Homeಮುಖಪುಟ'ಭೂ ಜಿಹಾದ್' ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

- Advertisement -
- Advertisement -

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಮಸೀದಿಯನ್ನು “ಅಕ್ರಮ” ಮತ್ತು “ಭೂ ಜಿಹಾದ್”ನ ಭಾಗ ಎಂದು ಕರೆದು ಕೆಡವಲು ಹಿಂದುತ್ವ ಗುಂಪುಗಳು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿವೆ.

ತಮ್ಮ ಪ್ರತಿಭಟನೆಯ ಭಾಗವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಸದಸ್ಯರು ಭಾನುವಾರದಂದು ಹತೈ ಖೇಡಾ ಪ್ರದೇಶದ ಮಸೀದಿಯ ಕಡೆಗೆ ಜೆಸಿಬಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಮೆರವಣಿಗೆ ನಡೆಸಿದರು. ಮೂರು ಅಂತಸ್ತಿನ ಮಸೀದಿಯ ಕೆಲವು ಭಾಗಗಳು ನಿರ್ಮಾಣ ಹಂತದಲ್ಲಿವೆ. ಪ್ರತಿಭಟನೆಯ ನಂತರ ಆಡಳಿತವು ಸದ್ಯಕ್ಕೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಭಾನುವಾರ ಹಿಂದಿ ಸುದ್ದಿವಾಹಿನಿ ಜೀ ನ್ಯೂಸ್ ವರದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರೊಬ್ಬರು, ಆಡಳಿತವು ಮಸೀದಿಯ ವಿರುದ್ಧ ಬುಲ್ಡೋಜರ್ ಕ್ರಮಕೈಗೊಳ್ಳದಿದ್ದರೆ ತಾವೇ ಧಾರ್ಮಿಕ ಸ್ಥಳವನ್ನು ಕೆಡವುತ್ತೇವೆ ಎಂದು ಹೇಳಿದ್ದಾರೆ. ಹಿಂದುತ್ವ ಪ್ರತಿಭಟನಾಕಾರರು “ಭೂ ಜಿಹಾದ್‌ಗೆ ಅವಕಾಶ ನೀಡಲಾಗುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು.

“ನಾವು ಯಾವುದೇ ಬೆಲೆ ತೆತ್ತಾದರೂ ಮಸೀದಿಯನ್ನು ಕೆಡವುತ್ತೇವೆ. ಸರ್ಕಾರ ಅನುಮತಿಸದಿದ್ದರೂ ನಾವು ಅದನ್ನು ಕೆಡವುತ್ತೇವೆ. ಸರ್ಕಾರ ಏನು ಬೇಕಾದರೂ ಮಾಡಲಿ. ಅವರು ನನ್ನನ್ನು ಕಂಬಿಗಳ ಹಿಂದೆ ಹಾಕಬಹುದು ಅಥವಾ ಗಲ್ಲಿಗೇರಿಸಬಹುದು” ಎಂದು ಮತ್ತೊಬ್ಬ ಪ್ರತಿಭಟನಾಕಾರ ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನೊಬ್ಬ ಪ್ರತಿಭಟನಾಕಾರರು ಇದು ಭೋಪಾಲ್‌ನ ಹಲವಾರು ಭಾಗಗಳಲ್ಲಿ ನಡೆಯುತ್ತಿರುವ “ಭೂ ಜಿಹಾದ್” ಎಂದು ಹೇಳಿದ್ದಾರೆ. ಅವರು ಮೂರು ಅಂತಸ್ತಿನ ಮಸೀದಿ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಗುಂಪೊಂದು ಬುಲ್ಡೋಜರ್ ಮೇಲೆ ಹತ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿತು.

ಮತ್ತೊಂದೆಡೆ ಹಿಂದೂ ಗುಂಪುಗಳು ದೇಶಾದ್ಯಂತ ಮಸೀದಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿವೆ ಎಂದು ಮುಸ್ಲಿಮರು ಹೇಳುತ್ತಿದ್ದಾರೆ. “ಅವರಿಗೆ ಭಾರತದ ಎಲ್ಲಾ ಮಸೀದಿಗಳೊಂದಿಗೆ ಸಮಸ್ಯೆಗಳಿವೆ. ಅವರಿಗೆ ತಾಜ್ ಮಹಲ್ ಮತ್ತು ಕೆಂಪು ಕೋಟೆಯೊಂದಿಗೆ ಸಮಸ್ಯೆ ಇದೆ. ಇತ್ತೀಚೆಗೆ ಅವರು ಸಂಭಾಲ್ ಮಸೀದಿಯ ಸಮಸ್ಯೆಗಳನ್ನು ಕೆದಕಿದ್ದಾರೆ. ದೇವಾಲಯಗಳನ್ನು ಹುಡುಕಲು ಅವರು ಎಲ್ಲಾ ಮಸೀದಿಗಳನ್ನು ಅಗೆಯುತ್ತಿದ್ದಾರೆ ಎಂದು ಸ್ಥಳೀಯ ಮುಸ್ಲಿಂ ಒಬ್ಬರು ವ್ಯಂಗ್ಯವಾಗಿ ಹೇಳಿದರು.

“ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಸಮಸ್ಯೆಗಳನ್ನು ಸೃಷ್ಟಿಸಲು ಸರ್ಕಾರ ಅವರನ್ನು ಉತ್ತೇಜಿಸುತ್ತಿದೆ. ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ. ಈ ಭೂಮಿ ಸರ್ಕಾರಕ್ಕೆ ಸೇರಿಲ್ಲ. ಮಸೀದಿಯ ಬಳಿ ಆ ಭೂಮಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ” ಎಂದು ಅವರು ಹೇಳಿದರು.

ಮಸೀದಿಯನ್ನು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ವಿಎಚ್‌ಪಿ ಸದಸ್ಯರು ಆರೋಪಿಸಿದ್ದಾರೆ. ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಒದಗಿಸದೆ, ರೋಹಿಂಗ್ಯಾ ಮುಸ್ಲಿಮರನ್ನು ಈ ಪ್ರದೇಶದಲ್ಲಿ ನೆಲೆಸಲು ಕರೆತರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂತ್ವ ಗುಂಪುಗಳು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಳ್ವಿಕೆ ನಡೆಸುವ ರಾಜ್ಯಗಳಲ್ಲಿನ ಆಡಳಿತವು ಅತಿಕ್ರಮಣಗಳನ್ನು ತೆರವುಗೊಳಿಸುವ ಹೆಸರಿನಲ್ಲಿ ಮಸೀದಿಗಳನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದೆ. ಕೇಸರಿ ಗುಂಪುಗಳು ಉತ್ತರಪ್ರದೇಶ, ಉತ್ತರಾಖಂಡ, ಹಿಮಾಚಲಪ್ರದೇಶ, ಗುಜರಾತ್ ಮತ್ತು ಈಗ ಮಧ್ಯಪ್ರದೇಶದಲ್ಲಿನ ಮಸೀದಿಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿವೆ. ಉತ್ತರಪ್ರದೇಶ ಮತ್ತು ಗುಜರಾತ್‌ನಲ್ಲಿ ಈಗಾಗಲೇ ಕೆಲವು ಮಸೀದಿಗಳನ್ನು ಕೆಡವಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...