Homeಕರ್ನಾಟಕಸಂಘ ಪರಿವಾರದ ವಿರುದ್ಧ ಪೋಸ್ಟ್ ಆರೋಪ: ನಟ ಚೇತನ್ ಬಂಧನ

ಸಂಘ ಪರಿವಾರದ ವಿರುದ್ಧ ಪೋಸ್ಟ್ ಆರೋಪ: ನಟ ಚೇತನ್ ಬಂಧನ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಕನ್ನಡದ ನಟ ಚೇತನ್ ಅಹಿಂಸಾರವರನ್ನು ಶೇಷಾದ್ರಿಪುರಂ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ

ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು

1992 ರಲ್ಲಿ : ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು

ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ -> ಇದು ಕೂಡ ಒಂದು ಸುಳ್ಳು

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ ಎಂದು ಚೇತನ್ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದರು. ಅಷ್ಟಕ್ಕೆ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ ಎನ್ನಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

2022ರ ಫೆಬ್ರವರಿಯಲ್ಲಿಯೂ ಸಹ ಹೈಕೋರ್ಟ್ ನ್ಯಾಯಾಧೀಶರ ತೀರ್ಪಿನ ಕುರಿತು ವರ್ಷಗಳ ಹಿಂದೆ ಚೇತನ್ ಟ್ವೀಟ್ ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ಚೇತನ್‌ರವರನ್ನು ಬಂಧಿಸಲಾಗಿತ್ತು.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಕೇವಲ ಒಂದು ಪೋಸ್ಟ್ ಹಾಕಿದ್ದಕ್ಕೆ ಚೇತನ್‌ರವರನ್ನು ಬಂಧಿಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಯಾವ ಆಯಾಮದಲ್ಲಿ ಈ ಪೋಸ್ಟ್ ಚೇತನ್‌ವರ ಬಂಧನಕ್ಕೆ ಕಾರಣವಾಗುತ್ತದೆ?
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುವವರ ಕತೆ ಇದು” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂಬ ಟ್ವೀಟ್ ಸಂಬಂಧಿಸಿ ಚೇತನ್ ಅಹಿಂಸಾ ಬಂಧನವಾಗಿದೆ. ಸಾಕಷ್ಟು ವಿಚಾರಗಳಲ್ಲಿ ಅವರ ಹೇಳಿಕೆಗಳ ಬಗ್ಗೆ ನನಗೆ ಭಿನ್ನಾಭಿಪ್ರಾಯವಿದೆ. ಆದರೆ ಈ ರೀತಿಯ ವಾಕ್ ಸ್ವಾತಂತ್ರ್ಯ ಕಸಿಯುವ ಬಂಧನಗಳನ್ನು ಖಂಡಿಸುತ್ತೇನೆ. ಚೇತನ್ ಹಿಂದುತ್ವದ ವಿಚಾರದಲ್ಲಿ ಮಾಡಿರುವ ಈ ಟ್ವೀಟ್ ಸಂಪೂರ್ಣ ಸತ್ಯದಿಂದ ಕೂಡಿದೆ. ಇದಕ್ಕೆ ನನ್ನ ಬೆಂಬಲವಿದೆ.” ಎಂದು ಸಾಮಾಜಿಕ ಕಾರ್ಯಕರ್ತರಾದ ಭಾಗ್ಯ ನಾರಾಯಣರವರು ಬರೆದಿದ್ದಾರೆ.

ಇದನ್ನೂ ಓದಿ: ಕೋಲಾರದಿಂದಲೇ ಸ್ಪರ್ಧಿಸುವಂತೆ ಒತ್ತಾಯ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...