Homeಮುಖಪುಟಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

ಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಕಟ್ನಿಯಲ್ಲಿರುವ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರ ಗುಂಪು ಹದಿಹರೆಯದ ಯುವಕ ಮತ್ತು ಆತನ ಅಜ್ಜಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋ ವೈರಲ್ ಆದ ಬಳಿಕ, ವಿವಾದದ ನಡುವೆಯೇ ಒಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

2023 ರ ಅಕ್ಟೋಬರ್‌ನದ್ದು ಎನ್ನಲಾದ ವಿಡಿಯೊದಲ್ಲಿ ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ ಅವರು ಮಹಿಳೆ ಕುಸುಮ್ ವಂಸ್ಕರ್‌ ಮತ್ತು ಆಕೆಯ ಮೊಮ್ಮಗನನ್ನು ಕೋಲಿನಿಂದ ಹೊಡೆದು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸ್ ಅಧಿಕಾರಿಗಳ ಗುಂಪು ಬಾಲಕನನ್ನು ಥಳಿಸುತ್ತಿರುವುದನ್ನು ಮತ್ತು ಒದೆಯುತ್ತಿರುವುದನ್ನು ದಾಖಲಾಗಿದೆ.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ರಾಜ್ಯದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ನಾಯಕರು, ಈ ಘಟನೆಯನ್ನು ‘ದಲಿತರ ಮೇಲಿನ ದಬ್ಬಾಳಿಕೆ’ಗೆ ಉದಾಹರಣೆ ಎಂದು ಉಲ್ಲೇಖಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ದಲಿತರ ದಬ್ಬಾಳಿಕೆಯು ಬಿಜೆಪಿಯ ದೊಡ್ಡ ಅಸ್ತ್ರವಾಗಿದೆ” ಎಂದು ಆರೋಪಿಸಿ, ರಾಜಕೀಯ ದುರುದ್ದೇಶದ ಈ ಆಟ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು “ಭೀಕರ ಘಟನೆ” ಎಂದು ಕರೆದ ಅವರು, “ಬಿಜೆಪಿಯ ದುರಾಡಳಿತದಲ್ಲಿ ಮಧ್ಯಪ್ರದೇಶದ ದಲಿತರು ಭೀಕರ ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ. ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರೆ.

ಮಧ್ಯಪ್ರದೇಶ ಯುವ ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಸರ್ಕಾರವನ್ನು ಗುರಿಯಾಗಿಸಿದೆ, ಪೊಲೀಸರು “ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ” ಎಂದು ಹೇಳಿದರು.

ಅಧಿಕಾರಿ ಅರುಣಾ ವಾಗನೆ ಪ್ರಕಾರ, ಕುಸುಮ್ ವಂಸ್ಕರ್ ಅವರ ಮಗ ಮತ್ತು ದೀಪಕ್ ಅವರ ತಂದೆ ದೀಪಕ್ ವಂಸ್ಕರ್ ವಿರುದ್ಧ 19 ಪ್ರಕರಣಗಳಿವೆ. ಅವರು ರೈಲ್ವೆ ಪೊಲೀಸರಿಗೆ ಬೇಕಾಗಿದ್ದಾರೆ, ಅವನನ್ನು ಸೆರೆಹಿಡಿಯಲು 10,000 ರೂಪಾಯಿ ಬಹುಮಾನವನ್ನು ಘೋಷಿಸಲಾಗಿದೆ. ಅವನ ಇಡೀ ಕುಟುಂಬವು ಕಳ್ಳತನದಲ್ಲಿ ಬೆಂಬಲ ನೀಡುತ್ತಿತ್ತು, ಆದ್ದರಿಂದ ಅವನ ಕುಟುಂಬ ಸದಸ್ಯರನ್ನು ವಿಚಾರಣೆಗಾಗಿ ಕರೆತರಲಾಯಿತು ಎಂದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಂತರ, ದೀಪಕ್ ವಾಂಸ್ಕರ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಆಕ್ರೋಶದ ನಂತರ, ಜಬಲ್‌ಪುರ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಆರ್‌ಪಿ) ಅವರು ಸ್ಟೇಷನ್ ಇನ್‌ಚಾರ್ಜ್ ಅನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ಪೊಲೀಸ್ ವರಿಷ್ಠಾಧಿಕಾರಿ ಅಡಿಯಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ದೀಪಕ್ ವಂಸ್ಕರ್ ಕಳ್ಳತನ ಹಿನ್ನೆಲೆ ವ್ಯಕ್ತಿಯಾಗಿದ್ದು, 2017 ರಿಂದ ಕಣ್ಗಾವಲಿನಲ್ಲಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ದೂರು ದಾಖಲಾದರೆ ಪೊಲೀಸ್ ವಿಚಾರಣೆ ನಡೆಸಲಾಗುವುದು ಎಂದು ಕಟ್ನಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸೆಹ್ರಿಯಾ ತಿಳಿಸಿದ್ದಾರೆ.

“ವಿವಿಧ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಮೇಲ್ನೋಟಕ್ಕೆ ಇದು ಜಿಆರ್‌ಪಿ ಕಟ್ನಿ ಪ್ರಕರಣವೆಂದು ತೋರುತ್ತದೆ.. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಮತ್ತು ದೂರು ದಾಖಲಿಸಿದರೆ, ತನಿಖೆ ನಡೆಸಲಾಗುವುದು” ಎಂದು ಎಎಸ್‌ಪಿ ಸೆಹ್ರಿಯಾ ಹೇಳಿದರು.

ಇದನ್ನೂ ಓದಿ; ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...