Homeಮುಖಪುಟಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

ಕಳ್ಳತನ ಆರೋಪ: ದಲಿತ ಬಾಲಕ, ವೃದ್ಧೆಗೆ ಅಮಾನವೀಯವಾಗಿ ಥಳಿಸಿದ ರೈಲ್ವೆ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಕಟ್ನಿಯಲ್ಲಿರುವ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರ ಗುಂಪು ಹದಿಹರೆಯದ ಯುವಕ ಮತ್ತು ಆತನ ಅಜ್ಜಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋ ವೈರಲ್ ಆದ ಬಳಿಕ, ವಿವಾದದ ನಡುವೆಯೇ ಒಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

2023 ರ ಅಕ್ಟೋಬರ್‌ನದ್ದು ಎನ್ನಲಾದ ವಿಡಿಯೊದಲ್ಲಿ ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ ಅವರು ಮಹಿಳೆ ಕುಸುಮ್ ವಂಸ್ಕರ್‌ ಮತ್ತು ಆಕೆಯ ಮೊಮ್ಮಗನನ್ನು ಕೋಲಿನಿಂದ ಹೊಡೆದು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದೆಯುವುದನ್ನು ಕಾಣಬಹುದಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪೊಲೀಸ್ ಅಧಿಕಾರಿಗಳ ಗುಂಪು ಬಾಲಕನನ್ನು ಥಳಿಸುತ್ತಿರುವುದನ್ನು ಮತ್ತು ಒದೆಯುತ್ತಿರುವುದನ್ನು ದಾಖಲಾಗಿದೆ.

ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ವಿವಾದದ ಬೆನ್ನಲ್ಲೇ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ರಾಜ್ಯದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ನಾಯಕರು, ಈ ಘಟನೆಯನ್ನು ‘ದಲಿತರ ಮೇಲಿನ ದಬ್ಬಾಳಿಕೆ’ಗೆ ಉದಾಹರಣೆ ಎಂದು ಉಲ್ಲೇಖಿಸಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ದಲಿತರ ದಬ್ಬಾಳಿಕೆಯು ಬಿಜೆಪಿಯ ದೊಡ್ಡ ಅಸ್ತ್ರವಾಗಿದೆ” ಎಂದು ಆರೋಪಿಸಿ, ರಾಜಕೀಯ ದುರುದ್ದೇಶದ ಈ ಆಟ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು “ಭೀಕರ ಘಟನೆ” ಎಂದು ಕರೆದ ಅವರು, “ಬಿಜೆಪಿಯ ದುರಾಡಳಿತದಲ್ಲಿ ಮಧ್ಯಪ್ರದೇಶದ ದಲಿತರು ಭೀಕರ ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ. ಮುಖ್ಯಮಂತ್ರಿಗಳಿಗೆ ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರೆ.

ಮಧ್ಯಪ್ರದೇಶ ಯುವ ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಸರ್ಕಾರವನ್ನು ಗುರಿಯಾಗಿಸಿದೆ, ಪೊಲೀಸರು “ಕಾನೂನು ಮತ್ತು ಸುವ್ಯವಸ್ಥೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಮೂಲಕ ಜನರನ್ನು ಕೊಲ್ಲುತ್ತಿದ್ದಾರೆ” ಎಂದು ಹೇಳಿದರು.

ಅಧಿಕಾರಿ ಅರುಣಾ ವಾಗನೆ ಪ್ರಕಾರ, ಕುಸುಮ್ ವಂಸ್ಕರ್ ಅವರ ಮಗ ಮತ್ತು ದೀಪಕ್ ಅವರ ತಂದೆ ದೀಪಕ್ ವಂಸ್ಕರ್ ವಿರುದ್ಧ 19 ಪ್ರಕರಣಗಳಿವೆ. ಅವರು ರೈಲ್ವೆ ಪೊಲೀಸರಿಗೆ ಬೇಕಾಗಿದ್ದಾರೆ, ಅವನನ್ನು ಸೆರೆಹಿಡಿಯಲು 10,000 ರೂಪಾಯಿ ಬಹುಮಾನವನ್ನು ಘೋಷಿಸಲಾಗಿದೆ. ಅವನ ಇಡೀ ಕುಟುಂಬವು ಕಳ್ಳತನದಲ್ಲಿ ಬೆಂಬಲ ನೀಡುತ್ತಿತ್ತು, ಆದ್ದರಿಂದ ಅವನ ಕುಟುಂಬ ಸದಸ್ಯರನ್ನು ವಿಚಾರಣೆಗಾಗಿ ಕರೆತರಲಾಯಿತು ಎಂದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಂತರ, ದೀಪಕ್ ವಾಂಸ್ಕರ್ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಆಕ್ರೋಶದ ನಂತರ, ಜಬಲ್‌ಪುರ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಆರ್‌ಪಿ) ಅವರು ಸ್ಟೇಷನ್ ಇನ್‌ಚಾರ್ಜ್ ಅನ್ನು ಅಮಾನತುಗೊಳಿಸಿದ್ದಾರೆ. ಇಲಾಖಾ ಪೊಲೀಸ್ ವರಿಷ್ಠಾಧಿಕಾರಿ ಅಡಿಯಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ದೀಪಕ್ ವಂಸ್ಕರ್ ಕಳ್ಳತನ ಹಿನ್ನೆಲೆ ವ್ಯಕ್ತಿಯಾಗಿದ್ದು, 2017 ರಿಂದ ಕಣ್ಗಾವಲಿನಲ್ಲಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ದೂರು ದಾಖಲಾದರೆ ಪೊಲೀಸ್ ವಿಚಾರಣೆ ನಡೆಸಲಾಗುವುದು ಎಂದು ಕಟ್ನಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸೆಹ್ರಿಯಾ ತಿಳಿಸಿದ್ದಾರೆ.

“ವಿವಿಧ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಮೇಲ್ನೋಟಕ್ಕೆ ಇದು ಜಿಆರ್‌ಪಿ ಕಟ್ನಿ ಪ್ರಕರಣವೆಂದು ತೋರುತ್ತದೆ.. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಮತ್ತು ದೂರು ದಾಖಲಿಸಿದರೆ, ತನಿಖೆ ನಡೆಸಲಾಗುವುದು” ಎಂದು ಎಎಸ್‌ಪಿ ಸೆಹ್ರಿಯಾ ಹೇಳಿದರು.

ಇದನ್ನೂ ಓದಿ; ಜಾರ್ಖಂಡ್ ಮುಕ್ತಿ ಮೋರ್ಚಾದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಮಾಜಿ ಸಿಎಂ ಚಂಪೈ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...