Homeಮುಖಪುಟ'ಭೂ ಜಿಹಾದ್' ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

- Advertisement -
- Advertisement -

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಮಸೀದಿಯನ್ನು “ಅಕ್ರಮ” ಮತ್ತು “ಭೂ ಜಿಹಾದ್”ನ ಭಾಗ ಎಂದು ಕರೆದು ಕೆಡವಲು ಹಿಂದುತ್ವ ಗುಂಪುಗಳು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿವೆ.

ತಮ್ಮ ಪ್ರತಿಭಟನೆಯ ಭಾಗವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಸದಸ್ಯರು ಭಾನುವಾರದಂದು ಹತೈ ಖೇಡಾ ಪ್ರದೇಶದ ಮಸೀದಿಯ ಕಡೆಗೆ ಜೆಸಿಬಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಮೆರವಣಿಗೆ ನಡೆಸಿದರು. ಮೂರು ಅಂತಸ್ತಿನ ಮಸೀದಿಯ ಕೆಲವು ಭಾಗಗಳು ನಿರ್ಮಾಣ ಹಂತದಲ್ಲಿವೆ. ಪ್ರತಿಭಟನೆಯ ನಂತರ ಆಡಳಿತವು ಸದ್ಯಕ್ಕೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಭಾನುವಾರ ಹಿಂದಿ ಸುದ್ದಿವಾಹಿನಿ ಜೀ ನ್ಯೂಸ್ ವರದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರೊಬ್ಬರು, ಆಡಳಿತವು ಮಸೀದಿಯ ವಿರುದ್ಧ ಬುಲ್ಡೋಜರ್ ಕ್ರಮಕೈಗೊಳ್ಳದಿದ್ದರೆ ತಾವೇ ಧಾರ್ಮಿಕ ಸ್ಥಳವನ್ನು ಕೆಡವುತ್ತೇವೆ ಎಂದು ಹೇಳಿದ್ದಾರೆ. ಹಿಂದುತ್ವ ಪ್ರತಿಭಟನಾಕಾರರು “ಭೂ ಜಿಹಾದ್‌ಗೆ ಅವಕಾಶ ನೀಡಲಾಗುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು.

“ನಾವು ಯಾವುದೇ ಬೆಲೆ ತೆತ್ತಾದರೂ ಮಸೀದಿಯನ್ನು ಕೆಡವುತ್ತೇವೆ. ಸರ್ಕಾರ ಅನುಮತಿಸದಿದ್ದರೂ ನಾವು ಅದನ್ನು ಕೆಡವುತ್ತೇವೆ. ಸರ್ಕಾರ ಏನು ಬೇಕಾದರೂ ಮಾಡಲಿ. ಅವರು ನನ್ನನ್ನು ಕಂಬಿಗಳ ಹಿಂದೆ ಹಾಕಬಹುದು ಅಥವಾ ಗಲ್ಲಿಗೇರಿಸಬಹುದು” ಎಂದು ಮತ್ತೊಬ್ಬ ಪ್ರತಿಭಟನಾಕಾರ ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನೊಬ್ಬ ಪ್ರತಿಭಟನಾಕಾರರು ಇದು ಭೋಪಾಲ್‌ನ ಹಲವಾರು ಭಾಗಗಳಲ್ಲಿ ನಡೆಯುತ್ತಿರುವ “ಭೂ ಜಿಹಾದ್” ಎಂದು ಹೇಳಿದ್ದಾರೆ. ಅವರು ಮೂರು ಅಂತಸ್ತಿನ ಮಸೀದಿ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಗುಂಪೊಂದು ಬುಲ್ಡೋಜರ್ ಮೇಲೆ ಹತ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿತು.

ಮತ್ತೊಂದೆಡೆ ಹಿಂದೂ ಗುಂಪುಗಳು ದೇಶಾದ್ಯಂತ ಮಸೀದಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿವೆ ಎಂದು ಮುಸ್ಲಿಮರು ಹೇಳುತ್ತಿದ್ದಾರೆ. “ಅವರಿಗೆ ಭಾರತದ ಎಲ್ಲಾ ಮಸೀದಿಗಳೊಂದಿಗೆ ಸಮಸ್ಯೆಗಳಿವೆ. ಅವರಿಗೆ ತಾಜ್ ಮಹಲ್ ಮತ್ತು ಕೆಂಪು ಕೋಟೆಯೊಂದಿಗೆ ಸಮಸ್ಯೆ ಇದೆ. ಇತ್ತೀಚೆಗೆ ಅವರು ಸಂಭಾಲ್ ಮಸೀದಿಯ ಸಮಸ್ಯೆಗಳನ್ನು ಕೆದಕಿದ್ದಾರೆ. ದೇವಾಲಯಗಳನ್ನು ಹುಡುಕಲು ಅವರು ಎಲ್ಲಾ ಮಸೀದಿಗಳನ್ನು ಅಗೆಯುತ್ತಿದ್ದಾರೆ ಎಂದು ಸ್ಥಳೀಯ ಮುಸ್ಲಿಂ ಒಬ್ಬರು ವ್ಯಂಗ್ಯವಾಗಿ ಹೇಳಿದರು.

“ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಸಮಸ್ಯೆಗಳನ್ನು ಸೃಷ್ಟಿಸಲು ಸರ್ಕಾರ ಅವರನ್ನು ಉತ್ತೇಜಿಸುತ್ತಿದೆ. ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ. ಈ ಭೂಮಿ ಸರ್ಕಾರಕ್ಕೆ ಸೇರಿಲ್ಲ. ಮಸೀದಿಯ ಬಳಿ ಆ ಭೂಮಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ” ಎಂದು ಅವರು ಹೇಳಿದರು.

ಮಸೀದಿಯನ್ನು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ವಿಎಚ್‌ಪಿ ಸದಸ್ಯರು ಆರೋಪಿಸಿದ್ದಾರೆ. ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಒದಗಿಸದೆ, ರೋಹಿಂಗ್ಯಾ ಮುಸ್ಲಿಮರನ್ನು ಈ ಪ್ರದೇಶದಲ್ಲಿ ನೆಲೆಸಲು ಕರೆತರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂತ್ವ ಗುಂಪುಗಳು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಳ್ವಿಕೆ ನಡೆಸುವ ರಾಜ್ಯಗಳಲ್ಲಿನ ಆಡಳಿತವು ಅತಿಕ್ರಮಣಗಳನ್ನು ತೆರವುಗೊಳಿಸುವ ಹೆಸರಿನಲ್ಲಿ ಮಸೀದಿಗಳನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದೆ. ಕೇಸರಿ ಗುಂಪುಗಳು ಉತ್ತರಪ್ರದೇಶ, ಉತ್ತರಾಖಂಡ, ಹಿಮಾಚಲಪ್ರದೇಶ, ಗುಜರಾತ್ ಮತ್ತು ಈಗ ಮಧ್ಯಪ್ರದೇಶದಲ್ಲಿನ ಮಸೀದಿಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿವೆ. ಉತ್ತರಪ್ರದೇಶ ಮತ್ತು ಗುಜರಾತ್‌ನಲ್ಲಿ ಈಗಾಗಲೇ ಕೆಲವು ಮಸೀದಿಗಳನ್ನು ಕೆಡವಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...