ಶಿಕ್ಷೆಯನ್ನು ವಿಧಿಸುತ್ತದೆ. ಇಷ್ಟವಿಲ್ಲದಿದ್ದರೂ ಲೈಂಗಿಕ ಅಭಿವ್ಯಕ್ತಿಯನ್ನು ಮಾಡುವುದು, ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಅಥವಾ ವಿನಂತಿಯನ್ನು ಮಾಡುವುದು, ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲವಾದದ್ದನ್ನು ತೋರಿಸುವುದು ಶಿಕ್ಷಾರ್ಹ ಅಪರಾಧವೆಂದು ಈ ಸೆಕ್ಷನ್ ಹೇಳುತ್ತದೆ.

ದೂರಿನಲ್ಲಿ ಏನಿದೆ?

ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಸಂಬಂಧ ನ್ಯಾಯ ಒದಗಿಸುವಂತೆ ಕೋರಿ, ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು 2024ರ ಫೆಬ್ರುವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಬಾಲಕಿ ಹಾಗೂ ತಾಯಿ ಹೋಗಿದ್ದರು. ಆ ವೇಳೆ 9 ನಿಮಿಷಗಳ ಕಾಲ ಯಡಿಯೂರಪ್ಪ ಇವರೊಂದಿಗೆ ಮಾತನಾಡಿದ್ದರು. ಇಬ್ಬರಿಗೂ ಟೀ ಕುಡಿಸಿದ್ದರು. ಬಾಲಕಿಯು ಯಡಿಯೂರಪ್ಪನವರನ್ನು ತಾತಾ ಎಂದು ಕರೆಯುತ್ತಿದ್ದರು. ಯಡಿಯೂರಪ್ಪ ಬಾಲಕಿಯ ಕೈ ಹಿಡಿದುಕೊಂಡೇ ಮಾತನಾಡುತ್ತಿದ್ದರು. ಬಾಲಕಿಯ ತಾಯಿ ಮಾಜಿ ಮುಖ್ಯಮಂತ್ರಿಯನ್ನು ಅಪ್ಪಾಜಿ ಎಂದು ಸಂಬೋಧಿಸುತ್ತಿದ್ದರು. ಆ ವೇಳೆ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದ ಯಡಿಯೂರಪ್ಪ, ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡು ಇದ್ದರು. ಬಾಲಕಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಯಡಿಯೂರಪ್ಪ ಹೊರಗೆ ಬಿಟ್ಟಿಲ್ಲ. ಆ ವೇಳೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ. ಬಾಲಕಿಯು ರೂಮಿನಿಂದ ಓಡಿಬಂದು ತಾಯಿಗೆ ವಿಷಯವನ್ನು ತಿಳಿಸಿದ್ದಾರೆ. ‘ಹೀಗೇಕೆ ಮಾಡಿದಿರಿ?’ ಎಂದು ತಾಯಿ ಪ್ರಶ್ನಿಸಿದ್ದಾರೆ. “ರೇಪ್‌ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದಿದ್ದಾರೆ. ತಕ್ಷಣವೇ ಯಡಿಯೂರಪ್ಪ ಕ್ಷಮೆ ಯಾಚಿಸುತ್ತಾ, “ಈ ವಿಚಾರವನ್ನು ಹೊರಗಡೆ ಎಲ್ಲಿಯೂ ಹೇಳಬಾರದು” ಎಂದು ತಡೆಯಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳಲು ಹೋದಾಗ ಲೈಂಗಿಕ ಕಿರುಕುಳ ನೀಡಿರುವ ಯಡಿಯೂರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ಪ್ರಸಾರವಾಗದಂತೆ ಬಿಎಸ್‌ವೈ ಬೆಂಬಲಿಗರ ಯತ್ನ:

ಯಡಿಯೂರಪ್ಪನವರ ವಿರುದ್ಧ ಸಂತ್ರಸ್ತ ಬಾಲಕಿ ಮತ್ತು ತಾಯಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದನ್ನು ತಿಳಿದ ಅನೇಕ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು ತಡರಾತ್ರಿಯೇ ಪೊಲೀಸ್ ಠಾಣೆಗೆ ಧಾವಿಸಿದ್ದರು. ಆದರೆ, ‘ಈದಿನ.ಕಾಂ’ ಸೇರಿದಂತೆ ಕೆಲ ಜನಪರ ಇಂಗ್ಲಿಷ್ ಮಾಧ್ಯಮಗಳು ಮಾತ್ರ ಸಂಪೂರ್ಣವಾಗಿ ವರದಿ ಮಾಡಿದ್ದು, ರಾಜ್ಯದ ಪ್ರಮುಖ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಬೇಕಂತಲೇ ನಿರ್ಲಕ್ಷ್ಯ ಮಾಡಿವೆ; ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅನಿವಾರ್ಯವಾಗಿ ಕೆಲ ಮಾಧ್ಯಮಗಳು ಸುದ್ದಿ ಮಾಡಿವೆ.

ಪೊಲೀಸ್ ಠಾಣೆಯ ಎದುರು ಜನ ಜಮಾಯಿಸದಂತೆ ರಸ್ತೆ ಬದಿಯಲ್ಲಿ ನಿಂತಿದ್ದ ಮಾಧ್ಯಮಗಳ ವಾಹನಗಳನ್ನು ಮತ್ತು ಪತ್ರಕರ್ತರನ್ನು ತೆರವು ಮಾಡಿಸಲಾಯಿತು. ಜೊತೆಗೆ ಬಿಎಸ್‌ವೈ ಬೆಂಬಲಿಗರು ಮಾಧ್ಯಮಗಳಲ್ಲಿ ವರದಿಯಾಗುವುದನ್ನು ತಡೆಯಲು ಠಾಣೆಯ ಬಳಿ ದೌಡಾಯಿಸಿದ್ದರು. ಬಿ.ಎಸ್.ಯಡಿಯೂರಪ್ಪನವರ ಬೆಂಬಲಿಗರು, ಮಾಧ್ಯಮದ ಪಿಆರ್‌ಒ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿ, “ಇದು ಸುಳ್ಳು ಪ್ರಕರಣ ದಾಖಲಿಸಲು ಬಂದಿದ್ದಾರೆ, ಯಾವುದೇ ಕಾರಣಕ್ಕೂ ವರದಿ ಮಾಡಬಾರದು” ಎಂದು ತಾಕೀತು ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಬಿಜೆಪಿ ಮುಖಂಡರಾದ ರುದ್ರೇಶ್ ಸೋಂಪುರ ಅವರು ಪತ್ರಕರ್ತರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯಗಳು ಕಂಡುಬಂದವು; ಸ್ಥಳದಲ್ಲಿ ಅವರು ಕೂಗಾಟ ಜೋರಾಗಿತ್ತು. ಲೈಂಗಿಕ ಕಿರುಕುಳ ಘಟನೆಯ ನಂತರದಲ್ಲಿ ಬಿಜೆಪಿಯ ವರಿಷ್ಠರಿಗೆ ಸಂತ್ರಸ್ತರು ದೂರು ನೀಡುವ ಪ್ರಯತ್ನವನ್ನೂ ಮಾಡಿದ್ದರೆಂದು ತಿಳಿದುಬಂದಿದೆ. ಆದರೆ ಯಾವುದೇ ಕ್ರಮ ಜರುಗಿಸದೆ ಇದ್ದರಿಂದ ಅಂತಿಮವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...