Homeಮುಖಪುಟಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

ಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಕಟ್ನಿಯಲ್ಲಿರುವ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರ ಗುಂಪು ಹದಿಹರೆಯದ ಯುವಕ ಮತ್ತು ಆತನ ಅಜ್ಜಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋ ವೈರಲ್ ಆದ ಬಳಿಕ, ವಿವಾದದ ನಡುವೆಯೇ ಒಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

2023 ರ ಅಕ್ಟೋಬರ್‌ನದ್ದು ಎನ್ನಲಾದ ವಿಡಿಯೊದಲ್ಲಿ ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ ಅವರು ಮಹಿಳೆ ಕುಸುಮ್ ವಂಸ್ಕರ್‌ ಮತ್ತು ಆಕೆಯ ಮೊಮ್ಮಗನನ್ನು ಕೋಲಿನಿಂದ ಹೊಡೆದು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸ್ ಅಧಿಕಾರಿಗಳ ಗುಂಪು ಬಾಲಕನನ್ನು ಥಳಿಸುತ್ತಿರುವುದನ್ನು ಮತ್ತು ಒದೆಯುತ್ತಿರುವುದನ್ನು ದಾಖಲಾಗಿದೆ.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ರಾಜ್ಯದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ನಾಯಕರು, ಈ ಘಟನೆಯನ್ನು ‘ದಲಿತರ ಮೇಲಿನ ದಬ್ಬಾಳಿಕೆ’ಗೆ ಉದಾಹರಣೆ ಎಂದು ಉಲ್ಲೇಖಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ದಲಿತರ ದಬ್ಬಾಳಿಕೆಯು ಬಿಜೆಪಿಯ ದೊಡ್ಡ ಅಸ್ತ್ರವಾಗಿದೆ” ಎಂದು ಆರೋಪಿಸಿ, ರಾಜಕೀಯ ದುರುದ್ದೇಶದ ಈ ಆಟ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು “ಭೀಕರ ಘಟನೆ” ಎಂದು ಕರೆದ ಅವರು, “ಬಿಜೆಪಿಯ ದುರಾಡಳಿತದಲ್ಲಿ ಮಧ್ಯಪ್ರದೇಶದ ದಲಿತರು ಭೀಕರ ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ. ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರೆ.

ಮಧ್ಯಪ್ರದೇಶ ಯುವ ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಸರ್ಕಾರವನ್ನು ಗುರಿಯಾಗಿಸಿದೆ, ಪೊಲೀಸರು “ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ” ಎಂದು ಹೇಳಿದರು.

ಅಧಿಕಾರಿ ಅರುಣಾ ವಾಗನೆ ಪ್ರಕಾರ, ಕುಸುಮ್ ವಂಸ್ಕರ್ ಅವರ ಮಗ ಮತ್ತು ದೀಪಕ್ ಅವರ ತಂದೆ ದೀಪಕ್ ವಂಸ್ಕರ್ ವಿರುದ್ಧ 19 ಪ್ರಕರಣಗಳಿವೆ. ಅವರು ರೈಲ್ವೆ ಪೊಲೀಸರಿಗೆ ಬೇಕಾಗಿದ್ದಾರೆ, ಅವನನ್ನು ಸೆರೆಹಿಡಿಯಲು 10,000 ರೂಪಾಯಿ ಬಹುಮಾನವನ್ನು ಘೋಷಿಸಲಾಗಿದೆ. ಅವನ ಇಡೀ ಕುಟುಂಬವು ಕಳ್ಳತನದಲ್ಲಿ ಬೆಂಬಲ ನೀಡುತ್ತಿತ್ತು, ಆದ್ದರಿಂದ ಅವನ ಕುಟುಂಬ ಸದಸ್ಯರನ್ನು ವಿಚಾರಣೆಗಾಗಿ ಕರೆತರಲಾಯಿತು ಎಂದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಂತರ, ದೀಪಕ್ ವಾಂಸ್ಕರ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಆಕ್ರೋಶದ ನಂತರ, ಜಬಲ್‌ಪುರ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಆರ್‌ಪಿ) ಅವರು ಸ್ಟೇಷನ್ ಇನ್‌ಚಾರ್ಜ್ ಅನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ಪೊಲೀಸ್ ವರಿಷ್ಠಾಧಿಕಾರಿ ಅಡಿಯಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ದೀಪಕ್ ವಂಸ್ಕರ್ ಕಳ್ಳತನ ಹಿನ್ನೆಲೆ ವ್ಯಕ್ತಿಯಾಗಿದ್ದು, 2017 ರಿಂದ ಕಣ್ಗಾವಲಿನಲ್ಲಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ದೂರು ದಾಖಲಾದರೆ ಪೊಲೀಸ್ ವಿಚಾರಣೆ ನಡೆಸಲಾಗುವುದು ಎಂದು ಕಟ್ನಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸೆಹ್ರಿಯಾ ತಿಳಿಸಿದ್ದಾರೆ.

“ವಿವಿಧ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಮೇಲ್ನೋಟಕ್ಕೆ ಇದು ಜಿಆರ್‌ಪಿ ಕಟ್ನಿ ಪ್ರಕರಣವೆಂದು ತೋರುತ್ತದೆ.. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಮತ್ತು ದೂರು ದಾಖಲಿಸಿದರೆ, ತನಿಖೆ ನಡೆಸಲಾಗುವುದು” ಎಂದು ಎಎಸ್‌ಪಿ ಸೆಹ್ರಿಯಾ ಹೇಳಿದರು.

ಇದನ್ನೂ ಓದಿ; ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...