Homeಕರ್ನಾಟಕಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಂತರ, ರಾಜ್ಯದ ಮತ್ತೋರ್ವ ಪ್ರಭಾವಿ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗುರುವಾರ ತಡರಾತ್ರಿ, ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಬಿಎಸ್‌ವೈ ಬಾಲಕಿಗೆ ದೌರ್ಜನ್ಯ ನೀಡಿದ್ದಾರೆ ಎನ್ನಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ತಾಯಿ ದೂರು ನೀಡಿದ್ದಾರೆ.

ಪೋಕ್ಸೋ ಹಾಗೂ 354(A) ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಬಾಲಕಿ ಜತೆಗೆ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಆ ನಂತರ ಅಪ್ರಾಪ್ತೆಯನ್ನ ಕೋಣೆ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯು ಅಪ್ರಾಪ್ತೆಯ ಖಾಸಗಿ ಅಂಗಾಗಳನ್ನ ಮುಟ್ಟಿರುವ ಬಗ್ಗೆ ದೂರು ದಾಖಲಿಸಲಾಗಿದೆ. ಕೊಠಡಿಯಿಂದ ಹೊರಬಂದ ಯಡಿಯೂರಪ್ಪ ಅವರು ತಾಯಿಯ ಬಳಿ ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಭಾವಿ ರಾಜಕಾರಣಿ, ನಾಲ್ಕು ಸಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ನಡೆಸಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇದೀಗ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಗುರುವಾರ ತಡರಾತ್ರಿ ಎಫ್‌ಐಆರ್‌ ದಾಖಲಾಗಿದೆ.

ಗುರುವಾರ ಸಂಜೆ 6 ಗಂಟೆಯ ವೇಳೆಗೆ ಸಂತ್ರಸ್ತ ತಾಯಿ ಮತ್ತು ಮಗಳು ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಲು ಯತ್ನಿಸಿದ್ದಾರೆ. ಆದರೆ, ಮಹಿಳೆ ಈ ಹಿಂದೆ ಕೂಡ ಹಕವರ ವಿರುದ್ಧ ದೂರು ದಾಖಲಿಸಿದ್ದರು ಎನ್ನುವ ಕಾರಣ ನೀಡಿ, ಪೊಲೀಸರು ತಕ್ಷಣವೇ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ತಾಯಿ ಮತ್ತು ಮಗಳು ತಮಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕು ಎಂದು ಪಟ್ಟು ಹಿಡಿದಿದ್ದರಿಂದ, ಮಹಿಳಾಪರ ಹೋರಾಟಗಾರರು ಒತ್ತಡ ಹೇರಿದ ನಂತರ ರಾತ್ರಿ 12 ಗಂಟೆಯ ವೇಳೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಪೋಕ್ಸೋ ಕಾನೂನಿನ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಯಡಿಯೂರಪ್ಪ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆಯ ಸೆಕ್ಷನ್‌ 8ರ ಪ್ರಕಾರ ಆರೋಪ ಸಾಭೀತಾದಲ್ಲಿ ಕನಿಷ್ಠ ಮೂರು ವರ್ಷ, ಕೆಲವೊಮ್ಮೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಆಗಬಹುದು. ಜೊತೆಗೆ ದಂಡವನ್ನೂ ವಿಧಿಸಬಹುದು.

ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳಕ್ಕೆ ಶಿಕ್ಷೆಯನ್ನು ವಿಧಿಸುತ್ತದೆ. ಇಷ್ಟವಿಲ್ಲದಿದ್ದರೂ ಲೈಂಗಿಕ ಅಭಿವ್ಯಕ್ತಿಯನ್ನು ಮಾಡುವುದು, ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಅಥವಾ ವಿನಂತಿಯನ್ನು ಮಾಡುವುದು, ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲವಾದದ್ದನ್ನು ತೋರಿಸುವುದು ಶಿಕ್ಷಾರ್ಹ ಅಪರಾಧವೆಂದು ಈ ಸೆಕ್ಷನ್ ಹೇಳುತ್ತದೆ.

ದೂರಿನಲ್ಲಿ ಏನಿದೆ?

ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಸಂಬಂಧ ನ್ಯಾಯ ಒದಗಿಸುವಂತೆ ಕೋರಿ, ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು 2024ರ ಫೆಬ್ರುವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಬಾಲಕಿ ಹಾಗೂ ತಾಯಿ ಹೋಗಿದ್ದರು. ಆ ವೇಳೆ 9 ನಿಮಿಷಗಳ ಕಾಲ ಯಡಿಯೂರಪ್ಪ ಇವರೊಂದಿಗೆ ಮಾತನಾಡಿದ್ದರು. ಇಬ್ಬರಿಗೂ ಟೀ ಕುಡಿಸಿದ್ದರು. ಬಾಲಕಿಯು ಯಡಿಯೂರಪ್ಪನವರನ್ನು ತಾತಾ ಎಂದು ಕರೆಯುತ್ತಿದ್ದರು. ಯಡಿಯೂರಪ್ಪ ಬಾಲಕಿಯ ಕೈ ಹಿಡಿದುಕೊಂಡೇ ಮಾತನಾಡುತ್ತಿದ್ದರು. ಬಾಲಕಿಯ ತಾಯಿ ಮಾಜಿ ಮುಖ್ಯಮಂತ್ರಿಯನ್ನು ಅಪ್ಪಾಜಿ ಎಂದು ಸಂಬೋಧಿಸುತ್ತಿದ್ದರು. ಆ ವೇಳೆ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದ ಯಡಿಯೂರಪ್ಪ, ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡು ಇದ್ದರು. ಬಾಲಕಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಯಡಿಯೂರಪ್ಪ ಹೊರಗೆ ಬಿಟ್ಟಿಲ್ಲ. ಆ ವೇಳೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ. ಬಾಲಕಿಯು ರೂಮಿನಿಂದ ಓಡಿಬಂದು ತಾಯಿಗೆ ವಿಷಯವನ್ನು ತಿಳಿಸಿದ್ದಾರೆ. ‘ಹೀಗೇಕೆ ಮಾಡಿದಿರಿ?’ ಎಂದು ತಾಯಿ ಪ್ರಶ್ನಿಸಿದ್ದಾರೆ. “ರೇಪ್‌ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದಿದ್ದಾರೆ. ತಕ್ಷಣವೇ ಯಡಿಯೂರಪ್ಪ ಕ್ಷಮೆ ಯಾಚಿಸುತ್ತಾ, “ಈ ವಿಚಾರವನ್ನು ಹೊರಗಡೆ ಎಲ್ಲಿಯೂ ಹೇಳಬಾರದು” ಎಂದು ತಡೆಯಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳಲು ಹೋದಾಗ ಲೈಂಗಿಕ ಕಿರುಕುಳ ನೀಡಿರುವ ಯಡಿಯೂರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ಪ್ರಸಾರವಾಗದಂತೆ ಬಿಎಸ್‌ವೈ ಬೆಂಬಲಿಗರ ಯತ್ನ:

ಯಡಿಯೂರಪ್ಪನವರ ವಿರುದ್ಧ ಸಂತ್ರಸ್ತ ಬಾಲಕಿ ಮತ್ತು ತಾಯಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದನ್ನು ತಿಳಿದ ಅನೇಕ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು ತಡರಾತ್ರಿಯೇ ಪೊಲೀಸ್ ಠಾಣೆಗೆ ಧಾವಿಸಿದ್ದರು. ಆದರೆ, ‘ಈದಿನ.ಕಾಂ’ ಸೇರಿದಂತೆ ಕೆಲ ಜನಪರ ಇಂಗ್ಲಿಷ್ ಮಾಧ್ಯಮಗಳು ಮಾತ್ರ ಸಂಪೂರ್ಣವಾಗಿ ವರದಿ ಮಾಡಿದ್ದು, ರಾಜ್ಯದ ಪ್ರಮುಖ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಬೇಕಂತಲೇ ನಿರ್ಲಕ್ಷ್ಯ ಮಾಡಿವೆ; ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅನಿವಾರ್ಯವಾಗಿ ಕೆಲ ಮಾಧ್ಯಮಗಳು ಸುದ್ದಿ ಮಾಡಿವೆ.

ಪೊಲೀಸ್ ಠಾಣೆಯ ಎದುರು ಜನ ಜಮಾಯಿಸದಂತೆ ರಸ್ತೆ ಬದಿಯಲ್ಲಿ ನಿಂತಿದ್ದ ಮಾಧ್ಯಮಗಳ ವಾಹನಗಳನ್ನು ಮತ್ತು ಪತ್ರಕರ್ತರನ್ನು ತೆರವು ಮಾಡಿಸಲಾಯಿತು. ಜೊತೆಗೆ ಬಿಎಸ್‌ವೈ ಬೆಂಬಲಿಗರು ಮಾಧ್ಯಮಗಳಲ್ಲಿ ವರದಿಯಾಗುವುದನ್ನು ತಡೆಯಲು ಠಾಣೆಯ ಬಳಿ ದೌಡಾಯಿಸಿದ್ದರು. ಬಿ.ಎಸ್.ಯಡಿಯೂರಪ್ಪನವರ ಬೆಂಬಲಿಗರು, ಮಾಧ್ಯಮದ ಪಿಆರ್‌ಒ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿ, “ಇದು ಸುಳ್ಳು ಪ್ರಕರಣ ದಾಖಲಿಸಲು ಬಂದಿದ್ದಾರೆ, ಯಾವುದೇ ಕಾರಣಕ್ಕೂ ವರದಿ ಮಾಡಬಾರದು” ಎಂದು ತಾಕೀತು ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಬಿಜೆಪಿ ಮುಖಂಡರಾದ ರುದ್ರೇಶ್ ಸೋಂಪುರ ಅವರು ಪತ್ರಕರ್ತರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯಗಳು ಕಂಡುಬಂದವು; ಸ್ಥಳದಲ್ಲಿ ಅವರು ಕೂಗಾಟ ಜೋರಾಗಿತ್ತು. ಲೈಂಗಿಕ ಕಿರುಕುಳ ಘಟನೆಯ ನಂತರದಲ್ಲಿ ಬಿಜೆಪಿಯ ವರಿಷ್ಠರಿಗೆ ಸಂತ್ರಸ್ತರು ದೂರು ನೀಡುವ ಪ್ರಯತ್ನವನ್ನೂ ಮಾಡಿದ್ದರೆಂದು ತಿಳಿದುಬಂದಿದೆ. ಆದರೆ ಯಾವುದೇ ಕ್ರಮ ಜರುಗಿಸದೆ ಇದ್ದರಿಂದ ಅಂತಿಮವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...