Homeಮುಖಪುಟಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

ಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಕಟ್ನಿಯಲ್ಲಿರುವ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರ ಗುಂಪು ಹದಿಹರೆಯದ ಯುವಕ ಮತ್ತು ಆತನ ಅಜ್ಜಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋ ವೈರಲ್ ಆದ ಬಳಿಕ, ವಿವಾದದ ನಡುವೆಯೇ ಒಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

2023 ರ ಅಕ್ಟೋಬರ್‌ನದ್ದು ಎನ್ನಲಾದ ವಿಡಿಯೊದಲ್ಲಿ ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ ಅವರು ಮಹಿಳೆ ಕುಸುಮ್ ವಂಸ್ಕರ್‌ ಮತ್ತು ಆಕೆಯ ಮೊಮ್ಮಗನನ್ನು ಕೋಲಿನಿಂದ ಹೊಡೆದು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸ್ ಅಧಿಕಾರಿಗಳ ಗುಂಪು ಬಾಲಕನನ್ನು ಥಳಿಸುತ್ತಿರುವುದನ್ನು ಮತ್ತು ಒದೆಯುತ್ತಿರುವುದನ್ನು ದಾಖಲಾಗಿದೆ.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ರಾಜ್ಯದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ನಾಯಕರು, ಈ ಘಟನೆಯನ್ನು ‘ದಲಿತರ ಮೇಲಿನ ದಬ್ಬಾಳಿಕೆ’ಗೆ ಉದಾಹರಣೆ ಎಂದು ಉಲ್ಲೇಖಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ದಲಿತರ ದಬ್ಬಾಳಿಕೆಯು ಬಿಜೆಪಿಯ ದೊಡ್ಡ ಅಸ್ತ್ರವಾಗಿದೆ” ಎಂದು ಆರೋಪಿಸಿ, ರಾಜಕೀಯ ದುರುದ್ದೇಶದ ಈ ಆಟ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು “ಭೀಕರ ಘಟನೆ” ಎಂದು ಕರೆದ ಅವರು, “ಬಿಜೆಪಿಯ ದುರಾಡಳಿತದಲ್ಲಿ ಮಧ್ಯಪ್ರದೇಶದ ದಲಿತರು ಭೀಕರ ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ. ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರೆ.

ಮಧ್ಯಪ್ರದೇಶ ಯುವ ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಸರ್ಕಾರವನ್ನು ಗುರಿಯಾಗಿಸಿದೆ, ಪೊಲೀಸರು “ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ” ಎಂದು ಹೇಳಿದರು.

ಅಧಿಕಾರಿ ಅರುಣಾ ವಾಗನೆ ಪ್ರಕಾರ, ಕುಸುಮ್ ವಂಸ್ಕರ್ ಅವರ ಮಗ ಮತ್ತು ದೀಪಕ್ ಅವರ ತಂದೆ ದೀಪಕ್ ವಂಸ್ಕರ್ ವಿರುದ್ಧ 19 ಪ್ರಕರಣಗಳಿವೆ. ಅವರು ರೈಲ್ವೆ ಪೊಲೀಸರಿಗೆ ಬೇಕಾಗಿದ್ದಾರೆ, ಅವನನ್ನು ಸೆರೆಹಿಡಿಯಲು 10,000 ರೂಪಾಯಿ ಬಹುಮಾನವನ್ನು ಘೋಷಿಸಲಾಗಿದೆ. ಅವನ ಇಡೀ ಕುಟುಂಬವು ಕಳ್ಳತನದಲ್ಲಿ ಬೆಂಬಲ ನೀಡುತ್ತಿತ್ತು, ಆದ್ದರಿಂದ ಅವನ ಕುಟುಂಬ ಸದಸ್ಯರನ್ನು ವಿಚಾರಣೆಗಾಗಿ ಕರೆತರಲಾಯಿತು ಎಂದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಂತರ, ದೀಪಕ್ ವಾಂಸ್ಕರ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಆಕ್ರೋಶದ ನಂತರ, ಜಬಲ್‌ಪುರ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಆರ್‌ಪಿ) ಅವರು ಸ್ಟೇಷನ್ ಇನ್‌ಚಾರ್ಜ್ ಅನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ಪೊಲೀಸ್ ವರಿಷ್ಠಾಧಿಕಾರಿ ಅಡಿಯಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ದೀಪಕ್ ವಂಸ್ಕರ್ ಕಳ್ಳತನ ಹಿನ್ನೆಲೆ ವ್ಯಕ್ತಿಯಾಗಿದ್ದು, 2017 ರಿಂದ ಕಣ್ಗಾವಲಿನಲ್ಲಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ದೂರು ದಾಖಲಾದರೆ ಪೊಲೀಸ್ ವಿಚಾರಣೆ ನಡೆಸಲಾಗುವುದು ಎಂದು ಕಟ್ನಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸೆಹ್ರಿಯಾ ತಿಳಿಸಿದ್ದಾರೆ.

“ವಿವಿಧ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಮೇಲ್ನೋಟಕ್ಕೆ ಇದು ಜಿಆರ್‌ಪಿ ಕಟ್ನಿ ಪ್ರಕರಣವೆಂದು ತೋರುತ್ತದೆ.. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಮತ್ತು ದೂರು ದಾಖಲಿಸಿದರೆ, ತನಿಖೆ ನಡೆಸಲಾಗುವುದು” ಎಂದು ಎಎಸ್‌ಪಿ ಸೆಹ್ರಿಯಾ ಹೇಳಿದರು.

ಇದನ್ನೂ ಓದಿ; ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...