Homeಕರ್ನಾಟಕವಿಧಾನ ಸೌಧದಲ್ಲಿ ‘ಕರ್ತವ್ಯ’, ಉಪ್ಪಾರಪೇಟೆಯಲ್ಲಿ ‘ರೋಲ್ ಕಾಲ್’: ಪೊಲೀಸ್ ಅಮಾನತು

ವಿಧಾನ ಸೌಧದಲ್ಲಿ ‘ಕರ್ತವ್ಯ’, ಉಪ್ಪಾರಪೇಟೆಯಲ್ಲಿ ‘ರೋಲ್ ಕಾಲ್’: ಪೊಲೀಸ್ ಅಮಾನತು

- Advertisement -
- Advertisement -

ಉಪ್ಪಾರಪೇಟೆ ಠಾಣೆಯಿಂದ ವಿಧಾನಸೌಧ ಠಾಣೆಗೆ ವರ್ಗಾವಣೆಗೊಂಡು 11 ತಿಂಗಳಾದರೂ ಕೆಲಸಕ್ಕೆ ಹಾಜರಾಗದ ಸಹಾಯಕ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಎಎಸ್‌ಐ) ಅವರನ್ನು ಅಮಾನತುಗೊಳಿಸಲಾಗಿದೆ. ಅವರು ಉಪ್ಪಾರಪೇಟೆ ಠಾಣೆಯಲ್ಲಿ ಹಿರಿಯ ಅಧಿಕಾರಿಗಳಿಗೆ ತಿಳಿಯದಂತೆ ‘ಅಕ್ರಮ ಕೆಲಸ’ ಮಾಡುತ್ತಿದ್ದು, ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.

ಉಪ್ಪಾರಪೇಟೆ ಠಾಣೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದ ಶ್ರೀನಿವಾಸ್ ಶೆಟ್ಟಿ ಅವರನ್ನು ಕಳೆದ ವರ್ಷದ ಆರಂಭದಲ್ಲಿ ವಿಧಾನಸೌಧ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. 11 ತಿಂಗಳು ಕಳೆದರೂ ಅವರು ಅಲ್ಲಿ ಕೆಲಸಕ್ಕೆ ಹಾಜರಾಗದೆ, ಉಪ್ಪಾರಪೇಟೆ ಠಾಣೆಯಲ್ಲೆ ಕೆಲಸ ಮುಂದುವರೆಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ವಾರಕ್ಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಉಪ್ಪಾರಪೇಟೆ ಠಾಣೆಗೆ ಬರುತ್ತಿದ್ದರು. ಬರುವಾಗ ಅಪರಾಧಗಳಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಕರೆತರುತ್ತಾರೆ. ನಂತರ ಎಫ್‌ಐಆರ್‌ಗಳನ್ನು ದಾಖಲಿಸದೆ ಹಣ ಸಂಗ್ರಹಿಸಿ ಅವರನ್ನು ಬಿಡುತ್ತಾರೆ. ಅವರು ತಮ್ಮ ಕಾನೂನುಬಾಹಿರ ವ್ಯವಹಾರವನ್ನು ನಡೆಸಲು ಮತ್ತು ಅಪರಾಧಿಗಳೊಂದಿಗೆ ಒಪ್ಪಂದಗಳನ್ನು ಮಾಡಲು ಠಾಣೆಯನ್ನು ಬಳಸಿಕೊಂಡಿದ್ದಾರೆ” ಎಂದು ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ.

ಹಿರಿಯ ಅಧಿಕಾರಿಗಳು ಸೇರಿದಂತೆ ಯಾರೂ ಅವರನ್ನು ಪ್ರಶ್ನಿಸಿರಲಿಲ್ಲ. ಇತ್ಯರ್ಥವಾಗದ ಕೆಲವು ಪ್ರಮುಖ ಪ್ರಕರಣಗಳ ತನಿಖೆಗೆ ಅವರ ಅಗತ್ಯವಿತ್ತು ಎಂದು ಹೇಳಿ ಉಪ್ಪಾರಪೇಟೆ ಪೊಲೀಸರು ಶ್ರೀನಿವಾಸ್ ಶೆಟ್ಟಿಯನ್ನು ಉಳಿಸಿಕೊಂಡಿದ್ದರು ಎಂದು ವಿಧಾನಸೌಧ ಠಾಣೆಯ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ. ಇದೆಲ್ಲವೂ ಹಿರಿಯ ಅಧಿಕಾರಿಗಳ ಸೂಕ್ತ ಅನುಮತಿಯಿಲ್ಲದೆ ನಡೆದಿದೆ ಎಂದು ವರದಿಯಾಗಿದೆ.

ಬುಧವಾರ ಅಕ್ರಮವಾಗಿ ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಗಾಂಧಿನಗರದ ಬಾರ್ ಅಂಡ್ ರೆಸ್ಟೋರೆಂಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ಘಟನೆಯ ನಂತರ ಶ್ರೀನಿವಾಸ್ ಶೆಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.

“ಇಡೀ ಪ್ರಕರಣ ಸ್ಟೇಷನ್ ಮಟ್ಟದಲ್ಲಿ ಪೊಲೀಸ್ ಸಿಬ್ಬಂದಿ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದರ ಕುರಿತು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. 11 ತಿಂಗಳಿಂದ ಎಎಸ್‌ಐ ಕೆಲಸಕ್ಕೆ ಹಾಜರಾಗದಿದ್ದರೂ ವಿಧಾನಸೌಧ ಪೊಲೀಸರು ಗಂಭೀರವಾಗಿ ಪರಿಗಣಿಸಿಲ್ಲ. ಅವರ ಮೇಲೆ ಆರೋಪಗಳಿದ್ದರೂ ಉಪ್ಪಾರಪೇಟೆ ಠಾಣೆಯ ಅಧಿಕಾರಿಗಳು ಆತನ ಚಟುವಟಿಕೆಗಳನ್ನು ಪರಿಶೀಲಿಸಲು ತಲೆ ಕೆಡಿಸಿಕೊಂಡಿರಲಿಲ್ಲ. ಹೀಗಿರುವಾಗ, ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ” ಎಂದು ಪ್ರಕರಣದ ಬಗ್ಗೆ ತಿಳಿದಿರುವ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

TNIE ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾಗಿ ಹೇಳಿದೆ. “ಇದರ ಬಗ್ಗೆ ವರದಿ ಮಾಡಲು ಏನಿದೆ?” ಎಂದು ವರದಿಗಾರರೊಂದಿಗೆ ಡಿಸಿಪಿ (ಆಡಳಿತ) ನಿಶಾ ಜೇಮ್ಸ್ ಪ್ರಶ್ನಿಸಿದ್ದಾರೆ ಎಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...