Homeಮುಖಪುಟ'ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..'; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಹಿಮಾಚಲ ಪ್ರದೇಶ ಸರ್ಕಾರವು ವಿಪತ್ತು ಪರಿಹಾರ ಹಣವನ್ನು ಅಕ್ರಮವಾಗಿ ಸೋನಿಯಾ ಗಾಂಧಿ ಅವರಿಗೆ ವರ್ಗಾಯಿಸಿದೆ ಎಂಬ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಆರೋಪಗಳಿಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್, ‘ಕಂಗನಾ ರಣಾವತ್ ಅವರು ಆರೋಪವನ್ನು ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

“ಕಂಗನಾ ತನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ… ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ. ಅವರು ಯಾವ ಆಧಾರದ ಮೇಲೆ ಅಂತಹ ಹೇಳಿಕೆ ನೀಡಿದ್ದಾರೆ? ಅವರು ಸೋನಿಯಾ ಗಾಂಧಿಯವರ ವಿರುದ್ಧ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ” ಎಂದು ಸಿಂಗ್ ಹೇಳಿದ್ದಾರೆ.

“ಕೇಂದ್ರದಿಂದ ಬರುವ ಹಣ ಅಥವಾ ರಾಜ್ಯದ ಅಭಿವೃದ್ಧಿಯ ಹಣವನ್ನು ಸೋನಿಯಾ ಗಾಂಧಿಗೆ ನೀಡಲಾಗುತ್ತಿದೆ ಎಂದು ಹೇಳುವುದಕ್ಕಿಂತ ಹೆಚ್ಚು ಮೂರ್ಖತನದ ಹೇಳಿಕೆ ಇರಲಾರದು’ ಎಂದು ಅವರು ಹೇಳಿದರು. “ನಾನು ಕಂಗನಾಗೆ ಒಂದಾಧರೂ ಪುರಾವೆ ತೋರಿಸಲು ಬಹಿರಂಗವಾಗಿ ಸವಾಲು ಹಾಕುತ್ತೇನೆ. ಅವರ ಹೇಳಿಕೆ ದಿಕ್ಕು ತಪ್ಪಿಸುವುದಾಗಿದೆ. ಇಂತಹ ಆಧಾರ ರಹಿತ ಆರೋಪಗಳಿಗಾಗಿ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿ” ಎಂದು ಅವರು ಒತ್ತಾಯಿಸಿದ್ದಾರೆ.

“ಸೂಕ್ಷ್ಮ ವಿಷಯಗಳ ಬಗ್ಗೆ ಹೇಳಿಕೆ ನೀಡದಂತೆ ಬಿಜೆಪಿ ಈಗಾಗಲೇ ಅವರಿಗೆ ಎಚ್ಚರಿಕೆ ನೀಡಿದೆ. ಆದರೆ, ಅವರು ತಮ್ಮ ಪಕ್ಷದ ಹೈಕಮಾಂಡ್‌ ಸಲಹೆಗೆ ಕಿವಿಗೊಟ್ಟಿಲ್ಲ” ಎಂದು ಅವರು ಹೇಳಿದರು.

“ಹಿಮಾಚಲ ಪ್ರದೇಶ ಸರ್ಕಾರವು ಸಾಲ ಪಡೆದು ಅದನ್ನು ಸೋನಿಯಾ ಗಾಂಧಿಯವರಿಗೆ ನೀಡುತ್ತದೆ, ಇದು ರಾಜ್ಯದ ಆರ್ಥಿಕತೆಯನ್ನು ಟೊಳ್ಳು ಮಾಡಿದೆ” ಎಂಬ ಕಂಗನಾ ಅವರ ನಿರ್ದಿಷ್ಟ ಆರೋಪದ ಮೇಲೆ ಸಿಂಗ್ ಆಕ್ರೋಶ ಹೊರಹಾಕಿದರು.

“ಇದು ಮಾನಹಾನಿಕರ ಹೇಳಿಕೆಯಾಗಿದೆ, ನಾವು ಖಂಡಿಸುತ್ತೇವೆ. ಆಕೆ ಒಂದು ವಾರದಲ್ಲಿ ಸಾಕ್ಷ್ಯವನ್ನು ಒದಗಿಸಬೇಕು. ಹಾಗೆ ಮಾಡದಿದ್ದರೆ ಮತ್ತು ಕ್ಷಮೆಯಾಚಿಸದಿದ್ದರೆ, ನಾವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇವೆ” ಎಂದು ಸಿಂಗ್ ಹೇಳಿದರು.

ಭಾನುವಾರ, ತನ್ನ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಿದ ರಣಾವತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು.

“ವಿಪತ್ತುಗಳು ಮತ್ತು ಕಾಂಗ್ರೆಸ್ ರಾಜ್ಯವನ್ನು ದಶಕಗಳ ಹಿಂದೆ ಕೊಂಡೊಯ್ದಿವೆ.. ಈ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ. ನಾವು (ಕೇಂದ್ರ ಸರ್ಕಾರ) ವಿಪತ್ತು ಹಣವನ್ನು ನೀಡಿದರೆ ಅದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೋಗಬೇಕು. ಆದರೆ, ಅದು ‘ಸೋನಿಯಾ ಪರಿಹಾರ ನಿಧಿ’ಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹೇಳಿದ್ದರು.

ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ಧವೂ ವ್ಯಂಗ್ಯವಾಡಿದ ಕಂಗನಾ, “ರಸ್ತೆಗಳಲ್ಲಿನ ಗುಂಡಿಗಳಿಂದ ಜನರು ಬೇಸತ್ತಿದ್ದಾರೆ. ನಾನು ನನ್ನ ಪ್ರದೇಶಕ್ಕೆ ಸಾಧ್ಯವಾದಷ್ಟು ಹೆಚ್ಚಿನದನ್ನು ಮಾಡುತ್ತೇನೆ. ಆದರೆ, ಪಿಡಬ್ಲ್ಯೂಡಿ ಸಚಿವರು ಕೂಡ ಏನಾದರೂ ಮಾಡಬೇಕು” ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶವು ವಿನಾಶಕಾರಿ ಭೂಕುಸಿತ, ಹಠಾತ್ ಪ್ರವಾಹಗಳು ಮತ್ತು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದ ಉರಿಯುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಎದುರಿಸಲು ಮುಖ್ಯಮಂತ್ರಿ ಕಳೆದ ತಿಂಗಳು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಎರಡು ತಿಂಗಳ ಸಂಬಳವನ್ನು ಸ್ವೀಕರಿಸುವುದನ್ನು ಮುಂದೂಡುವುದಾಗಿ ಹೇಳಿದ್ದರು.

“ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ, ಎಲ್ಲ ಸದಸ್ಯರು ರಾಜ್ಯವು ಸುಧಾರಣೆ ಕಾಣುವವರೆಗೆ. ನಾವು ಎರಡು ತಿಂಗಳವರೆಗೆ ಸಂಬಳ, ಟಿಎ ಅಥವಾ ಡಿಎ (ಸಾರಿಗೆ ಅಥವಾ ತುಟ್ಟಿಭತ್ಯೆ) ತೆಗೆದುಕೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ಕೇವಲ ಸಣ್ಣ ಮೊತ್ತ. ಆದರೆ, ಇದು ಸಾಂಕೇತಿಕವಾಗಿ, ನಾನು ಎಲ್ಲ ಶಾಸಕರಿಗೂ ವಿನಂತಿಸಿದೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ‘ರಾಜ್ಯತ್ವ’ ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..’; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...