Homeಕರ್ನಾಟಕವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದ ಆರೋಪ ಹೊರಿಸಿ ಮಹಿಳೆ ಹಾಗೂ ಯುವಕನೋರ್ವನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿರುವ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಡೆದಿದೆ.

ಕೆಲವು ಗಂಟೆಗಳ ಕಾಲ ಮಹಿಳೆ ಹಾಗೂ ಯುವಕನನ್ನು ಹಾಗೆಯೇ ಕಟ್ಟಿದ್ದರೂ ಸಹಾಯಕ್ಕೆ ಬಾರದೆ ಗ್ರಾಮಸ್ಥರು ಸುಮ್ಮನೆ ನಿಂತು ನೋಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೊವನ್ನು ಹಂಚಿಕೊಂಡಿದ್ದು, ವಿಡಿಯೊ ವೈರಲ್‌ ಆಗಿದೆ.

ಹೆಮ್ಮರಗಾಲ ಗ್ರಾಮದ ಮಹಿಳೆಯು ತನ್ನ ಪತಿ ರವಿಯನ್ನು ತೊರೆದು ಕಳೆದು ಐದು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದರು. ಇವರ ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಗಂಡನ ಜೊತೆಗಿದ್ದರೆ, ಒಂದು ಮಗು ಮಹಿಳೆಯ ಜೊತೆಗಿದೆ. ಈ ಮಹಿಳೆಯು ಜೀವನೋಪಾಯಕ್ಕಾಗಿ ಕೊಡಗಿನ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಮರಳಿದ್ದರು.

ಕೊಡಗಿನ ಕಾಫಿ ತೋಟದಲ್ಲಿ ಪರಿಚಯನಾದ ಪಕ್ಕದ ನೇರಳೆ ಗ್ರಾಮದ ಯುವಕ ಗುರುವಾರ ರಾತ್ರಿ ಮಹಿಳೆಯ ಮನೆಗೆ ಭೇಟಿ ನೀಡಿದ್ದನು. ಇದನ್ನು ಗಮನಿಸಿದ ಮಹಿಳೆಯ ಗಂಡ ರವಿ, ಆಕೆಯ ಮನೆಗೆ ಹೊರಗಿನಿಂದ ಚಿಲಕ ಹಾಕಿ, ತನ್ನ ಸಹೋದರ ಚಂದ್ರು ಜೊತೆಗೂಡಿ ಗ್ರಾಮಸ್ಥರ ಸಮ್ಮುಖದಲ್ಲೇ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾನೆ.

ಚಿತ್ರಹಿಂಸೆಯನ್ನು ತಾಳಲಾರದೆ ಮಹಿಳೆ ನರಳುತ್ತಿದ್ದರೂ ಗ್ರಾಮಸ್ಥರು ಈ ದೃಶ್ಯವನ್ನು ನೋಡುತ್ತಾ ನಿಂತಿದ್ದರು. ಗಂಡಾಳ್ವಿಕೆಯ ದಬ್ಬಾಳಿಕೆ ಇದೆಂದು ಜನರು ಆರೋಪಿಸಿದ್ದಾರೆ. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಯಾರೋ ಸೆರೆ ಹಿಡಿದಿದ್ದು, ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ


“ಕಂಬಕ್ಕೆ ಕಟ್ಟಿ ಹಾಕಿದ ಕೆಲವು ಗಂಟೆಗಳ ನಂತರ ಗ್ರಾಮದ ಮುಖಂಡರು, ಈ ಯುವಕ ಮತ್ತು ಮಹಿಳೆಯನ್ನು ರಕ್ಷಿಸಿ ನ್ಯಾಯ ಪಂಚಾಯಿತಿ ನಡೆಸಿದ್ದಾರೆ. ಯುವಕನ ಗ್ರಾಮವಾದ ನೇರಳೆಯಿಂದ ಮುಖಂಡರನ್ನು ಕರೆಸಿ ಮಾತುಕತೆ ನಡೆಸಲಾಗಿದೆ” ಎಂದು ವರದಿಯಾಗಿದೆ.

ವಿವಾಹೇತರ ಸಂಬಂಧವಿರಲಿಲ್ಲ: ಮಹಿಳೆ ಸ್ಪಷ್ಟನೆ

ವಿವಾಹೇತರ ಸಂಬಂಧ ಹೊಂದಿದ್ದರು ಎಂಬ ಆರೋಪವನ್ನು ಮಹಿಳೆ ಅಲ್ಲಗಳೆದಿದ್ದಾರೆ. ತನ್ನ ಪತ್ನಿ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಗಂಡ ದೂರಿದರೆ, ಗಂಡನ ಆರೋಪವನ್ನು ಮಹಿಳೆ ನಿರಾಕರಿಸಿದ್ದಾರೆ. ಜೊತೆಗೆ ಕೌಲಂದೆ ಪೊಲೀಸ್‌ ಠಾಣೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೌಲಂದೆ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಂದ್ರ, “ಕೊಡಗಿನ ಕಾಫಿ ತೋಟದಲ್ಲಿ ಪರಿಚಯವಾದ ಯುವಕ ಗ್ರಾಮಕ್ಕೆ ಬಂದಾಗ ಕಾಫಿ ಕುಡಿಯಲು ಮನೆಗೆ ಕರೆದಿದ್ದೆ. ನಮ್ಮ ನಡುವೆ ಯಾವುದೇ ವಿವಾಹೇತರ ಸಂಬಂಧವಿಲ್ಲ. ಯುವಕ ನಮ್ಮ ಮನೆಯೊಳಗೆ ಪ್ರವೇಶಿಸುತ್ತಿದ್ದಂತೆಯೇ ಗಂಡ ಮನೆಯ ಬಾಗಿಲನ್ನು ಮುಚ್ಚಿ, ಹೊರಗಿನಿಂದ ಚಿಲಕ ಹಾಕಿ ನಂತರ, ಆತನ ಸಹೋದರನನ್ನು ಕರೆತಂದು ನಮ್ಮಿಬ್ಬರನ್ನೂ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾನೆ” ಎಂದು ಮಹಿಳೆಯು ದೂರು ನೀಡಿದ್ದಾರೆ.

“ರವಿ ಮತ್ತು ಚಂದ್ರು ಸೇರಿ ಯುವಕ ಹಾಗೂ ಮಹಿಳೆಯನ್ನು ಕಟ್ಟಿಹಾಕಿದ್ದರು. ಗ್ರಾಮಸ್ಥರು ಬಳಿಕ ಬಿಡಿಸಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಸಾರ್ವಜನಿಕವಾಗಿ ಮಹಿಳೆಗೆ ಹಿಂಸಿಸಿದ್ದರಿಂದ ಐಪಿಸಿ ಸೆಕ್ಷನ್‌ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರವಿಯನ್ನು ಬಂಧಿಸಿದ್ದು, ಚಂದ್ರು ಪರಾರಿಯಾಗಿದ್ದಾನೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...