Homeದಲಿತ್ ಫೈಲ್ಸ್ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ...

ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ ತಟ್ಟಿದ ಮಹಿಳೆ

- Advertisement -
- Advertisement -

ಶಾಲೆಯಲ್ಲಿ ಶಿಕ್ಷಕರಿಂದ ಜಾತಿ ತಾರತಮ್ಯಕ್ಕೆ ಒಳಗಾಗಿ ತನ್ನ ಮಗ ಆಘಾತಕ್ಕೊಳಗಾಗಿದ್ದಾನೆ. ಅಧಿಕಾರಿಗಳಿಂದ ನನಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೇರಳದ ದಲಿತ ಬಾಲಕನೋರ್ವನ ತಾಯಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಇಡುಕ್ಕಿಯ ದಲಿತ ಮಹಿಳೆ ಪ್ರಿಯಾಂಕಾ ಸೋಮನ್ ಎಂಬವರು ತನ್ನ ಆರು ವರ್ಷದ ಮಗ ಪ್ರಣವ್ ಸಿಜಾಯ್ ಎಂಬಾತನಿಗೆ, ಆತ ಓದುತ್ತಿದ್ದ ಸ್ಲೀವಮಾಲಾದ ಸೇಂಟ್ ಬೆನೆಡಿಕ್ಟ್ಸ್ ಎಲ್ ಪಿ ಶಾಲೆಯಲ್ಲಿ ಜಾತಿ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದಾರೆ.

ಬಾಲಕ ಸಿಜಾಯ್‌ನ ಸಹಪಾಠಿಯೋರ್ವ ಅನಾರೋಗ್ಯದ ಕಾರಣ ತರಗತಿಯಲ್ಲಿ ವಾಂತಿ ಮಾಡಿಕೊಂಡಿದ್ದ. ಅದನ್ನು ಜಾತಿಯ ಕಾರಣಕ್ಕೆ ಶಿಕ್ಷಕರು ಸಿಜಾಯ್‌ ಕೈಯಲ್ಲಿ ಸ್ವಚ್ಚ ಮಾಡಿಸಿದ್ದಾರೆ ಎಂದಿದ್ದಾರೆ.

ಶಿಕ್ಷಕಿ ಮರಿಯಾ ಜೋಸೆಫ್ ಎಂಬಾಕೆ ತನ್ನ ಮಗನಿಂದ ಒತ್ತಾಯಪೂರ್ವಕವಾಗಿ ಸಹಪಾಠಿ ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದಾರೆ. ಇದರಿಂದ ಆತ ಭಯಬೀತನಾಗಿದ್ದಾನೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಶಾಲೆಗೆ ಹೋಗಲು ಕೇಳುತ್ತಿಲ್ಲ ಎಂದು ಪ್ರಿಯಾಂಕಾ ಸೋಮನ್ ಆರೋಪಿಸಿದ್ದಾರೆ.

ಪ್ರಿಯಾಂಕಾ ಅವರು ಮಕ್ಕಳ ಸಹಾಯವಾಣಿ, ಜಿಲ್ಲಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಸೇರಿದಂತೆ ಹಲವರಿಗೆ ದೂರುಗಳನ್ನು ನೀಡಿದ ಬಳಿಕ, ಶಾಲಾ ಆಡಳಿತ ಮಂಡಳಿಯು ಪ್ರಕರಣವನ್ನು ಕುಶಲತೆಯಿಂದ ನಿರ್ವಹಿಸಲು ಪ್ರಾರಂಭಿಸಿದೆ.

ಪ್ರಣವ್ ಸಿಜಾಯ್ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಂದ ನಾವು ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದೇವೆ. ಕೇವಲ ಸಿಜಾಯ್‌ ಅನ್ನು ಮಾತ್ರ ಗುರಿಯಾಗಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ, ಈ ಹೇಳಿಕೆ ಆಡಳಿತ ಮಂಡಳಿಗೆ ಸಂಕಷ್ಟ ತಂದಿಟ್ಟಿದೆ. ಮಕ್ಕಳಿಂದ ವಾಂತಿ ಸ್ವಚ್ಚ ಮಾಡಿಸುವ ಮೂಲಕ ಬಾಲ ಕಾರ್ಮಿಕ ಮತ್ತು ಮಕ್ಕಳ ಹಕ್ಕುಗಳ ಕಾನೂನುಗಳನ್ನು ಉಲ್ಲಂಘಿಸಿರುವುದನ್ನು ಆಡಳಿತ ಮಂಡಳಿ ಒಪ್ಪಿಕೊಂಡಿದೆ ಎಂದು ವರದಿಗಳು ಹೇಳಿವೆ.

ಶಾಲಾ ಆಡಳಿತ ಮಂಡಳಿ ಸ್ವತಃ ತಪ್ಪು ಒಪ್ಪಿಕೊಂಡಿದೆ. ಮಕ್ಕಳು ಕೂಡ ಹೇಳಿಕೆಗಳನ್ನು ನೀಡಿದ್ದಾರೆ. ಆದರೂ, ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯವರು ಪ್ರಕರಣದ ಗಂಭೀರತೆಯನ್ನು ಕುಗ್ಗಿಸಲು ನೋಡುತ್ತಿದ್ದಾರೆ. ಸ್ಥಳಿಯಾಡಳಿತದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ಶಾಲಾ ಆಡಳಿತ ಮಂಡಳಿಯನ್ನು ರಕ್ಷಿಸುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

“ನಾನು ನನ್ನ ಮಗನಿಗಾಗಿ ಮಾತ್ರ ಹೋರಾಟ ಮಾಡುತ್ತಿಲ್ಲ. ಇದು ಎಲ್ಲರಿಗೆ ಸಂಬಂಧಪಟ್ಟಿದ್ದು, ಈ ರೀತಿಯ ಕೃತ್ಯಗಳು ಕೊನೆಯಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಲೆಗಳಲ್ಲಿ ಸ್ವಚ್ಚತಾ ಸಿಬ್ಬಂದಿಯನ್ನು ನೇಮಿಸುವುದನ್ನು ಕಡ್ಡಾಯಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಕಡ್ಡಾಯ ಪಾಲನೆ ಖಚಿತಪಡಿಸಬೇಕು ಎಂದು ಪ್ರಿಯಾಂಕಾ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಶಾಲೆಯ ತರಗತಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿಯಲ್ಲಿ ಜನರು ತರಗತಿಯೊಳಗೆ ಹೋಗುವುದು ಬರುವುದು ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಇದರಿಂದ ವಾಂತಿ ಸ್ವಚ್ಚ ಮಾಡಿಸಿರುವುದು ಸ್ಪಷ್ಟ. ಸಿಸಿಟಿವಿ ದೃಶ್ಯವನ್ನು ಸಾಕ್ಷಿಯಾಗಿ ಪರಿಗಣಿಸಿ ಶಾಲೆಯ ವಿರುದ್ದ ಕ್ರಮ ಕೈಗೊಳ್ಳಬೇಕು. ಪೊಲೀಸರು ಶಾಲೆಯನ್ನು ರಕ್ಷಿಸುವ ಕೆಲಸ ಮಾಡಬಾರದು. ನನಗೆ ಸಾಕ್ಷ್ಯಗಳನ್ನು ತಿರುಚುವ ಆತಂಕವಿದೆ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕು ಎಂದು ಪ್ರಿಯಾಂಕಾ ಅವರು ಆಗ್ರಹಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳಿಂದ ನ್ಯಾಯ ಸಿಗದಿರುವ ಹಿನ್ನೆಲೆ ಪ್ರಿಯಾಂಕಾ ಅವರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಪತ್ರದಲ್ಲಿ ಜಾತಿ ತಾರತಮ್ಯ, ಮಕ್ಕಳ ಹಕ್ಕುಗಳು ಮತ್ತು ಬಾಲ ಕಾರ್ಮಿಕ ತಡೆ ಕಾನೂನುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕನಿಂದ ಜಾತಿಯ ಕಾರಣಕ್ಕೆ ವಾಂತಿ ಸ್ವಚ್ಚ ಮಾಡಿಸಿದ್ದಾರೆ ಎಂಬ ವಿಚಾರ ಕೇರಳದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಆದರೆ, ಅಧಿಕಾರಿಗಳು ಶಾಲೆಯಲ್ಲಿ ಮಕ್ಕಳಿಂದ ಸ್ವಚ್ಚತಾ ಕಾರ್ಯಗಳನ್ನು ಮಾಡಿಸುವುದು ಸಾಮಾನ್ಯ ವಿಷಯ ಎಂದಿದ್ದಾರೆ. ಶಿಕ್ಷಣ ಹೆಸರಿನಲ್ಲಿ ಮಕ್ಕಳ ಶೋಷಣೆಯನ್ನು ಸಾಮಾಣ್ಯೀಕರಿಸುವ ಮೂಲಕ ಕಾನೂನು ಜಾರಿ ಮಾಡಬೇಕಾದವರೇ ಉಲ್ಲಂಘಣೆ ಮಾಡುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

ವರದಿಗಳ ಪ್ರಕಾರ, ಜಾತಿ ದೌರ್ಜನ್ಯದ ಬಳಿಕ ಬಾಲಕ ಪ್ರಣವ್ ಅವರನ್ನು ಖಾಸಗಿ ಶಾಲೆಯಿಂದ ವರ್ಗಾವಣೆ ಪಡೆದು, ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...