Homeದಲಿತ್ ಫೈಲ್ಸ್ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ...

ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ ತಟ್ಟಿದ ಮಹಿಳೆ

- Advertisement -
- Advertisement -

ಶಾಲೆಯಲ್ಲಿ ಶಿಕ್ಷಕರಿಂದ ಜಾತಿ ತಾರತಮ್ಯಕ್ಕೆ ಒಳಗಾಗಿ ತನ್ನ ಮಗ ಆಘಾತಕ್ಕೊಳಗಾಗಿದ್ದಾನೆ. ಅಧಿಕಾರಿಗಳಿಂದ ನನಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೇರಳದ ದಲಿತ ಬಾಲಕನೋರ್ವನ ತಾಯಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಇಡುಕ್ಕಿಯ ದಲಿತ ಮಹಿಳೆ ಪ್ರಿಯಾಂಕಾ ಸೋಮನ್ ಎಂಬವರು ತನ್ನ ಆರು ವರ್ಷದ ಮಗ ಪ್ರಣವ್ ಸಿಜಾಯ್ ಎಂಬಾತನಿಗೆ, ಆತ ಓದುತ್ತಿದ್ದ ಸ್ಲೀವಮಾಲಾದ ಸೇಂಟ್ ಬೆನೆಡಿಕ್ಟ್ಸ್ ಎಲ್ ಪಿ ಶಾಲೆಯಲ್ಲಿ ಜಾತಿ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದಾರೆ.

ಬಾಲಕ ಸಿಜಾಯ್‌ನ ಸಹಪಾಠಿಯೋರ್ವ ಅನಾರೋಗ್ಯದ ಕಾರಣ ತರಗತಿಯಲ್ಲಿ ವಾಂತಿ ಮಾಡಿಕೊಂಡಿದ್ದ. ಅದನ್ನು ಜಾತಿಯ ಕಾರಣಕ್ಕೆ ಶಿಕ್ಷಕರು ಸಿಜಾಯ್‌ ಕೈಯಲ್ಲಿ ಸ್ವಚ್ಚ ಮಾಡಿಸಿದ್ದಾರೆ ಎಂದಿದ್ದಾರೆ.

ಶಿಕ್ಷಕಿ ಮರಿಯಾ ಜೋಸೆಫ್ ಎಂಬಾಕೆ ತನ್ನ ಮಗನಿಂದ ಒತ್ತಾಯಪೂರ್ವಕವಾಗಿ ಸಹಪಾಠಿ ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದಾರೆ. ಇದರಿಂದ ಆತ ಭಯಬೀತನಾಗಿದ್ದಾನೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಶಾಲೆಗೆ ಹೋಗಲು ಕೇಳುತ್ತಿಲ್ಲ ಎಂದು ಪ್ರಿಯಾಂಕಾ ಸೋಮನ್ ಆರೋಪಿಸಿದ್ದಾರೆ.

ಪ್ರಿಯಾಂಕಾ ಅವರು ಮಕ್ಕಳ ಸಹಾಯವಾಣಿ, ಜಿಲ್ಲಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಸೇರಿದಂತೆ ಹಲವರಿಗೆ ದೂರುಗಳನ್ನು ನೀಡಿದ ಬಳಿಕ, ಶಾಲಾ ಆಡಳಿತ ಮಂಡಳಿಯು ಪ್ರಕರಣವನ್ನು ಕುಶಲತೆಯಿಂದ ನಿರ್ವಹಿಸಲು ಪ್ರಾರಂಭಿಸಿದೆ.

ಪ್ರಣವ್ ಸಿಜಾಯ್ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಂದ ನಾವು ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದೇವೆ. ಕೇವಲ ಸಿಜಾಯ್‌ ಅನ್ನು ಮಾತ್ರ ಗುರಿಯಾಗಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ, ಈ ಹೇಳಿಕೆ ಆಡಳಿತ ಮಂಡಳಿಗೆ ಸಂಕಷ್ಟ ತಂದಿಟ್ಟಿದೆ. ಮಕ್ಕಳಿಂದ ವಾಂತಿ ಸ್ವಚ್ಚ ಮಾಡಿಸುವ ಮೂಲಕ ಬಾಲ ಕಾರ್ಮಿಕ ಮತ್ತು ಮಕ್ಕಳ ಹಕ್ಕುಗಳ ಕಾನೂನುಗಳನ್ನು ಉಲ್ಲಂಘಿಸಿರುವುದನ್ನು ಆಡಳಿತ ಮಂಡಳಿ ಒಪ್ಪಿಕೊಂಡಿದೆ ಎಂದು ವರದಿಗಳು ಹೇಳಿವೆ.

ಶಾಲಾ ಆಡಳಿತ ಮಂಡಳಿ ಸ್ವತಃ ತಪ್ಪು ಒಪ್ಪಿಕೊಂಡಿದೆ. ಮಕ್ಕಳು ಕೂಡ ಹೇಳಿಕೆಗಳನ್ನು ನೀಡಿದ್ದಾರೆ. ಆದರೂ, ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯವರು ಪ್ರಕರಣದ ಗಂಭೀರತೆಯನ್ನು ಕುಗ್ಗಿಸಲು ನೋಡುತ್ತಿದ್ದಾರೆ. ಸ್ಥಳಿಯಾಡಳಿತದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ಶಾಲಾ ಆಡಳಿತ ಮಂಡಳಿಯನ್ನು ರಕ್ಷಿಸುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

“ನಾನು ನನ್ನ ಮಗನಿಗಾಗಿ ಮಾತ್ರ ಹೋರಾಟ ಮಾಡುತ್ತಿಲ್ಲ. ಇದು ಎಲ್ಲರಿಗೆ ಸಂಬಂಧಪಟ್ಟಿದ್ದು, ಈ ರೀತಿಯ ಕೃತ್ಯಗಳು ಕೊನೆಯಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಲೆಗಳಲ್ಲಿ ಸ್ವಚ್ಚತಾ ಸಿಬ್ಬಂದಿಯನ್ನು ನೇಮಿಸುವುದನ್ನು ಕಡ್ಡಾಯಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಕಡ್ಡಾಯ ಪಾಲನೆ ಖಚಿತಪಡಿಸಬೇಕು ಎಂದು ಪ್ರಿಯಾಂಕಾ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಶಾಲೆಯ ತರಗತಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿಯಲ್ಲಿ ಜನರು ತರಗತಿಯೊಳಗೆ ಹೋಗುವುದು ಬರುವುದು ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಇದರಿಂದ ವಾಂತಿ ಸ್ವಚ್ಚ ಮಾಡಿಸಿರುವುದು ಸ್ಪಷ್ಟ. ಸಿಸಿಟಿವಿ ದೃಶ್ಯವನ್ನು ಸಾಕ್ಷಿಯಾಗಿ ಪರಿಗಣಿಸಿ ಶಾಲೆಯ ವಿರುದ್ದ ಕ್ರಮ ಕೈಗೊಳ್ಳಬೇಕು. ಪೊಲೀಸರು ಶಾಲೆಯನ್ನು ರಕ್ಷಿಸುವ ಕೆಲಸ ಮಾಡಬಾರದು. ನನಗೆ ಸಾಕ್ಷ್ಯಗಳನ್ನು ತಿರುಚುವ ಆತಂಕವಿದೆ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕು ಎಂದು ಪ್ರಿಯಾಂಕಾ ಅವರು ಆಗ್ರಹಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳಿಂದ ನ್ಯಾಯ ಸಿಗದಿರುವ ಹಿನ್ನೆಲೆ ಪ್ರಿಯಾಂಕಾ ಅವರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಪತ್ರದಲ್ಲಿ ಜಾತಿ ತಾರತಮ್ಯ, ಮಕ್ಕಳ ಹಕ್ಕುಗಳು ಮತ್ತು ಬಾಲ ಕಾರ್ಮಿಕ ತಡೆ ಕಾನೂನುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕನಿಂದ ಜಾತಿಯ ಕಾರಣಕ್ಕೆ ವಾಂತಿ ಸ್ವಚ್ಚ ಮಾಡಿಸಿದ್ದಾರೆ ಎಂಬ ವಿಚಾರ ಕೇರಳದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಆದರೆ, ಅಧಿಕಾರಿಗಳು ಶಾಲೆಯಲ್ಲಿ ಮಕ್ಕಳಿಂದ ಸ್ವಚ್ಚತಾ ಕಾರ್ಯಗಳನ್ನು ಮಾಡಿಸುವುದು ಸಾಮಾನ್ಯ ವಿಷಯ ಎಂದಿದ್ದಾರೆ. ಶಿಕ್ಷಣ ಹೆಸರಿನಲ್ಲಿ ಮಕ್ಕಳ ಶೋಷಣೆಯನ್ನು ಸಾಮಾಣ್ಯೀಕರಿಸುವ ಮೂಲಕ ಕಾನೂನು ಜಾರಿ ಮಾಡಬೇಕಾದವರೇ ಉಲ್ಲಂಘಣೆ ಮಾಡುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

ವರದಿಗಳ ಪ್ರಕಾರ, ಜಾತಿ ದೌರ್ಜನ್ಯದ ಬಳಿಕ ಬಾಲಕ ಪ್ರಣವ್ ಅವರನ್ನು ಖಾಸಗಿ ಶಾಲೆಯಿಂದ ವರ್ಗಾವಣೆ ಪಡೆದು, ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...