Homeಕರ್ನಾಟಕವಿಧಾನ ಸೌಧದಲ್ಲಿ ‘ಕರ್ತವ್ಯ’, ಉಪ್ಪಾರಪೇಟೆಯಲ್ಲಿ ‘ರೋಲ್ ಕಾಲ್’: ಪೊಲೀಸ್ ಅಮಾನತು

ವಿಧಾನ ಸೌಧದಲ್ಲಿ ‘ಕರ್ತವ್ಯ’, ಉಪ್ಪಾರಪೇಟೆಯಲ್ಲಿ ‘ರೋಲ್ ಕಾಲ್’: ಪೊಲೀಸ್ ಅಮಾನತು

- Advertisement -
- Advertisement -

ಉಪ್ಪಾರಪೇಟೆ ಠಾಣೆಯಿಂದ ವಿಧಾನಸೌಧ ಠಾಣೆಗೆ ವರ್ಗಾವಣೆಗೊಂಡು 11 ತಿಂಗಳಾದರೂ ಕೆಲಸಕ್ಕೆ ಹಾಜರಾಗದ ಸಹಾಯಕ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಎಎಸ್‌ಐ) ಅವರನ್ನು ಅಮಾನತುಗೊಳಿಸಲಾಗಿದೆ. ಅವರು ಉಪ್ಪಾರಪೇಟೆ ಠಾಣೆಯಲ್ಲಿ ಹಿರಿಯ ಅಧಿಕಾರಿಗಳಿಗೆ ತಿಳಿಯದಂತೆ ‘ಅಕ್ರಮ ಕೆಲಸ’ ಮಾಡುತ್ತಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.

ಉಪ್ಪಾರಪೇಟೆ ಠಾಣೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಶ್ರೀನಿವಾಸ್ ಶೆಟ್ಟಿ ಅವರನ್ನು ಕಳೆದ ವರ್ಷದ ಆರಂಭದಲ್ಲಿ ವಿಧಾನಸೌಧ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. 11 ತಿಂಗಳು ಕಳೆದರೂ ಅವರು ಅಲ್ಲಿ ಕೆಲಸಕ್ಕೆ ಹಾಜರಾಗದೆ, ಉಪ್ಪಾರಪೇಟೆ ಠಾಣೆಯಲ್ಲೆ ಕೆಲಸ ಮುಂದುವರೆಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ವಾರಕ್ಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಉಪ್ಪಾರಪೇಟೆ ಠಾಣೆಗೆ ಬರುತ್ತಿದ್ದರು. ಬರುವಾಗ ಅಪರಾಧಗಳಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಕರೆತರುತ್ತಾರೆ. ನಂತರ ಎಫ್‌ಐಆರ್‌ಗಳನ್ನು ದಾಖಲಿಸದೆ ಹಣ ಸಂಗ್ರಹಿಸಿ ಅವರನ್ನು ಬಿಡುತ್ತಾರೆ. ಅವರು ತಮ್ಮ ಕಾನೂನುಬಾಹಿರ ವ್ಯವಹಾರವನ್ನು ನಡೆಸಲು ಮತ್ತು ಅಪರಾಧಿಗಳೊಂದಿಗೆ ಒಪ್ಪಂದಗಳನ್ನು ಮಾಡಲು ಠಾಣೆಯನ್ನು ಬಳಸಿಕೊಂಡಿದ್ದಾರೆ” ಎಂದು ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ.

ಹಿರಿಯ ಅಧಿಕಾರಿಗಳು ಸೇರಿದಂತೆ ಯಾರೂ ಅವರನ್ನು ಪ್ರಶ್ನಿಸಿರಲಿಲ್ಲ. ಇತ್ಯರ್ಥವಾಗದ ಕೆಲವು ಪ್ರಮುಖ ಪ್ರಕರಣಗಳ ತನಿಖೆಗೆ ಅವರ ಅಗತ್ಯವಿತ್ತು ಎಂದು ಹೇಳಿ ಉಪ್ಪಾರಪೇಟೆ ಪೊಲೀಸರು ಶ್ರೀನಿವಾಸ್ ಶೆಟ್ಟಿಯನ್ನು ಉಳಿಸಿಕೊಂಡಿದ್ದರು ಎಂದು ವಿಧಾನಸೌಧ ಠಾಣೆಯ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. ಇದೆಲ್ಲವೂ ಹಿರಿಯ ಅಧಿಕಾರಿಗಳ ಸೂಕ್ತ ಅನುಮತಿಯಿಲ್ಲದೆ ನಡೆದಿದೆ ಎಂದು ವರದಿಯಾಗಿದೆ.

ಬುಧವಾರ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಗಾಂಧಿನಗರದ ಬಾರ್ ಅಂಡ್ ರೆಸ್ಟೋರೆಂಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ಘಟನೆಯ ನಂತರ ಶ್ರೀನಿವಾಸ್ ಶೆಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.

“ಇಡೀ ಪ್ರಕರಣ ಸ್ಟೇಷನ್ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. 11 ತಿಂಗಳಿಂದ ಎಎಸ್‌ಐ ಕೆಲಸಕ್ಕೆ ಹಾಜರಾಗದಿದ್ದರೂ ವಿಧಾನಸೌಧ ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ. ಅವರ ಮೇಲೆ ಆರೋಪಗಳಿದ್ದರೂ ಉಪ್ಪಾರಪೇಟೆ ಠಾಣೆಯ ಅಧಿಕಾರಿಗಳು ಆತನ ಚಟುವಟಿಕೆಗಳನ್ನು ಪರಿಶೀಲಿಸಲು ತಲೆ ಕೆಡಿಸಿಕೊಂಡಿರಲಿಲ್ಲ. ಹೀಗಿರುವಾಗ, ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ” ಎಂದು ಪ್ರಕರಣದ ಬಗ್ಗೆ ತಿಳಿದಿರುವ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

TNIE ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾಗಿ ಹೇಳಿದೆ. “ಇದರ ಬಗ್ಗೆ ವರದಿ ಮಾಡಲು ಏನಿದೆ?” ಎಂದು ವರದಿಗಾರರೊಂದಿಗೆ ಡಿಸಿಪಿ (ಆಡಳಿತ) ನಿಶಾ ಜೇಮ್ಸ್ ಪ್ರಶ್ನಿಸಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...