Homeಮುಖಪುಟಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ: 'ತಾಂಡವ್' ವೆಬ್‌ ಸೀರೀಸ್ ವಿರುದ್ಧ ದೂರು

ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ: ‘ತಾಂಡವ್’ ವೆಬ್‌ ಸೀರೀಸ್ ವಿರುದ್ಧ ದೂರು

ಈ ವೆಬ್ ಸೀರೀಸ್ ಲೈಂಗಿಕತೆ, ಹಿಂಸೆ, ಮಾದಕ ವಸ್ತುಗಳು, ನಿಂದನೆ ಮತ್ತು ದ್ವೇಷ ಮತ್ತು ಕೆಲವೊಮ್ಮೆ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಹಾಗಾಗಿ ಇದರ ಮೇಲೆ ನಿಯಂತ್ರಣ ಸಾಧಿಸಬೇಕು- ಬಿಜೆಪಿ ಸಂಸದ ಮನೋಜ್ ಕೊಟಕ್

- Advertisement -
- Advertisement -

ಸೈಫ್ ಅಲಿಖಾನ್ ಮತ್ತು ಡಿಂಪಲ್ ಕಪಾಡಿಯ ನಟಿಸಿರುವ ಹೊಸ ವೆಬ್ ಸೀರೀಸ್‌ ‘ತಾಂಡವ್‌’ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಲಾಗಿದೆ ಎಂದು ಆರೋಪಸಿರುವ ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್, ಇದರ ನಿರ್ಮಾಪಕರು, ನಿರ್ದೇಶಕರು ಮತ್ತು ನಟರ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಸೀರೀಸ್‌ನಲ್ಲಿ ಶಿವನನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿರುವ ಶಾಸಕ, ಆ ದೃಶ್ಯಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ನಟ ಮೊಹಮ್ಮದ್ ಜೀಶನ್ ಅಯೂಬ್ ಕ್ಷಮೆಯಾಚಿಸಬೇಕು ಎಂದೂ ಅಗ್ರಹಿಸಿದ್ದಾರೆ.

ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಶಾಸಕ, “ಪ್ರೈಮ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ಒಟಿಟಿಗಳಲ್ಲಿ ಪ್ರಸಾರವಾಗುವ ಸಿನಿಮಾಗಳಿಗೆ ಸೆನ್ಸಾರ್ ಮಾಡಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

“ಹಿಂದೂ ದೇವತೆಗಳನ್ನು ಕೀಳಾಗಿ ಕಾಣುವ ಪ್ರವೃತ್ತಿ ಚಲನಚಿತ್ರ ಮತ್ತು ವೆಬ್‌ ಸೀರೀಸ್ ತಯಾರಕರಲ್ಲಿ ಯಾಕೆ ಟ್ರೆಂಡ್ ಆಗುತ್ತಿದೆ? ಇದಕ್ಕೆ ಇತ್ತೀಚಿನ ಉದಾಹರಣೆ ‘ತಾಂಡವ್’ ವೆಬ್ ಸೀರೀಸ್. ಸೈಫ್ ಅಲಿಖಾನ್ ಮತ್ತೊಮ್ಮೆ ಹಿಂದೂ ದೇವತೆಗಳನ್ನು ಗುರಿಯಾಗಿಸುವ ವೆಬ್‌ ಸೀರೀಸ್‌ನ ಭಾಗವಾಗಿದ್ದಾರೆ. ನಿರ್ದೇಶಕ ಅಲಿ ಅಬ್ಬಾಸ್ ಅಪಹಾಸ್ಯ ದೃಶ್ಯವನ್ನು ತೆಗೆದುಹಾಕಬೇಕು” ಎಂದು ಒತ್ತಾಯಿಸಿದ್ದಾರೆ.

 

ಶನಿವಾರ ಬಿಜೆಪಿ ಸಂಸದ ಮನೋಜ್ ಕೊಟಕ್ ಪ್ರಕಾಶ್‌ ಜಾವಾಡೇಕರ್ ಅವರಿಗೆ ಪತ್ರ ಬರೆದಿದ್ದು, “ಈ ವೆಬ್ ಸೀರೀಸ್ ಲೈಂಗಿಕತೆ, ಹಿಂಸೆ, ಮಾದಕ ವಸ್ತುಗಳು, ನಿಂದನೆ ಮತ್ತು ದ್ವೇಷ ಹಾಗೂ ಕೆಲವೊಮ್ಮೆ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಹಾಗಾಗಿ ಇದರ ಮೇಲೆ ನಿಯಂತ್ರಣ ಸಾಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ ದರ್ಶನ್!

ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹಲವು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ದೆಹಲಿ ಹಿಂಸಾಚಾರದ ಪ್ರಮುಖ ಆರೋಪಿ ಬಿಜೆಪಿಯ ಕಪಿಲ್ ಮಿಶ್ರಾ ಕೂಡಾ ಇದನ್ನು ವಿರೋಧಿಸಿದ್ದಾರೆ.

“ಈ ದಿನ ಮುಗಿಯುತ್ತದೆ. ಆದರೆ ನಮ್ಮ ಧರ್ಮ ಮತ್ತು ದೇವತೆಗಳ ವಿರುದ್ಧ ದ್ವೇಷ ಹರಡುವ ವೆಬ್‌ ಸೀರೀಸ್‌ಗಳು ಆನ್‌ಲೈನ್‌ನಲ್ಲಿ ಇನ್ನೂ ಲಭ್ಯವಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

 

ಈ ಕಾರಣಕ್ಕೆ ತಾಂಡವ್ ವೆಬ್‌ ಸೀರೀಸ್ ಅನ್ನು ಬ್ಯಾನ್ ಮಾಡಬೇಕು ಎಂದು ಶನಿವಾರ ಟ್ವಿಟರ್‌ನಲ್ಲಿ ಟ್ರೆಂಡ್ ಮಾಡಲಾಗಿತ್ತು. ಈ ಹಿಂದೆಯೂ ‘ಎ ಸೂಟಬಲ್ ಬಾಯ್’ ಎನ್ನುವ ವೆಬ್‌ ಸೀರೀಸ್ ಸೇರಿದಂತೆ ಹಲವು ಚಿತ್ರಗಳನ್ನು ಬ್ಯಾನ್‌ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಇವುಗಳಿಗೆ ಮೂಲ ಕಾರಣ ಹಿಂದೂ ದೇವತೆಗಳು ಮತ್ತು ಧರ್ಮಕ್ಕೆ ಧಕ್ಕೆಯಾಗಿದೆ ಎಂಬುದೇ ಆಗಿತ್ತು.

ಕಳೆದ ತಿಂಗಳು ಸೈಫ್ ಅಲಿಖಾನ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದರು. ರಾವಣನ ಪಾತ್ರಕ್ಕೆ ಮಾನವೀಯ ನೆಲೆಗಟ್ಟಿದೆ ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಕೇಳಿದ್ದರು.

ಇತ್ತೀಚೆಗೆ ಒಟಿಟಿಗಳನ್ನು ಕೇಂದ್ರ ಸರ್ಕಾರದ ಅಡಿಯಲ್ಲಿ ತಂದು ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.


ಇದನ್ನೂ ಓದಿ: ರಾವಣ ಮಾನವೀಯ ಗುಣವುಳ್ಳವನು ಎಂದಿದ್ದ ನಟ ಸೈಫ್ ಅಲಿ ಖಾನ್ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...