Homeಕರ್ನಾಟಕವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು

- Advertisement -
- Advertisement -

ವಿವಾಹೇತರ ಸಂಬಂಧ ಹೊಂದಿದ್ದ ಆರೋಪ ಹೊರಿಸಿ ಮಹಿಳೆ ಹಾಗೂ ಯುವಕನೋರ್ವನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಚಿತ್ರಹಿಂಸೆ ನೀಡಿರುವ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಡೆದಿದೆ.

ಕೆಲವು ಗಂಟೆಗಳ ಕಾಲ ಮಹಿಳೆ ಹಾಗೂ ಯುವಕನನ್ನು ಹಾಗೆಯೇ ಕಟ್ಟಿದ್ದರೂ ಸಹಾಯಕ್ಕೆ ಬಾರದೆ ಗ್ರಾಮಸ್ಥರು ಸುಮ್ಮನೆ ನಿಂತು ನೋಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೊವನ್ನು ಹಂಚಿಕೊಂಡಿದ್ದು, ವಿಡಿಯೊ ವೈರಲ್‌ ಆಗಿದೆ.

ಹೆಮ್ಮರಗಾಲ ಗ್ರಾಮದ ಮಹಿಳೆಯು ತನ್ನ ಪತಿ ರವಿಯನ್ನು ತೊರೆದು ಕಳೆದು ಐದು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದರು. ಇವರ ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಗಂಡನ ಜೊತೆಗಿದ್ದರೆ, ಒಂದು ಮಗು ಮಹಿಳೆಯ ಜೊತೆಗಿದೆ. ಈ ಮಹಿಳೆಯು ಜೀವನೋಪಾಯಕ್ಕಾಗಿ ಕೊಡಗಿನ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಮರಳಿದ್ದರು.

ಕೊಡಗಿನ ಕಾಫಿ ತೋಟದಲ್ಲಿ ಪರಿಚಯನಾದ ಪಕ್ಕದ ನೇರಳೆ ಗ್ರಾಮದ ಯುವಕ ಗುರುವಾರ ರಾತ್ರಿ ಮಹಿಳೆಯ ಮನೆಗೆ ಭೇಟಿ ನೀಡಿದ್ದನು. ಇದನ್ನು ಗಮನಿಸಿದ ಮಹಿಳೆಯ ಗಂಡ ರವಿ, ಆಕೆಯ ಮನೆಗೆ ಹೊರಗಿನಿಂದ ಚಿಲಕ ಹಾಕಿ, ತನ್ನ ಸಹೋದರ ಚಂದ್ರು ಜೊತೆಗೂಡಿ ಗ್ರಾಮಸ್ಥರ ಸಮ್ಮುಖದಲ್ಲೇ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾನೆ.

ಚಿತ್ರಹಿಂಸೆಯನ್ನು ತಾಳಲಾರದೆ ಮಹಿಳೆ ನರಳುತ್ತಿದ್ದರೂ ಗ್ರಾಮಸ್ಥರು ಈ ದೃಶ್ಯವನ್ನು ನೋಡುತ್ತಾ ನಿಂತಿದ್ದರು. ಗಂಡಾಳ್ವಿಕೆಯ ದಬ್ಬಾಳಿಕೆ ಇದೆಂದು ಜನರು ಆರೋಪಿಸಿದ್ದಾರೆ. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಯಾರೋ ಸೆರೆ ಹಿಡಿದಿದ್ದು, ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೌಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ


“ಕಂಬಕ್ಕೆ ಕಟ್ಟಿ ಹಾಕಿದ ಕೆಲವು ಗಂಟೆಗಳ ನಂತರ ಗ್ರಾಮದ ಮುಖಂಡರು, ಈ ಯುವಕ ಮತ್ತು ಮಹಿಳೆಯನ್ನು ರಕ್ಷಿಸಿ ನ್ಯಾಯ ಪಂಚಾಯಿತಿ ನಡೆಸಿದ್ದಾರೆ. ಯುವಕನ ಗ್ರಾಮವಾದ ನೇರಳೆಯಿಂದ ಮುಖಂಡರನ್ನು ಕರೆಸಿ ಮಾತುಕತೆ ನಡೆಸಲಾಗಿದೆ” ಎಂದು ವರದಿಯಾಗಿದೆ.

ವಿವಾಹೇತರ ಸಂಬಂಧವಿರಲಿಲ್ಲ: ಮಹಿಳೆ ಸ್ಪಷ್ಟನೆ

ವಿವಾಹೇತರ ಸಂಬಂಧ ಹೊಂದಿದ್ದರು ಎಂಬ ಆರೋಪವನ್ನು ಮಹಿಳೆ ಅಲ್ಲಗಳೆದಿದ್ದಾರೆ. ತನ್ನ ಪತ್ನಿ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಗಂಡ ದೂರಿದರೆ, ಗಂಡನ ಆರೋಪವನ್ನು ಮಹಿಳೆ ನಿರಾಕರಿಸಿದ್ದಾರೆ. ಜೊತೆಗೆ ಕೌಲಂದೆ ಪೊಲೀಸ್‌ ಠಾಣೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೌಲಂದೆ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಂದ್ರ, “ಕೊಡಗಿನ ಕಾಫಿ ತೋಟದಲ್ಲಿ ಪರಿಚಯವಾದ ಯುವಕ ಗ್ರಾಮಕ್ಕೆ ಬಂದಾಗ ಕಾಫಿ ಕುಡಿಯಲು ಮನೆಗೆ ಕರೆದಿದ್ದೆ. ನಮ್ಮ ನಡುವೆ ಯಾವುದೇ ವಿವಾಹೇತರ ಸಂಬಂಧವಿಲ್ಲ. ಯುವಕ ನಮ್ಮ ಮನೆಯೊಳಗೆ ಪ್ರವೇಶಿಸುತ್ತಿದ್ದಂತೆಯೇ ಗಂಡ ಮನೆಯ ಬಾಗಿಲನ್ನು ಮುಚ್ಚಿ, ಹೊರಗಿನಿಂದ ಚಿಲಕ ಹಾಕಿ ನಂತರ, ಆತನ ಸಹೋದರನನ್ನು ಕರೆತಂದು ನಮ್ಮಿಬ್ಬರನ್ನೂ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾನೆ” ಎಂದು ಮಹಿಳೆಯು ದೂರು ನೀಡಿದ್ದಾರೆ.

“ರವಿ ಮತ್ತು ಚಂದ್ರು ಸೇರಿ ಯುವಕ ಹಾಗೂ ಮಹಿಳೆಯನ್ನು ಕಟ್ಟಿಹಾಕಿದ್ದರು. ಗ್ರಾಮಸ್ಥರು ಬಳಿಕ ಬಿಡಿಸಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಸಾರ್ವಜನಿಕವಾಗಿ ಮಹಿಳೆಗೆ ಹಿಂಸಿಸಿದ್ದರಿಂದ ಐಪಿಸಿ ಸೆಕ್ಷನ್‌ 354 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರವಿಯನ್ನು ಬಂಧಿಸಿದ್ದು, ಚಂದ್ರು ಪರಾರಿಯಾಗಿದ್ದಾನೆ” ಎಂದು ಪಿಎಸ್‌ಐ ತಿಳಿಸಿದರು.


ಇದನ್ನೂ ಓದಿರಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...