Homeಕರ್ನಾಟಕವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದ ಆರೋಪ ಹೊರಿಸಿ ಮಹಿಳೆ ಹಾಗೂ ಯುವಕನೋರ್ವನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿರುವ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಡೆದಿದೆ.

ಕೆಲವು ಗಂಟೆಗಳ ಕಾಲ ಮಹಿಳೆ ಹಾಗೂ ಯುವಕನನ್ನು ಹಾಗೆಯೇ ಕಟ್ಟಿದ್ದರೂ ಸಹಾಯಕ್ಕೆ ಬಾರದೆ ಗ್ರಾಮಸ್ಥರು ಸುಮ್ಮನೆ ನಿಂತು ನೋಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೊವನ್ನು ಹಂಚಿಕೊಂಡಿದ್ದು, ವಿಡಿಯೊ ವೈರಲ್‌ ಆಗಿದೆ.

ಹೆಮ್ಮರಗಾಲ ಗ್ರಾಮದ ಮಹಿಳೆಯು ತನ್ನ ಪತಿ ರವಿಯನ್ನು ತೊರೆದು ಕಳೆದು ಐದು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದರು. ಇವರ ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಗಂಡನ ಜೊತೆಗಿದ್ದರೆ, ಒಂದು ಮಗು ಮಹಿಳೆಯ ಜೊತೆಗಿದೆ. ಈ ಮಹಿಳೆಯು ಜೀವನೋಪಾಯಕ್ಕಾಗಿ ಕೊಡಗಿನ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಮರಳಿದ್ದರು.

ಕೊಡಗಿನ ಕಾಫಿ ತೋಟದಲ್ಲಿ ಪರಿಚಯನಾದ ಪಕ್ಕದ ನೇರಳೆ ಗ್ರಾಮದ ಯುವಕ ಗುರುವಾರ ರಾತ್ರಿ ಮಹಿಳೆಯ ಮನೆಗೆ ಭೇಟಿ ನೀಡಿದ್ದನು. ಇದನ್ನು ಗಮನಿಸಿದ ಮಹಿಳೆಯ ಗಂಡ ರವಿ, ಆಕೆಯ ಮನೆಗೆ ಹೊರಗಿನಿಂದ ಚಿಲಕ ಹಾಕಿ, ತನ್ನ ಸಹೋದರ ಚಂದ್ರು ಜೊತೆಗೂಡಿ ಗ್ರಾಮಸ್ಥರ ಸಮ್ಮುಖದಲ್ಲೇ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾನೆ.

ಚಿತ್ರಹಿಂಸೆಯನ್ನು ತಾಳಲಾರದೆ ಮಹಿಳೆ ನರಳುತ್ತಿದ್ದರೂ ಗ್ರಾಮಸ್ಥರು ಈ ದೃಶ್ಯವನ್ನು ನೋಡುತ್ತಾ ನಿಂತಿದ್ದರು. ಗಂಡಾಳ್ವಿಕೆಯ ದಬ್ಬಾಳಿಕೆ ಇದೆಂದು ಜನರು ಆರೋಪಿಸಿದ್ದಾರೆ. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಯಾರೋ ಸೆರೆ ಹಿಡಿದಿದ್ದು, ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ


“ಕಂಬಕ್ಕೆ ಕಟ್ಟಿ ಹಾಕಿದ ಕೆಲವು ಗಂಟೆಗಳ ನಂತರ ಗ್ರಾಮದ ಮುಖಂಡರು, ಈ ಯುವಕ ಮತ್ತು ಮಹಿಳೆಯನ್ನು ರಕ್ಷಿಸಿ ನ್ಯಾಯ ಪಂಚಾಯಿತಿ ನಡೆಸಿದ್ದಾರೆ. ಯುವಕನ ಗ್ರಾಮವಾದ ನೇರಳೆಯಿಂದ ಮುಖಂಡರನ್ನು ಕರೆಸಿ ಮಾತುಕತೆ ನಡೆಸಲಾಗಿದೆ” ಎಂದು ವರದಿಯಾಗಿದೆ.

ವಿವಾಹೇತರ ಸಂಬಂಧವಿರಲಿಲ್ಲ: ಮಹಿಳೆ ಸ್ಪಷ್ಟನೆ

ವಿವಾಹೇತರ ಸಂಬಂಧ ಹೊಂದಿದ್ದರು ಎಂಬ ಆರೋಪವನ್ನು ಮಹಿಳೆ ಅಲ್ಲಗಳೆದಿದ್ದಾರೆ. ತನ್ನ ಪತ್ನಿ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಗಂಡ ದೂರಿದರೆ, ಗಂಡನ ಆರೋಪವನ್ನು ಮಹಿಳೆ ನಿರಾಕರಿಸಿದ್ದಾರೆ. ಜೊತೆಗೆ ಕೌಲಂದೆ ಪೊಲೀಸ್‌ ಠಾಣೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೌಲಂದೆ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಂದ್ರ, “ಕೊಡಗಿನ ಕಾಫಿ ತೋಟದಲ್ಲಿ ಪರಿಚಯವಾದ ಯುವಕ ಗ್ರಾಮಕ್ಕೆ ಬಂದಾಗ ಕಾಫಿ ಕುಡಿಯಲು ಮನೆಗೆ ಕರೆದಿದ್ದೆ. ನಮ್ಮ ನಡುವೆ ಯಾವುದೇ ವಿವಾಹೇತರ ಸಂಬಂಧವಿಲ್ಲ. ಯುವಕ ನಮ್ಮ ಮನೆಯೊಳಗೆ ಪ್ರವೇಶಿಸುತ್ತಿದ್ದಂತೆಯೇ ಗಂಡ ಮನೆಯ ಬಾಗಿಲನ್ನು ಮುಚ್ಚಿ, ಹೊರಗಿನಿಂದ ಚಿಲಕ ಹಾಕಿ ನಂತರ, ಆತನ ಸಹೋದರನನ್ನು ಕರೆತಂದು ನಮ್ಮಿಬ್ಬರನ್ನೂ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾನೆ” ಎಂದು ಮಹಿಳೆಯು ದೂರು ನೀಡಿದ್ದಾರೆ.

“ರವಿ ಮತ್ತು ಚಂದ್ರು ಸೇರಿ ಯುವಕ ಹಾಗೂ ಮಹಿಳೆಯನ್ನು ಕಟ್ಟಿಹಾಕಿದ್ದರು. ಗ್ರಾಮಸ್ಥರು ಬಳಿಕ ಬಿಡಿಸಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಸಾರ್ವಜನಿಕವಾಗಿ ಮಹಿಳೆಗೆ ಹಿಂಸಿಸಿದ್ದರಿಂದ ಐಪಿಸಿ ಸೆಕ್ಷನ್‌ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರವಿಯನ್ನು ಬಂಧಿಸಿದ್ದು, ಚಂದ್ರು ಪರಾರಿಯಾಗಿದ್ದಾನೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...