Homeಮುಖಪುಟ'ಭೂ ಜಿಹಾದ್' ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

‘ಭೂ ಜಿಹಾದ್’ ಆರೋಪ: ಭೋಪಾಲ್‌ನ ಮೂರು ಅಂತಸ್ತಿನ ಮಸೀದಿ ಕೆಡವಲು ಹಿಂದುತ್ವ ಗುಂಪುಗಳ ಒತ್ತಾಯ

- Advertisement -
- Advertisement -

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿರುವ ಮಸೀದಿಯನ್ನು “ಅಕ್ರಮ” ಮತ್ತು “ಭೂ ಜಿಹಾದ್”ನ ಭಾಗ ಎಂದು ಕರೆದು ಕೆಡವಲು ಹಿಂದುತ್ವ ಗುಂಪುಗಳು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿವೆ.

ತಮ್ಮ ಪ್ರತಿಭಟನೆಯ ಭಾಗವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಸದಸ್ಯರು ಭಾನುವಾರದಂದು ಹತೈ ಖೇಡಾ ಪ್ರದೇಶದ ಮಸೀದಿಯ ಕಡೆಗೆ ಜೆಸಿಬಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಮೆರವಣಿಗೆ ನಡೆಸಿದರು. ಮೂರು ಅಂತಸ್ತಿನ ಮಸೀದಿಯ ಕೆಲವು ಭಾಗಗಳು ನಿರ್ಮಾಣ ಹಂತದಲ್ಲಿವೆ. ಪ್ರತಿಭಟನೆಯ ನಂತರ ಆಡಳಿತವು ಸದ್ಯಕ್ಕೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.

ಭಾನುವಾರ ಹಿಂದಿ ಸುದ್ದಿವಾಹಿನಿ ಜೀ ನ್ಯೂಸ್ ವರದಿಗಾರರೊಂದಿಗೆ ಮಾತನಾಡಿದ ಪ್ರತಿಭಟನಾಕಾರರೊಬ್ಬರು, ಆಡಳಿತವು ಮಸೀದಿಯ ವಿರುದ್ಧ ಬುಲ್ಡೋಜರ್ ಕ್ರಮಕೈಗೊಳ್ಳದಿದ್ದರೆ ತಾವೇ ಧಾರ್ಮಿಕ ಸ್ಥಳವನ್ನು ಕೆಡವುತ್ತೇವೆ ಎಂದು ಹೇಳಿದ್ದಾರೆ. ಹಿಂದುತ್ವ ಪ್ರತಿಭಟನಾಕಾರರು “ಭೂ ಜಿಹಾದ್‌ಗೆ ಅವಕಾಶ ನೀಡಲಾಗುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು.

“ನಾವು ಯಾವುದೇ ಬೆಲೆ ತೆತ್ತಾದರೂ ಮಸೀದಿಯನ್ನು ಕೆಡವುತ್ತೇವೆ. ಸರ್ಕಾರ ಅನುಮತಿಸದಿದ್ದರೂ ನಾವು ಅದನ್ನು ಕೆಡವುತ್ತೇವೆ. ಸರ್ಕಾರ ಏನು ಬೇಕಾದರೂ ಮಾಡಲಿ. ಅವರು ನನ್ನನ್ನು ಕಂಬಿಗಳ ಹಿಂದೆ ಹಾಕಬಹುದು ಅಥವಾ ಗಲ್ಲಿಗೇರಿಸಬಹುದು” ಎಂದು ಮತ್ತೊಬ್ಬ ಪ್ರತಿಭಟನಾಕಾರ ಮಸೀದಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನೊಬ್ಬ ಪ್ರತಿಭಟನಾಕಾರರು ಇದು ಭೋಪಾಲ್‌ನ ಹಲವಾರು ಭಾಗಗಳಲ್ಲಿ ನಡೆಯುತ್ತಿರುವ “ಭೂ ಜಿಹಾದ್” ಎಂದು ಹೇಳಿದ್ದಾರೆ. ಅವರು ಮೂರು ಅಂತಸ್ತಿನ ಮಸೀದಿ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ಗುಂಪೊಂದು ಬುಲ್ಡೋಜರ್ ಮೇಲೆ ಹತ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿತು.

ಮತ್ತೊಂದೆಡೆ ಹಿಂದೂ ಗುಂಪುಗಳು ದೇಶಾದ್ಯಂತ ಮಸೀದಿಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿವೆ ಎಂದು ಮುಸ್ಲಿಮರು ಹೇಳುತ್ತಿದ್ದಾರೆ. “ಅವರಿಗೆ ಭಾರತದ ಎಲ್ಲಾ ಮಸೀದಿಗಳೊಂದಿಗೆ ಸಮಸ್ಯೆಗಳಿವೆ. ಅವರಿಗೆ ತಾಜ್ ಮಹಲ್ ಮತ್ತು ಕೆಂಪು ಕೋಟೆಯೊಂದಿಗೆ ಸಮಸ್ಯೆ ಇದೆ. ಇತ್ತೀಚೆಗೆ ಅವರು ಸಂಭಾಲ್ ಮಸೀದಿಯ ಸಮಸ್ಯೆಗಳನ್ನು ಕೆದಕಿದ್ದಾರೆ. ದೇವಾಲಯಗಳನ್ನು ಹುಡುಕಲು ಅವರು ಎಲ್ಲಾ ಮಸೀದಿಗಳನ್ನು ಅಗೆಯುತ್ತಿದ್ದಾರೆ ಎಂದು ಸ್ಥಳೀಯ ಮುಸ್ಲಿಂ ಒಬ್ಬರು ವ್ಯಂಗ್ಯವಾಗಿ ಹೇಳಿದರು.

“ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಸಮಸ್ಯೆಗಳನ್ನು ಸೃಷ್ಟಿಸಲು ಸರ್ಕಾರ ಅವರನ್ನು ಉತ್ತೇಜಿಸುತ್ತಿದೆ. ಸರ್ಕಾರ ಪೂರ್ವಾಗ್ರಹ ಪೀಡಿತವಾಗಿದೆ. ಈ ಭೂಮಿ ಸರ್ಕಾರಕ್ಕೆ ಸೇರಿಲ್ಲ. ಮಸೀದಿಯ ಬಳಿ ಆ ಭೂಮಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ” ಎಂದು ಅವರು ಹೇಳಿದರು.

ಮಸೀದಿಯನ್ನು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ವಿಎಚ್‌ಪಿ ಸದಸ್ಯರು ಆರೋಪಿಸಿದ್ದಾರೆ. ಯಾವುದೇ ನಿರ್ದಿಷ್ಟ ಪುರಾವೆಗಳನ್ನು ಒದಗಿಸದೆ, ರೋಹಿಂಗ್ಯಾ ಮುಸ್ಲಿಮರನ್ನು ಈ ಪ್ರದೇಶದಲ್ಲಿ ನೆಲೆಸಲು ಕರೆತರಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂತ್ವ ಗುಂಪುಗಳು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆಳ್ವಿಕೆ ನಡೆಸುವ ರಾಜ್ಯಗಳಲ್ಲಿನ ಆಡಳಿತವು ಅತಿಕ್ರಮಣಗಳನ್ನು ತೆರವುಗೊಳಿಸುವ ಹೆಸರಿನಲ್ಲಿ ಮಸೀದಿಗಳನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದೆ. ಕೇಸರಿ ಗುಂಪುಗಳು ಉತ್ತರಪ್ರದೇಶ, ಉತ್ತರಾಖಂಡ, ಹಿಮಾಚಲಪ್ರದೇಶ, ಗುಜರಾತ್ ಮತ್ತು ಈಗ ಮಧ್ಯಪ್ರದೇಶದಲ್ಲಿನ ಮಸೀದಿಗಳ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿವೆ. ಉತ್ತರಪ್ರದೇಶ ಮತ್ತು ಗುಜರಾತ್‌ನಲ್ಲಿ ಈಗಾಗಲೇ ಕೆಲವು ಮಸೀದಿಗಳನ್ನು ಕೆಡವಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...