Homeಕರ್ನಾಟಕವಿಧಾನ ಸೌಧದಲ್ಲಿ ‘ಕರ್ತವ್ಯ’, ಉಪ್ಪಾರಪೇಟೆಯಲ್ಲಿ ‘ರೋಲ್ ಕಾಲ್’: ಪೊಲೀಸ್ ಅಮಾನತು

ವಿಧಾನ ಸೌಧದಲ್ಲಿ ‘ಕರ್ತವ್ಯ’, ಉಪ್ಪಾರಪೇಟೆಯಲ್ಲಿ ‘ರೋಲ್ ಕಾಲ್’: ಪೊಲೀಸ್ ಅಮಾನತು

- Advertisement -
- Advertisement -

ಉಪ್ಪಾರಪೇಟೆ ಠಾಣೆಯಿಂದ ವಿಧಾನಸೌಧ ಠಾಣೆಗೆ ವರ್ಗಾವಣೆಗೊಂಡು 11 ತಿಂಗಳಾದರೂ ಕೆಲಸಕ್ಕೆ ಹಾಜರಾಗದ ಸಹಾಯಕ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಎಎಸ್‌ಐ) ಅವರನ್ನು ಅಮಾನತುಗೊಳಿಸಲಾಗಿದೆ. ಅವರು ಉಪ್ಪಾರಪೇಟೆ ಠಾಣೆಯಲ್ಲಿ ಹಿರಿಯ ಅಧಿಕಾರಿಗಳಿಗೆ ತಿಳಿಯದಂತೆ ‘ಅಕ್ರಮ ಕೆಲಸ’ ಮಾಡುತ್ತಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.

ಉಪ್ಪಾರಪೇಟೆ ಠಾಣೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಶ್ರೀನಿವಾಸ್ ಶೆಟ್ಟಿ ಅವರನ್ನು ಕಳೆದ ವರ್ಷದ ಆರಂಭದಲ್ಲಿ ವಿಧಾನಸೌಧ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. 11 ತಿಂಗಳು ಕಳೆದರೂ ಅವರು ಅಲ್ಲಿ ಕೆಲಸಕ್ಕೆ ಹಾಜರಾಗದೆ, ಉಪ್ಪಾರಪೇಟೆ ಠಾಣೆಯಲ್ಲೆ ಕೆಲಸ ಮುಂದುವರೆಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ವಾರಕ್ಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಉಪ್ಪಾರಪೇಟೆ ಠಾಣೆಗೆ ಬರುತ್ತಿದ್ದರು. ಬರುವಾಗ ಅಪರಾಧಗಳಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಕರೆತರುತ್ತಾರೆ. ನಂತರ ಎಫ್‌ಐಆರ್‌ಗಳನ್ನು ದಾಖಲಿಸದೆ ಹಣ ಸಂಗ್ರಹಿಸಿ ಅವರನ್ನು ಬಿಡುತ್ತಾರೆ. ಅವರು ತಮ್ಮ ಕಾನೂನುಬಾಹಿರ ವ್ಯವಹಾರವನ್ನು ನಡೆಸಲು ಮತ್ತು ಅಪರಾಧಿಗಳೊಂದಿಗೆ ಒಪ್ಪಂದಗಳನ್ನು ಮಾಡಲು ಠಾಣೆಯನ್ನು ಬಳಸಿಕೊಂಡಿದ್ದಾರೆ” ಎಂದು ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ.

ಹಿರಿಯ ಅಧಿಕಾರಿಗಳು ಸೇರಿದಂತೆ ಯಾರೂ ಅವರನ್ನು ಪ್ರಶ್ನಿಸಿರಲಿಲ್ಲ. ಇತ್ಯರ್ಥವಾಗದ ಕೆಲವು ಪ್ರಮುಖ ಪ್ರಕರಣಗಳ ತನಿಖೆಗೆ ಅವರ ಅಗತ್ಯವಿತ್ತು ಎಂದು ಹೇಳಿ ಉಪ್ಪಾರಪೇಟೆ ಪೊಲೀಸರು ಶ್ರೀನಿವಾಸ್ ಶೆಟ್ಟಿಯನ್ನು ಉಳಿಸಿಕೊಂಡಿದ್ದರು ಎಂದು ವಿಧಾನಸೌಧ ಠಾಣೆಯ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. ಇದೆಲ್ಲವೂ ಹಿರಿಯ ಅಧಿಕಾರಿಗಳ ಸೂಕ್ತ ಅನುಮತಿಯಿಲ್ಲದೆ ನಡೆದಿದೆ ಎಂದು ವರದಿಯಾಗಿದೆ.

ಬುಧವಾರ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಗಾಂಧಿನಗರದ ಬಾರ್ ಅಂಡ್ ರೆಸ್ಟೋರೆಂಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ಘಟನೆಯ ನಂತರ ಶ್ರೀನಿವಾಸ್ ಶೆಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.

“ಇಡೀ ಪ್ರಕರಣ ಸ್ಟೇಷನ್ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. 11 ತಿಂಗಳಿಂದ ಎಎಸ್‌ಐ ಕೆಲಸಕ್ಕೆ ಹಾಜರಾಗದಿದ್ದರೂ ವಿಧಾನಸೌಧ ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ. ಅವರ ಮೇಲೆ ಆರೋಪಗಳಿದ್ದರೂ ಉಪ್ಪಾರಪೇಟೆ ಠಾಣೆಯ ಅಧಿಕಾರಿಗಳು ಆತನ ಚಟುವಟಿಕೆಗಳನ್ನು ಪರಿಶೀಲಿಸಲು ತಲೆ ಕೆಡಿಸಿಕೊಂಡಿರಲಿಲ್ಲ. ಹೀಗಿರುವಾಗ, ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ” ಎಂದು ಪ್ರಕರಣದ ಬಗ್ಗೆ ತಿಳಿದಿರುವ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

TNIE ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾಗಿ ಹೇಳಿದೆ. “ಇದರ ಬಗ್ಗೆ ವರದಿ ಮಾಡಲು ಏನಿದೆ?” ಎಂದು ವರದಿಗಾರರೊಂದಿಗೆ ಡಿಸಿಪಿ (ಆಡಳಿತ) ನಿಶಾ ಜೇಮ್ಸ್ ಪ್ರಶ್ನಿಸಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...