Homeಮುಖಪುಟ'ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..'; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಹಿಮಾಚಲ ಪ್ರದೇಶ ಸರ್ಕಾರವು ವಿಪತ್ತು ಪರಿಹಾರ ಹಣವನ್ನು ಅಕ್ರಮವಾಗಿ ಸೋನಿಯಾ ಗಾಂಧಿ ಅವರಿಗೆ ವರ್ಗಾಯಿಸಿದೆ ಎಂಬ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಆರೋಪಗಳಿಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್, ‘ಕಂಗನಾ ರಣಾವತ್ ಅವರು ಆರೋಪವನ್ನು ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

“ಕಂಗನಾ ತನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ… ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ. ಅವರು ಯಾವ ಆಧಾರದ ಮೇಲೆ ಅಂತಹ ಹೇಳಿಕೆ ನೀಡಿದ್ದಾರೆ? ಅವರು ಸೋನಿಯಾ ಗಾಂಧಿಯವರ ವಿರುದ್ಧ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ” ಎಂದು ಸಿಂಗ್ ಹೇಳಿದ್ದಾರೆ.

“ಕೇಂದ್ರದಿಂದ ಬರುವ ಹಣ ಅಥವಾ ರಾಜ್ಯದ ಅಭಿವೃದ್ಧಿಯ ಹಣವನ್ನು ಸೋನಿಯಾ ಗಾಂಧಿಗೆ ನೀಡಲಾಗುತ್ತಿದೆ ಎಂದು ಹೇಳುವುದಕ್ಕಿಂತ ಹೆಚ್ಚು ಮೂರ್ಖತನದ ಹೇಳಿಕೆ ಇರಲಾರದು’ ಎಂದು ಅವರು ಹೇಳಿದರು. “ನಾನು ಕಂಗನಾಗೆ ಒಂದಾಧರೂ ಪುರಾವೆ ತೋರಿಸಲು ಬಹಿರಂಗವಾಗಿ ಸವಾಲು ಹಾಕುತ್ತೇನೆ. ಅವರ ಹೇಳಿಕೆ ದಿಕ್ಕು ತಪ್ಪಿಸುವುದಾಗಿದೆ. ಇಂತಹ ಆಧಾರ ರಹಿತ ಆರೋಪಗಳಿಗಾಗಿ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿ” ಎಂದು ಅವರು ಒತ್ತಾಯಿಸಿದ್ದಾರೆ.

“ಸೂಕ್ಷ್ಮ ವಿಷಯಗಳ ಬಗ್ಗೆ ಹೇಳಿಕೆ ನೀಡದಂತೆ ಬಿಜೆಪಿ ಈಗಾಗಲೇ ಅವರಿಗೆ ಎಚ್ಚರಿಕೆ ನೀಡಿದೆ. ಆದರೆ, ಅವರು ತಮ್ಮ ಪಕ್ಷದ ಹೈಕಮಾಂಡ್‌ ಸಲಹೆಗೆ ಕಿವಿಗೊಟ್ಟಿಲ್ಲ” ಎಂದು ಅವರು ಹೇಳಿದರು.

“ಹಿಮಾಚಲ ಪ್ರದೇಶ ಸರ್ಕಾರವು ಸಾಲ ಪಡೆದು ಅದನ್ನು ಸೋನಿಯಾ ಗಾಂಧಿಯವರಿಗೆ ನೀಡುತ್ತದೆ, ಇದು ರಾಜ್ಯದ ಆರ್ಥಿಕತೆಯನ್ನು ಟೊಳ್ಳು ಮಾಡಿದೆ” ಎಂಬ ಕಂಗನಾ ಅವರ ನಿರ್ದಿಷ್ಟ ಆರೋಪದ ಮೇಲೆ ಸಿಂಗ್ ಆಕ್ರೋಶ ಹೊರಹಾಕಿದರು.

“ಇದು ಮಾನಹಾನಿಕರ ಹೇಳಿಕೆಯಾಗಿದೆ, ನಾವು ಖಂಡಿಸುತ್ತೇವೆ. ಆಕೆ ಒಂದು ವಾರದಲ್ಲಿ ಸಾಕ್ಷ್ಯವನ್ನು ಒದಗಿಸಬೇಕು. ಹಾಗೆ ಮಾಡದಿದ್ದರೆ ಮತ್ತು ಕ್ಷಮೆಯಾಚಿಸದಿದ್ದರೆ, ನಾವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇವೆ” ಎಂದು ಸಿಂಗ್ ಹೇಳಿದರು.

ಭಾನುವಾರ, ತನ್ನ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಿದ ರಣಾವತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು.

“ವಿಪತ್ತುಗಳು ಮತ್ತು ಕಾಂಗ್ರೆಸ್ ರಾಜ್ಯವನ್ನು ದಶಕಗಳ ಹಿಂದೆ ಕೊಂಡೊಯ್ದಿವೆ.. ಈ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ. ನಾವು (ಕೇಂದ್ರ ಸರ್ಕಾರ) ವಿಪತ್ತು ಹಣವನ್ನು ನೀಡಿದರೆ ಅದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೋಗಬೇಕು. ಆದರೆ, ಅದು ‘ಸೋನಿಯಾ ಪರಿಹಾರ ನಿಧಿ’ಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹೇಳಿದ್ದರು.

ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ಧವೂ ವ್ಯಂಗ್ಯವಾಡಿದ ಕಂಗನಾ, “ರಸ್ತೆಗಳಲ್ಲಿನ ಗುಂಡಿಗಳಿಂದ ಜನರು ಬೇಸತ್ತಿದ್ದಾರೆ. ನಾನು ನನ್ನ ಪ್ರದೇಶಕ್ಕೆ ಸಾಧ್ಯವಾದಷ್ಟು ಹೆಚ್ಚಿನದನ್ನು ಮಾಡುತ್ತೇನೆ. ಆದರೆ, ಪಿಡಬ್ಲ್ಯೂಡಿ ಸಚಿವರು ಕೂಡ ಏನಾದರೂ ಮಾಡಬೇಕು” ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶವು ವಿನಾಶಕಾರಿ ಭೂಕುಸಿತ, ಹಠಾತ್ ಪ್ರವಾಹಗಳು ಮತ್ತು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದ ಉರಿಯುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಎದುರಿಸಲು ಮುಖ್ಯಮಂತ್ರಿ ಕಳೆದ ತಿಂಗಳು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಎರಡು ತಿಂಗಳ ಸಂಬಳವನ್ನು ಸ್ವೀಕರಿಸುವುದನ್ನು ಮುಂದೂಡುವುದಾಗಿ ಹೇಳಿದ್ದರು.

“ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ, ಎಲ್ಲ ಸದಸ್ಯರು ರಾಜ್ಯವು ಸುಧಾರಣೆ ಕಾಣುವವರೆಗೆ. ನಾವು ಎರಡು ತಿಂಗಳವರೆಗೆ ಸಂಬಳ, ಟಿಎ ಅಥವಾ ಡಿಎ (ಸಾರಿಗೆ ಅಥವಾ ತುಟ್ಟಿಭತ್ಯೆ) ತೆಗೆದುಕೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ಕೇವಲ ಸಣ್ಣ ಮೊತ್ತ. ಆದರೆ, ಇದು ಸಾಂಕೇತಿಕವಾಗಿ, ನಾನು ಎಲ್ಲ ಶಾಸಕರಿಗೂ ವಿನಂತಿಸಿದೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ‘ರಾಜ್ಯತ್ವ’ ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..’; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...