Homeದಲಿತ್ ಫೈಲ್ಸ್ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ...

ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ ತಟ್ಟಿದ ಮಹಿಳೆ

- Advertisement -
- Advertisement -

ಶಾಲೆಯಲ್ಲಿ ಶಿಕ್ಷಕರಿಂದ ಜಾತಿ ತಾರತಮ್ಯಕ್ಕೆ ಒಳಗಾಗಿ ತನ್ನ ಮಗ ಆಘಾತಕ್ಕೊಳಗಾಗಿದ್ದಾನೆ. ಅಧಿಕಾರಿಗಳಿಂದ ನನಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೇರಳದ ದಲಿತ ಬಾಲಕನೋರ್ವನ ತಾಯಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಇಡುಕ್ಕಿಯ ದಲಿತ ಮಹಿಳೆ ಪ್ರಿಯಾಂಕಾ ಸೋಮನ್ ಎಂಬವರು ತನ್ನ ಆರು ವರ್ಷದ ಮಗ ಪ್ರಣವ್ ಸಿಜಾಯ್ ಎಂಬಾತನಿಗೆ, ಆತ ಓದುತ್ತಿದ್ದ ಸ್ಲೀವಮಾಲಾದ ಸೇಂಟ್ ಬೆನೆಡಿಕ್ಟ್ಸ್ ಎಲ್ ಪಿ ಶಾಲೆಯಲ್ಲಿ ಜಾತಿ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದಾರೆ.

ಬಾಲಕ ಸಿಜಾಯ್‌ನ ಸಹಪಾಠಿಯೋರ್ವ ಅನಾರೋಗ್ಯದ ಕಾರಣ ತರಗತಿಯಲ್ಲಿ ವಾಂತಿ ಮಾಡಿಕೊಂಡಿದ್ದ. ಅದನ್ನು ಜಾತಿಯ ಕಾರಣಕ್ಕೆ ಶಿಕ್ಷಕರು ಸಿಜಾಯ್‌ ಕೈಯಲ್ಲಿ ಸ್ವಚ್ಚ ಮಾಡಿಸಿದ್ದಾರೆ ಎಂದಿದ್ದಾರೆ.

ಶಿಕ್ಷಕಿ ಮರಿಯಾ ಜೋಸೆಫ್ ಎಂಬಾಕೆ ತನ್ನ ಮಗನಿಂದ ಒತ್ತಾಯಪೂರ್ವಕವಾಗಿ ಸಹಪಾಠಿ ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದಾರೆ. ಇದರಿಂದ ಆತ ಭಯಬೀತನಾಗಿದ್ದಾನೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಶಾಲೆಗೆ ಹೋಗಲು ಕೇಳುತ್ತಿಲ್ಲ ಎಂದು ಪ್ರಿಯಾಂಕಾ ಸೋಮನ್ ಆರೋಪಿಸಿದ್ದಾರೆ.

ಪ್ರಿಯಾಂಕಾ ಅವರು ಮಕ್ಕಳ ಸಹಾಯವಾಣಿ, ಜಿಲ್ಲಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಸೇರಿದಂತೆ ಹಲವರಿಗೆ ದೂರುಗಳನ್ನು ನೀಡಿದ ಬಳಿಕ, ಶಾಲಾ ಆಡಳಿತ ಮಂಡಳಿಯು ಪ್ರಕರಣವನ್ನು ಕುಶಲತೆಯಿಂದ ನಿರ್ವಹಿಸಲು ಪ್ರಾರಂಭಿಸಿದೆ.

ಪ್ರಣವ್ ಸಿಜಾಯ್ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಂದ ನಾವು ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದೇವೆ. ಕೇವಲ ಸಿಜಾಯ್‌ ಅನ್ನು ಮಾತ್ರ ಗುರಿಯಾಗಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ, ಈ ಹೇಳಿಕೆ ಆಡಳಿತ ಮಂಡಳಿಗೆ ಸಂಕಷ್ಟ ತಂದಿಟ್ಟಿದೆ. ಮಕ್ಕಳಿಂದ ವಾಂತಿ ಸ್ವಚ್ಚ ಮಾಡಿಸುವ ಮೂಲಕ ಬಾಲ ಕಾರ್ಮಿಕ ಮತ್ತು ಮಕ್ಕಳ ಹಕ್ಕುಗಳ ಕಾನೂನುಗಳನ್ನು ಉಲ್ಲಂಘಿಸಿರುವುದನ್ನು ಆಡಳಿತ ಮಂಡಳಿ ಒಪ್ಪಿಕೊಂಡಿದೆ ಎಂದು ವರದಿಗಳು ಹೇಳಿವೆ.

ಶಾಲಾ ಆಡಳಿತ ಮಂಡಳಿ ಸ್ವತಃ ತಪ್ಪು ಒಪ್ಪಿಕೊಂಡಿದೆ. ಮಕ್ಕಳು ಕೂಡ ಹೇಳಿಕೆಗಳನ್ನು ನೀಡಿದ್ದಾರೆ. ಆದರೂ, ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯವರು ಪ್ರಕರಣದ ಗಂಭೀರತೆಯನ್ನು ಕುಗ್ಗಿಸಲು ನೋಡುತ್ತಿದ್ದಾರೆ. ಸ್ಥಳಿಯಾಡಳಿತದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ಶಾಲಾ ಆಡಳಿತ ಮಂಡಳಿಯನ್ನು ರಕ್ಷಿಸುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

“ನಾನು ನನ್ನ ಮಗನಿಗಾಗಿ ಮಾತ್ರ ಹೋರಾಟ ಮಾಡುತ್ತಿಲ್ಲ. ಇದು ಎಲ್ಲರಿಗೆ ಸಂಬಂಧಪಟ್ಟಿದ್ದು, ಈ ರೀತಿಯ ಕೃತ್ಯಗಳು ಕೊನೆಯಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಲೆಗಳಲ್ಲಿ ಸ್ವಚ್ಚತಾ ಸಿಬ್ಬಂದಿಯನ್ನು ನೇಮಿಸುವುದನ್ನು ಕಡ್ಡಾಯಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಕಡ್ಡಾಯ ಪಾಲನೆ ಖಚಿತಪಡಿಸಬೇಕು ಎಂದು ಪ್ರಿಯಾಂಕಾ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಶಾಲೆಯ ತರಗತಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿಯಲ್ಲಿ ಜನರು ತರಗತಿಯೊಳಗೆ ಹೋಗುವುದು ಬರುವುದು ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಇದರಿಂದ ವಾಂತಿ ಸ್ವಚ್ಚ ಮಾಡಿಸಿರುವುದು ಸ್ಪಷ್ಟ. ಸಿಸಿಟಿವಿ ದೃಶ್ಯವನ್ನು ಸಾಕ್ಷಿಯಾಗಿ ಪರಿಗಣಿಸಿ ಶಾಲೆಯ ವಿರುದ್ದ ಕ್ರಮ ಕೈಗೊಳ್ಳಬೇಕು. ಪೊಲೀಸರು ಶಾಲೆಯನ್ನು ರಕ್ಷಿಸುವ ಕೆಲಸ ಮಾಡಬಾರದು. ನನಗೆ ಸಾಕ್ಷ್ಯಗಳನ್ನು ತಿರುಚುವ ಆತಂಕವಿದೆ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕು ಎಂದು ಪ್ರಿಯಾಂಕಾ ಅವರು ಆಗ್ರಹಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳಿಂದ ನ್ಯಾಯ ಸಿಗದಿರುವ ಹಿನ್ನೆಲೆ ಪ್ರಿಯಾಂಕಾ ಅವರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಪತ್ರದಲ್ಲಿ ಜಾತಿ ತಾರತಮ್ಯ, ಮಕ್ಕಳ ಹಕ್ಕುಗಳು ಮತ್ತು ಬಾಲ ಕಾರ್ಮಿಕ ತಡೆ ಕಾನೂನುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕನಿಂದ ಜಾತಿಯ ಕಾರಣಕ್ಕೆ ವಾಂತಿ ಸ್ವಚ್ಚ ಮಾಡಿಸಿದ್ದಾರೆ ಎಂಬ ವಿಚಾರ ಕೇರಳದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಆದರೆ, ಅಧಿಕಾರಿಗಳು ಶಾಲೆಯಲ್ಲಿ ಮಕ್ಕಳಿಂದ ಸ್ವಚ್ಚತಾ ಕಾರ್ಯಗಳನ್ನು ಮಾಡಿಸುವುದು ಸಾಮಾನ್ಯ ವಿಷಯ ಎಂದಿದ್ದಾರೆ. ಶಿಕ್ಷಣ ಹೆಸರಿನಲ್ಲಿ ಮಕ್ಕಳ ಶೋಷಣೆಯನ್ನು ಸಾಮಾಣ್ಯೀಕರಿಸುವ ಮೂಲಕ ಕಾನೂನು ಜಾರಿ ಮಾಡಬೇಕಾದವರೇ ಉಲ್ಲಂಘಣೆ ಮಾಡುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

ವರದಿಗಳ ಪ್ರಕಾರ, ಜಾತಿ ದೌರ್ಜನ್ಯದ ಬಳಿಕ ಬಾಲಕ ಪ್ರಣವ್ ಅವರನ್ನು ಖಾಸಗಿ ಶಾಲೆಯಿಂದ ವರ್ಗಾವಣೆ ಪಡೆದು, ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...