Homeಮುಖಪುಟಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ: 'ತಾಂಡವ್' ವೆಬ್‌ ಸೀರೀಸ್ ವಿರುದ್ಧ ದೂರು

ಹಿಂದೂ ದೇವತೆಗಳಿಗೆ ಅವಮಾನ ಮಾಡಿದ ಆರೋಪ: ‘ತಾಂಡವ್’ ವೆಬ್‌ ಸೀರೀಸ್ ವಿರುದ್ಧ ದೂರು

ಈ ವೆಬ್ ಸೀರೀಸ್ ಲೈಂಗಿಕತೆ, ಹಿಂಸೆ, ಮಾದಕ ವಸ್ತುಗಳು, ನಿಂದನೆ ಮತ್ತು ದ್ವೇಷ ಮತ್ತು ಕೆಲವೊಮ್ಮೆ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಹಾಗಾಗಿ ಇದರ ಮೇಲೆ ನಿಯಂತ್ರಣ ಸಾಧಿಸಬೇಕು- ಬಿಜೆಪಿ ಸಂಸದ ಮನೋಜ್ ಕೊಟಕ್

- Advertisement -
- Advertisement -

ಸೈಫ್ ಅಲಿಖಾನ್ ಮತ್ತು ಡಿಂಪಲ್ ಕಪಾಡಿಯ ನಟಿಸಿರುವ ಹೊಸ ವೆಬ್ ಸೀರೀಸ್‌ ‘ತಾಂಡವ್‌’ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಲಾಗಿದೆ ಎಂದು ಆರೋಪಸಿರುವ ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್, ಇದರ ನಿರ್ಮಾಪಕರು, ನಿರ್ದೇಶಕರು ಮತ್ತು ನಟರ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಸೀರೀಸ್‌ನಲ್ಲಿ ಶಿವನನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿರುವ ಶಾಸಕ, ಆ ದೃಶ್ಯಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ನಟ ಮೊಹಮ್ಮದ್ ಜೀಶನ್ ಅಯೂಬ್ ಕ್ಷಮೆಯಾಚಿಸಬೇಕು ಎಂದೂ ಅಗ್ರಹಿಸಿದ್ದಾರೆ.

ಕೇಂದ್ರ ಸಚಿವ ಪ್ರಕಾಶ್ ಜಾವಾಡೇಕರ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಶಾಸಕ, “ಪ್ರೈಮ್ ಮತ್ತು ನೆಟ್‌ಫ್ಲಿಕ್ಸ್‌ನಂತಹ ಒಟಿಟಿಗಳಲ್ಲಿ ಪ್ರಸಾರವಾಗುವ ಸಿನಿಮಾಗಳಿಗೆ ಸೆನ್ಸಾರ್ ಮಾಡಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

“ಹಿಂದೂ ದೇವತೆಗಳನ್ನು ಕೀಳಾಗಿ ಕಾಣುವ ಪ್ರವೃತ್ತಿ ಚಲನಚಿತ್ರ ಮತ್ತು ವೆಬ್‌ ಸೀರೀಸ್ ತಯಾರಕರಲ್ಲಿ ಯಾಕೆ ಟ್ರೆಂಡ್ ಆಗುತ್ತಿದೆ? ಇದಕ್ಕೆ ಇತ್ತೀಚಿನ ಉದಾಹರಣೆ ‘ತಾಂಡವ್’ ವೆಬ್ ಸೀರೀಸ್. ಸೈಫ್ ಅಲಿಖಾನ್ ಮತ್ತೊಮ್ಮೆ ಹಿಂದೂ ದೇವತೆಗಳನ್ನು ಗುರಿಯಾಗಿಸುವ ವೆಬ್‌ ಸೀರೀಸ್‌ನ ಭಾಗವಾಗಿದ್ದಾರೆ. ನಿರ್ದೇಶಕ ಅಲಿ ಅಬ್ಬಾಸ್ ಅಪಹಾಸ್ಯ ದೃಶ್ಯವನ್ನು ತೆಗೆದುಹಾಕಬೇಕು” ಎಂದು ಒತ್ತಾಯಿಸಿದ್ದಾರೆ.

 

ಶನಿವಾರ ಬಿಜೆಪಿ ಸಂಸದ ಮನೋಜ್ ಕೊಟಕ್ ಪ್ರಕಾಶ್‌ ಜಾವಾಡೇಕರ್ ಅವರಿಗೆ ಪತ್ರ ಬರೆದಿದ್ದು, “ಈ ವೆಬ್ ಸೀರೀಸ್ ಲೈಂಗಿಕತೆ, ಹಿಂಸೆ, ಮಾದಕ ವಸ್ತುಗಳು, ನಿಂದನೆ ಮತ್ತು ದ್ವೇಷ ಹಾಗೂ ಕೆಲವೊಮ್ಮೆ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಹಾಗಾಗಿ ಇದರ ಮೇಲೆ ನಿಯಂತ್ರಣ ಸಾಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಅಂಬಾನಿ 5G ಗಾಗಿ ಥಿಯೇಟರ್ ಓಪನ್ ಮಾಡ್ತಿಲ್ಲ; ಇದು ಬಹುದೊಡ್ಡ ಹಗರಣ ಎಂದ ನಟ ದರ್ಶನ್!

ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹಲವು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ದೆಹಲಿ ಹಿಂಸಾಚಾರದ ಪ್ರಮುಖ ಆರೋಪಿ ಬಿಜೆಪಿಯ ಕಪಿಲ್ ಮಿಶ್ರಾ ಕೂಡಾ ಇದನ್ನು ವಿರೋಧಿಸಿದ್ದಾರೆ.

“ಈ ದಿನ ಮುಗಿಯುತ್ತದೆ. ಆದರೆ ನಮ್ಮ ಧರ್ಮ ಮತ್ತು ದೇವತೆಗಳ ವಿರುದ್ಧ ದ್ವೇಷ ಹರಡುವ ವೆಬ್‌ ಸೀರೀಸ್‌ಗಳು ಆನ್‌ಲೈನ್‌ನಲ್ಲಿ ಇನ್ನೂ ಲಭ್ಯವಿದೆ” ಎಂದು ಟ್ವೀಟ್ ಮಾಡಿದ್ದಾರೆ.

 

 

ಈ ಕಾರಣಕ್ಕೆ ತಾಂಡವ್ ವೆಬ್‌ ಸೀರೀಸ್ ಅನ್ನು ಬ್ಯಾನ್ ಮಾಡಬೇಕು ಎಂದು ಶನಿವಾರ ಟ್ವಿಟರ್‌ನಲ್ಲಿ ಟ್ರೆಂಡ್ ಮಾಡಲಾಗಿತ್ತು. ಈ ಹಿಂದೆಯೂ ‘ಎ ಸೂಟಬಲ್ ಬಾಯ್’ ಎನ್ನುವ ವೆಬ್‌ ಸೀರೀಸ್ ಸೇರಿದಂತೆ ಹಲವು ಚಿತ್ರಗಳನ್ನು ಬ್ಯಾನ್‌ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಇವುಗಳಿಗೆ ಮೂಲ ಕಾರಣ ಹಿಂದೂ ದೇವತೆಗಳು ಮತ್ತು ಧರ್ಮಕ್ಕೆ ಧಕ್ಕೆಯಾಗಿದೆ ಎಂಬುದೇ ಆಗಿತ್ತು.

ಕಳೆದ ತಿಂಗಳು ಸೈಫ್ ಅಲಿಖಾನ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದರು. ರಾವಣನ ಪಾತ್ರಕ್ಕೆ ಮಾನವೀಯ ನೆಲೆಗಟ್ಟಿದೆ ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಕೇಳಿದ್ದರು.

ಇತ್ತೀಚೆಗೆ ಒಟಿಟಿಗಳನ್ನು ಕೇಂದ್ರ ಸರ್ಕಾರದ ಅಡಿಯಲ್ಲಿ ತಂದು ನಿಯಂತ್ರಿಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.


ಇದನ್ನೂ ಓದಿ: ರಾವಣ ಮಾನವೀಯ ಗುಣವುಳ್ಳವನು ಎಂದಿದ್ದ ನಟ ಸೈಫ್ ಅಲಿ ಖಾನ್ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...