Homeಮುಖಪುಟಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

ಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಕಟ್ನಿಯಲ್ಲಿರುವ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರ ಗುಂಪು ಹದಿಹರೆಯದ ಯುವಕ ಮತ್ತು ಆತನ ಅಜ್ಜಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋ ವೈರಲ್ ಆದ ಬಳಿಕ, ವಿವಾದದ ನಡುವೆಯೇ ಒಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

2023 ರ ಅಕ್ಟೋಬರ್‌ನದ್ದು ಎನ್ನಲಾದ ವಿಡಿಯೊದಲ್ಲಿ ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ ಅವರು ಮಹಿಳೆ ಕುಸುಮ್ ವಂಸ್ಕರ್‌ ಮತ್ತು ಆಕೆಯ ಮೊಮ್ಮಗನನ್ನು ಕೋಲಿನಿಂದ ಹೊಡೆದು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸ್ ಅಧಿಕಾರಿಗಳ ಗುಂಪು ಬಾಲಕನನ್ನು ಥಳಿಸುತ್ತಿರುವುದನ್ನು ಮತ್ತು ಒದೆಯುತ್ತಿರುವುದನ್ನು ದಾಖಲಾಗಿದೆ.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ರಾಜ್ಯದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ನಾಯಕರು, ಈ ಘಟನೆಯನ್ನು ‘ದಲಿತರ ಮೇಲಿನ ದಬ್ಬಾಳಿಕೆ’ಗೆ ಉದಾಹರಣೆ ಎಂದು ಉಲ್ಲೇಖಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ದಲಿತರ ದಬ್ಬಾಳಿಕೆಯು ಬಿಜೆಪಿಯ ದೊಡ್ಡ ಅಸ್ತ್ರವಾಗಿದೆ” ಎಂದು ಆರೋಪಿಸಿ, ರಾಜಕೀಯ ದುರುದ್ದೇಶದ ಈ ಆಟ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು “ಭೀಕರ ಘಟನೆ” ಎಂದು ಕರೆದ ಅವರು, “ಬಿಜೆಪಿಯ ದುರಾಡಳಿತದಲ್ಲಿ ಮಧ್ಯಪ್ರದೇಶದ ದಲಿತರು ಭೀಕರ ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ. ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರೆ.

ಮಧ್ಯಪ್ರದೇಶ ಯುವ ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಸರ್ಕಾರವನ್ನು ಗುರಿಯಾಗಿಸಿದೆ, ಪೊಲೀಸರು “ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ” ಎಂದು ಹೇಳಿದರು.

ಅಧಿಕಾರಿ ಅರುಣಾ ವಾಗನೆ ಪ್ರಕಾರ, ಕುಸುಮ್ ವಂಸ್ಕರ್ ಅವರ ಮಗ ಮತ್ತು ದೀಪಕ್ ಅವರ ತಂದೆ ದೀಪಕ್ ವಂಸ್ಕರ್ ವಿರುದ್ಧ 19 ಪ್ರಕರಣಗಳಿವೆ. ಅವರು ರೈಲ್ವೆ ಪೊಲೀಸರಿಗೆ ಬೇಕಾಗಿದ್ದಾರೆ, ಅವನನ್ನು ಸೆರೆಹಿಡಿಯಲು 10,000 ರೂಪಾಯಿ ಬಹುಮಾನವನ್ನು ಘೋಷಿಸಲಾಗಿದೆ. ಅವನ ಇಡೀ ಕುಟುಂಬವು ಕಳ್ಳತನದಲ್ಲಿ ಬೆಂಬಲ ನೀಡುತ್ತಿತ್ತು, ಆದ್ದರಿಂದ ಅವನ ಕುಟುಂಬ ಸದಸ್ಯರನ್ನು ವಿಚಾರಣೆಗಾಗಿ ಕರೆತರಲಾಯಿತು ಎಂದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಂತರ, ದೀಪಕ್ ವಾಂಸ್ಕರ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಆಕ್ರೋಶದ ನಂತರ, ಜಬಲ್‌ಪುರ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಆರ್‌ಪಿ) ಅವರು ಸ್ಟೇಷನ್ ಇನ್‌ಚಾರ್ಜ್ ಅನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ಪೊಲೀಸ್ ವರಿಷ್ಠಾಧಿಕಾರಿ ಅಡಿಯಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ದೀಪಕ್ ವಂಸ್ಕರ್ ಕಳ್ಳತನ ಹಿನ್ನೆಲೆ ವ್ಯಕ್ತಿಯಾಗಿದ್ದು, 2017 ರಿಂದ ಕಣ್ಗಾವಲಿನಲ್ಲಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ದೂರು ದಾಖಲಾದರೆ ಪೊಲೀಸ್ ವಿಚಾರಣೆ ನಡೆಸಲಾಗುವುದು ಎಂದು ಕಟ್ನಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸೆಹ್ರಿಯಾ ತಿಳಿಸಿದ್ದಾರೆ.

“ವಿವಿಧ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಮೇಲ್ನೋಟಕ್ಕೆ ಇದು ಜಿಆರ್‌ಪಿ ಕಟ್ನಿ ಪ್ರಕರಣವೆಂದು ತೋರುತ್ತದೆ.. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಮತ್ತು ದೂರು ದಾಖಲಿಸಿದರೆ, ತನಿಖೆ ನಡೆಸಲಾಗುವುದು” ಎಂದು ಎಎಸ್‌ಪಿ ಸೆಹ್ರಿಯಾ ಹೇಳಿದರು.

ಇದನ್ನೂ ಓದಿ; ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...