Homeಮುಖಪುಟ'ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..'; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಹಿಮಾಚಲ ಪ್ರದೇಶ ಸರ್ಕಾರವು ವಿಪತ್ತು ಪರಿಹಾರ ಹಣವನ್ನು ಅಕ್ರಮವಾಗಿ ಸೋನಿಯಾ ಗಾಂಧಿ ಅವರಿಗೆ ವರ್ಗಾಯಿಸಿದೆ ಎಂಬ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಆರೋಪಗಳಿಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್, ‘ಕಂಗನಾ ರಣಾವತ್ ಅವರು ಆರೋಪವನ್ನು ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

“ಕಂಗನಾ ತನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ… ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ. ಅವರು ಯಾವ ಆಧಾರದ ಮೇಲೆ ಅಂತಹ ಹೇಳಿಕೆ ನೀಡಿದ್ದಾರೆ? ಅವರು ಸೋನಿಯಾ ಗಾಂಧಿಯವರ ವಿರುದ್ಧ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ” ಎಂದು ಸಿಂಗ್ ಹೇಳಿದ್ದಾರೆ.

“ಕೇಂದ್ರದಿಂದ ಬರುವ ಹಣ ಅಥವಾ ರಾಜ್ಯದ ಅಭಿವೃದ್ಧಿಯ ಹಣವನ್ನು ಸೋನಿಯಾ ಗಾಂಧಿಗೆ ನೀಡಲಾಗುತ್ತಿದೆ ಎಂದು ಹೇಳುವುದಕ್ಕಿಂತ ಹೆಚ್ಚು ಮೂರ್ಖತನದ ಹೇಳಿಕೆ ಇರಲಾರದು’ ಎಂದು ಅವರು ಹೇಳಿದರು. “ನಾನು ಕಂಗನಾಗೆ ಒಂದಾಧರೂ ಪುರಾವೆ ತೋರಿಸಲು ಬಹಿರಂಗವಾಗಿ ಸವಾಲು ಹಾಕುತ್ತೇನೆ. ಅವರ ಹೇಳಿಕೆ ದಿಕ್ಕು ತಪ್ಪಿಸುವುದಾಗಿದೆ. ಇಂತಹ ಆಧಾರ ರಹಿತ ಆರೋಪಗಳಿಗಾಗಿ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿ” ಎಂದು ಅವರು ಒತ್ತಾಯಿಸಿದ್ದಾರೆ.

“ಸೂಕ್ಷ್ಮ ವಿಷಯಗಳ ಬಗ್ಗೆ ಹೇಳಿಕೆ ನೀಡದಂತೆ ಬಿಜೆಪಿ ಈಗಾಗಲೇ ಅವರಿಗೆ ಎಚ್ಚರಿಕೆ ನೀಡಿದೆ. ಆದರೆ, ಅವರು ತಮ್ಮ ಪಕ್ಷದ ಹೈಕಮಾಂಡ್‌ ಸಲಹೆಗೆ ಕಿವಿಗೊಟ್ಟಿಲ್ಲ” ಎಂದು ಅವರು ಹೇಳಿದರು.

“ಹಿಮಾಚಲ ಪ್ರದೇಶ ಸರ್ಕಾರವು ಸಾಲ ಪಡೆದು ಅದನ್ನು ಸೋನಿಯಾ ಗಾಂಧಿಯವರಿಗೆ ನೀಡುತ್ತದೆ, ಇದು ರಾಜ್ಯದ ಆರ್ಥಿಕತೆಯನ್ನು ಟೊಳ್ಳು ಮಾಡಿದೆ” ಎಂಬ ಕಂಗನಾ ಅವರ ನಿರ್ದಿಷ್ಟ ಆರೋಪದ ಮೇಲೆ ಸಿಂಗ್ ಆಕ್ರೋಶ ಹೊರಹಾಕಿದರು.

“ಇದು ಮಾನಹಾನಿಕರ ಹೇಳಿಕೆಯಾಗಿದೆ, ನಾವು ಖಂಡಿಸುತ್ತೇವೆ. ಆಕೆ ಒಂದು ವಾರದಲ್ಲಿ ಸಾಕ್ಷ್ಯವನ್ನು ಒದಗಿಸಬೇಕು. ಹಾಗೆ ಮಾಡದಿದ್ದರೆ ಮತ್ತು ಕ್ಷಮೆಯಾಚಿಸದಿದ್ದರೆ, ನಾವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇವೆ” ಎಂದು ಸಿಂಗ್ ಹೇಳಿದರು.

ಭಾನುವಾರ, ತನ್ನ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಿದ ರಣಾವತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು.

“ವಿಪತ್ತುಗಳು ಮತ್ತು ಕಾಂಗ್ರೆಸ್ ರಾಜ್ಯವನ್ನು ದಶಕಗಳ ಹಿಂದೆ ಕೊಂಡೊಯ್ದಿವೆ.. ಈ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ. ನಾವು (ಕೇಂದ್ರ ಸರ್ಕಾರ) ವಿಪತ್ತು ಹಣವನ್ನು ನೀಡಿದರೆ ಅದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೋಗಬೇಕು. ಆದರೆ, ಅದು ‘ಸೋನಿಯಾ ಪರಿಹಾರ ನಿಧಿ’ಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹೇಳಿದ್ದರು.

ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ಧವೂ ವ್ಯಂಗ್ಯವಾಡಿದ ಕಂಗನಾ, “ರಸ್ತೆಗಳಲ್ಲಿನ ಗುಂಡಿಗಳಿಂದ ಜನರು ಬೇಸತ್ತಿದ್ದಾರೆ. ನಾನು ನನ್ನ ಪ್ರದೇಶಕ್ಕೆ ಸಾಧ್ಯವಾದಷ್ಟು ಹೆಚ್ಚಿನದನ್ನು ಮಾಡುತ್ತೇನೆ. ಆದರೆ, ಪಿಡಬ್ಲ್ಯೂಡಿ ಸಚಿವರು ಕೂಡ ಏನಾದರೂ ಮಾಡಬೇಕು” ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶವು ವಿನಾಶಕಾರಿ ಭೂಕುಸಿತ, ಹಠಾತ್ ಪ್ರವಾಹಗಳು ಮತ್ತು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದ ಉರಿಯುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಎದುರಿಸಲು ಮುಖ್ಯಮಂತ್ರಿ ಕಳೆದ ತಿಂಗಳು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಎರಡು ತಿಂಗಳ ಸಂಬಳವನ್ನು ಸ್ವೀಕರಿಸುವುದನ್ನು ಮುಂದೂಡುವುದಾಗಿ ಹೇಳಿದ್ದರು.

“ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ, ಎಲ್ಲ ಸದಸ್ಯರು ರಾಜ್ಯವು ಸುಧಾರಣೆ ಕಾಣುವವರೆಗೆ. ನಾವು ಎರಡು ತಿಂಗಳವರೆಗೆ ಸಂಬಳ, ಟಿಎ ಅಥವಾ ಡಿಎ (ಸಾರಿಗೆ ಅಥವಾ ತುಟ್ಟಿಭತ್ಯೆ) ತೆಗೆದುಕೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ಕೇವಲ ಸಣ್ಣ ಮೊತ್ತ. ಆದರೆ, ಇದು ಸಾಂಕೇತಿಕವಾಗಿ, ನಾನು ಎಲ್ಲ ಶಾಸಕರಿಗೂ ವಿನಂತಿಸಿದೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ‘ರಾಜ್ಯತ್ವ’ ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..’; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...