Homeಮುಖಪುಟ'ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..'; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಹಿಮಾಚಲ ಪ್ರದೇಶ ಸರ್ಕಾರವು ವಿಪತ್ತು ಪರಿಹಾರ ಹಣವನ್ನು ಅಕ್ರಮವಾಗಿ ಸೋನಿಯಾ ಗಾಂಧಿ ಅವರಿಗೆ ವರ್ಗಾಯಿಸಿದೆ ಎಂಬ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಆರೋಪಗಳಿಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್, ‘ಕಂಗನಾ ರಣಾವತ್ ಅವರು ಆರೋಪವನ್ನು ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

“ಕಂಗನಾ ತನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ… ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ. ಅವರು ಯಾವ ಆಧಾರದ ಮೇಲೆ ಅಂತಹ ಹೇಳಿಕೆ ನೀಡಿದ್ದಾರೆ? ಅವರು ಸೋನಿಯಾ ಗಾಂಧಿಯವರ ವಿರುದ್ಧ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ” ಎಂದು ಸಿಂಗ್ ಹೇಳಿದ್ದಾರೆ.

“ಕೇಂದ್ರದಿಂದ ಬರುವ ಹಣ ಅಥವಾ ರಾಜ್ಯದ ಅಭಿವೃದ್ಧಿಯ ಹಣವನ್ನು ಸೋನಿಯಾ ಗಾಂಧಿಗೆ ನೀಡಲಾಗುತ್ತಿದೆ ಎಂದು ಹೇಳುವುದಕ್ಕಿಂತ ಹೆಚ್ಚು ಮೂರ್ಖತನದ ಹೇಳಿಕೆ ಇರಲಾರದು’ ಎಂದು ಅವರು ಹೇಳಿದರು. “ನಾನು ಕಂಗನಾಗೆ ಒಂದಾಧರೂ ಪುರಾವೆ ತೋರಿಸಲು ಬಹಿರಂಗವಾಗಿ ಸವಾಲು ಹಾಕುತ್ತೇನೆ. ಅವರ ಹೇಳಿಕೆ ದಿಕ್ಕು ತಪ್ಪಿಸುವುದಾಗಿದೆ. ಇಂತಹ ಆಧಾರ ರಹಿತ ಆರೋಪಗಳಿಗಾಗಿ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿ” ಎಂದು ಅವರು ಒತ್ತಾಯಿಸಿದ್ದಾರೆ.

“ಸೂಕ್ಷ್ಮ ವಿಷಯಗಳ ಬಗ್ಗೆ ಹೇಳಿಕೆ ನೀಡದಂತೆ ಬಿಜೆಪಿ ಈಗಾಗಲೇ ಅವರಿಗೆ ಎಚ್ಚರಿಕೆ ನೀಡಿದೆ. ಆದರೆ, ಅವರು ತಮ್ಮ ಪಕ್ಷದ ಹೈಕಮಾಂಡ್‌ ಸಲಹೆಗೆ ಕಿವಿಗೊಟ್ಟಿಲ್ಲ” ಎಂದು ಅವರು ಹೇಳಿದರು.

“ಹಿಮಾಚಲ ಪ್ರದೇಶ ಸರ್ಕಾರವು ಸಾಲ ಪಡೆದು ಅದನ್ನು ಸೋನಿಯಾ ಗಾಂಧಿಯವರಿಗೆ ನೀಡುತ್ತದೆ, ಇದು ರಾಜ್ಯದ ಆರ್ಥಿಕತೆಯನ್ನು ಟೊಳ್ಳು ಮಾಡಿದೆ” ಎಂಬ ಕಂಗನಾ ಅವರ ನಿರ್ದಿಷ್ಟ ಆರೋಪದ ಮೇಲೆ ಸಿಂಗ್ ಆಕ್ರೋಶ ಹೊರಹಾಕಿದರು.

“ಇದು ಮಾನಹಾನಿಕರ ಹೇಳಿಕೆಯಾಗಿದೆ, ನಾವು ಖಂಡಿಸುತ್ತೇವೆ. ಆಕೆ ಒಂದು ವಾರದಲ್ಲಿ ಸಾಕ್ಷ್ಯವನ್ನು ಒದಗಿಸಬೇಕು. ಹಾಗೆ ಮಾಡದಿದ್ದರೆ ಮತ್ತು ಕ್ಷಮೆಯಾಚಿಸದಿದ್ದರೆ, ನಾವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇವೆ” ಎಂದು ಸಿಂಗ್ ಹೇಳಿದರು.

ಭಾನುವಾರ, ತನ್ನ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಿದ ರಣಾವತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು.

“ವಿಪತ್ತುಗಳು ಮತ್ತು ಕಾಂಗ್ರೆಸ್ ರಾಜ್ಯವನ್ನು ದಶಕಗಳ ಹಿಂದೆ ಕೊಂಡೊಯ್ದಿವೆ.. ಈ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ. ನಾವು (ಕೇಂದ್ರ ಸರ್ಕಾರ) ವಿಪತ್ತು ಹಣವನ್ನು ನೀಡಿದರೆ ಅದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೋಗಬೇಕು. ಆದರೆ, ಅದು ‘ಸೋನಿಯಾ ಪರಿಹಾರ ನಿಧಿ’ಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹೇಳಿದ್ದರು.

ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ಧವೂ ವ್ಯಂಗ್ಯವಾಡಿದ ಕಂಗನಾ, “ರಸ್ತೆಗಳಲ್ಲಿನ ಗುಂಡಿಗಳಿಂದ ಜನರು ಬೇಸತ್ತಿದ್ದಾರೆ. ನಾನು ನನ್ನ ಪ್ರದೇಶಕ್ಕೆ ಸಾಧ್ಯವಾದಷ್ಟು ಹೆಚ್ಚಿನದನ್ನು ಮಾಡುತ್ತೇನೆ. ಆದರೆ, ಪಿಡಬ್ಲ್ಯೂಡಿ ಸಚಿವರು ಕೂಡ ಏನಾದರೂ ಮಾಡಬೇಕು” ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶವು ವಿನಾಶಕಾರಿ ಭೂಕುಸಿತ, ಹಠಾತ್ ಪ್ರವಾಹಗಳು ಮತ್ತು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದ ಉರಿಯುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಎದುರಿಸಲು ಮುಖ್ಯಮಂತ್ರಿ ಕಳೆದ ತಿಂಗಳು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಎರಡು ತಿಂಗಳ ಸಂಬಳವನ್ನು ಸ್ವೀಕರಿಸುವುದನ್ನು ಮುಂದೂಡುವುದಾಗಿ ಹೇಳಿದ್ದರು.

“ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ, ಎಲ್ಲ ಸದಸ್ಯರು ರಾಜ್ಯವು ಸುಧಾರಣೆ ಕಾಣುವವರೆಗೆ. ನಾವು ಎರಡು ತಿಂಗಳವರೆಗೆ ಸಂಬಳ, ಟಿಎ ಅಥವಾ ಡಿಎ (ಸಾರಿಗೆ ಅಥವಾ ತುಟ್ಟಿಭತ್ಯೆ) ತೆಗೆದುಕೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ಕೇವಲ ಸಣ್ಣ ಮೊತ್ತ. ಆದರೆ, ಇದು ಸಾಂಕೇತಿಕವಾಗಿ, ನಾನು ಎಲ್ಲ ಶಾಸಕರಿಗೂ ವಿನಂತಿಸಿದೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ‘ರಾಜ್ಯತ್ವ’ ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..’; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...