Homeದಲಿತ್ ಫೈಲ್ಸ್ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ...

ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ ತಟ್ಟಿದ ಮಹಿಳೆ

- Advertisement -
- Advertisement -

ಶಾಲೆಯಲ್ಲಿ ಶಿಕ್ಷಕರಿಂದ ಜಾತಿ ತಾರತಮ್ಯಕ್ಕೆ ಒಳಗಾಗಿ ತನ್ನ ಮಗ ಆಘಾತಕ್ಕೊಳಗಾಗಿದ್ದಾನೆ. ಅಧಿಕಾರಿಗಳಿಂದ ನನಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೇರಳದ ದಲಿತ ಬಾಲಕನೋರ್ವನ ತಾಯಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಇಡುಕ್ಕಿಯ ದಲಿತ ಮಹಿಳೆ ಪ್ರಿಯಾಂಕಾ ಸೋಮನ್ ಎಂಬವರು ತನ್ನ ಆರು ವರ್ಷದ ಮಗ ಪ್ರಣವ್ ಸಿಜಾಯ್ ಎಂಬಾತನಿಗೆ, ಆತ ಓದುತ್ತಿದ್ದ ಸ್ಲೀವಮಾಲಾದ ಸೇಂಟ್ ಬೆನೆಡಿಕ್ಟ್ಸ್ ಎಲ್ ಪಿ ಶಾಲೆಯಲ್ಲಿ ಜಾತಿ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದಾರೆ.

ಬಾಲಕ ಸಿಜಾಯ್‌ನ ಸಹಪಾಠಿಯೋರ್ವ ಅನಾರೋಗ್ಯದ ಕಾರಣ ತರಗತಿಯಲ್ಲಿ ವಾಂತಿ ಮಾಡಿಕೊಂಡಿದ್ದ. ಅದನ್ನು ಜಾತಿಯ ಕಾರಣಕ್ಕೆ ಶಿಕ್ಷಕರು ಸಿಜಾಯ್‌ ಕೈಯಲ್ಲಿ ಸ್ವಚ್ಚ ಮಾಡಿಸಿದ್ದಾರೆ ಎಂದಿದ್ದಾರೆ.

ಶಿಕ್ಷಕಿ ಮರಿಯಾ ಜೋಸೆಫ್ ಎಂಬಾಕೆ ತನ್ನ ಮಗನಿಂದ ಒತ್ತಾಯಪೂರ್ವಕವಾಗಿ ಸಹಪಾಠಿ ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದಾರೆ. ಇದರಿಂದ ಆತ ಭಯಬೀತನಾಗಿದ್ದಾನೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಶಾಲೆಗೆ ಹೋಗಲು ಕೇಳುತ್ತಿಲ್ಲ ಎಂದು ಪ್ರಿಯಾಂಕಾ ಸೋಮನ್ ಆರೋಪಿಸಿದ್ದಾರೆ.

ಪ್ರಿಯಾಂಕಾ ಅವರು ಮಕ್ಕಳ ಸಹಾಯವಾಣಿ, ಜಿಲ್ಲಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಸೇರಿದಂತೆ ಹಲವರಿಗೆ ದೂರುಗಳನ್ನು ನೀಡಿದ ಬಳಿಕ, ಶಾಲಾ ಆಡಳಿತ ಮಂಡಳಿಯು ಪ್ರಕರಣವನ್ನು ಕುಶಲತೆಯಿಂದ ನಿರ್ವಹಿಸಲು ಪ್ರಾರಂಭಿಸಿದೆ.

ಪ್ರಣವ್ ಸಿಜಾಯ್ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಂದ ನಾವು ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದೇವೆ. ಕೇವಲ ಸಿಜಾಯ್‌ ಅನ್ನು ಮಾತ್ರ ಗುರಿಯಾಗಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ, ಈ ಹೇಳಿಕೆ ಆಡಳಿತ ಮಂಡಳಿಗೆ ಸಂಕಷ್ಟ ತಂದಿಟ್ಟಿದೆ. ಮಕ್ಕಳಿಂದ ವಾಂತಿ ಸ್ವಚ್ಚ ಮಾಡಿಸುವ ಮೂಲಕ ಬಾಲ ಕಾರ್ಮಿಕ ಮತ್ತು ಮಕ್ಕಳ ಹಕ್ಕುಗಳ ಕಾನೂನುಗಳನ್ನು ಉಲ್ಲಂಘಿಸಿರುವುದನ್ನು ಆಡಳಿತ ಮಂಡಳಿ ಒಪ್ಪಿಕೊಂಡಿದೆ ಎಂದು ವರದಿಗಳು ಹೇಳಿವೆ.

ಶಾಲಾ ಆಡಳಿತ ಮಂಡಳಿ ಸ್ವತಃ ತಪ್ಪು ಒಪ್ಪಿಕೊಂಡಿದೆ. ಮಕ್ಕಳು ಕೂಡ ಹೇಳಿಕೆಗಳನ್ನು ನೀಡಿದ್ದಾರೆ. ಆದರೂ, ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯವರು ಪ್ರಕರಣದ ಗಂಭೀರತೆಯನ್ನು ಕುಗ್ಗಿಸಲು ನೋಡುತ್ತಿದ್ದಾರೆ. ಸ್ಥಳಿಯಾಡಳಿತದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ಶಾಲಾ ಆಡಳಿತ ಮಂಡಳಿಯನ್ನು ರಕ್ಷಿಸುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

“ನಾನು ನನ್ನ ಮಗನಿಗಾಗಿ ಮಾತ್ರ ಹೋರಾಟ ಮಾಡುತ್ತಿಲ್ಲ. ಇದು ಎಲ್ಲರಿಗೆ ಸಂಬಂಧಪಟ್ಟಿದ್ದು, ಈ ರೀತಿಯ ಕೃತ್ಯಗಳು ಕೊನೆಯಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಲೆಗಳಲ್ಲಿ ಸ್ವಚ್ಚತಾ ಸಿಬ್ಬಂದಿಯನ್ನು ನೇಮಿಸುವುದನ್ನು ಕಡ್ಡಾಯಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಕಡ್ಡಾಯ ಪಾಲನೆ ಖಚಿತಪಡಿಸಬೇಕು ಎಂದು ಪ್ರಿಯಾಂಕಾ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಶಾಲೆಯ ತರಗತಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿಯಲ್ಲಿ ಜನರು ತರಗತಿಯೊಳಗೆ ಹೋಗುವುದು ಬರುವುದು ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಇದರಿಂದ ವಾಂತಿ ಸ್ವಚ್ಚ ಮಾಡಿಸಿರುವುದು ಸ್ಪಷ್ಟ. ಸಿಸಿಟಿವಿ ದೃಶ್ಯವನ್ನು ಸಾಕ್ಷಿಯಾಗಿ ಪರಿಗಣಿಸಿ ಶಾಲೆಯ ವಿರುದ್ದ ಕ್ರಮ ಕೈಗೊಳ್ಳಬೇಕು. ಪೊಲೀಸರು ಶಾಲೆಯನ್ನು ರಕ್ಷಿಸುವ ಕೆಲಸ ಮಾಡಬಾರದು. ನನಗೆ ಸಾಕ್ಷ್ಯಗಳನ್ನು ತಿರುಚುವ ಆತಂಕವಿದೆ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕು ಎಂದು ಪ್ರಿಯಾಂಕಾ ಅವರು ಆಗ್ರಹಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳಿಂದ ನ್ಯಾಯ ಸಿಗದಿರುವ ಹಿನ್ನೆಲೆ ಪ್ರಿಯಾಂಕಾ ಅವರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಪತ್ರದಲ್ಲಿ ಜಾತಿ ತಾರತಮ್ಯ, ಮಕ್ಕಳ ಹಕ್ಕುಗಳು ಮತ್ತು ಬಾಲ ಕಾರ್ಮಿಕ ತಡೆ ಕಾನೂನುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕನಿಂದ ಜಾತಿಯ ಕಾರಣಕ್ಕೆ ವಾಂತಿ ಸ್ವಚ್ಚ ಮಾಡಿಸಿದ್ದಾರೆ ಎಂಬ ವಿಚಾರ ಕೇರಳದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಆದರೆ, ಅಧಿಕಾರಿಗಳು ಶಾಲೆಯಲ್ಲಿ ಮಕ್ಕಳಿಂದ ಸ್ವಚ್ಚತಾ ಕಾರ್ಯಗಳನ್ನು ಮಾಡಿಸುವುದು ಸಾಮಾನ್ಯ ವಿಷಯ ಎಂದಿದ್ದಾರೆ. ಶಿಕ್ಷಣ ಹೆಸರಿನಲ್ಲಿ ಮಕ್ಕಳ ಶೋಷಣೆಯನ್ನು ಸಾಮಾಣ್ಯೀಕರಿಸುವ ಮೂಲಕ ಕಾನೂನು ಜಾರಿ ಮಾಡಬೇಕಾದವರೇ ಉಲ್ಲಂಘಣೆ ಮಾಡುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

ವರದಿಗಳ ಪ್ರಕಾರ, ಜಾತಿ ದೌರ್ಜನ್ಯದ ಬಳಿಕ ಬಾಲಕ ಪ್ರಣವ್ ಅವರನ್ನು ಖಾಸಗಿ ಶಾಲೆಯಿಂದ ವರ್ಗಾವಣೆ ಪಡೆದು, ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...