Homeಕರ್ನಾಟಕದಲಿತರಿಗೆ ಮೀಸಲಿಟ್ಟ ಹಣ ದುರುಪಯೋಗ ಆರೋಪ:  ಸಚಿವ ಶರಣಬಸಪ್ಪರನ್ನು ಸಂಪುಟದಿಂದ ವಜಾಕ್ಕೆ ದಲಿತ ಸೇನೆ ಆಗ್ರಹ

ದಲಿತರಿಗೆ ಮೀಸಲಿಟ್ಟ ಹಣ ದುರುಪಯೋಗ ಆರೋಪ:  ಸಚಿವ ಶರಣಬಸಪ್ಪರನ್ನು ಸಂಪುಟದಿಂದ ವಜಾಕ್ಕೆ ದಲಿತ ಸೇನೆ ಆಗ್ರಹ

- Advertisement -
- Advertisement -

ಬೆಂಗಳೂರು: ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹಲವು ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸರಕಾರ ಈ ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಂಪುಟದಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಅಧ್ಯಕ್ಷ ಹನುಮಂತ ಜಿ.ಯಳಸಂಗಿ ಆಗ್ರಹಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದಿರುವ ಯಾದಗಿರಿ ಜಿಲ್ಲೆಯಲ್ಲಿ ಬಹುತೇಕ ಸರಕಾರಿ ಇಲಾಖೆಗಳ ಕಚೇರಿಗಳು ಮತ್ತು ಶಾಲೆಗಳು ಖಾಸಗಿ ಜಾಗಗಳಲ್ಲಿವೆ. ಶರಣಬಸಪ್ಪ ಮತ್ತು ಕುಟುಂಬದವರು ಸರಕಾರದ ಭೂಮಿಯನ್ನು ಒತ್ತುವರಿ ಮಾಡಿಕೊಂಡು, ಅದೇ ಜಾಗಗಳಲ್ಲಿ ಸರಕಾರದ ಇಲಾಖೆಗಳಿಗೆ ಲಕ್ಷಾಂತರ ರೂಪಾಯಿಗೆ ಬಾಡಿಗೆ ನೀಡಿ ಅಕ್ರಮವೆಸಗುತ್ತಿದ್ದಾರೆ ಎಂದು ಆರೋಪಿಸಿದರು.

ಬಡವರಿಗಾಗಿ ಮೀಸಲಿಟ್ಟ ಎರಡು ಎಕರೆ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿದ್ದಲ್ಲದೆ, ಸದರಿ ಜಮೀನಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ತಾವೇ ಮಾಲಕರಂತೆ ಬೇರೆಯವರಿಗೆ ಮಾರಾಟ ಮಾಡಿದ್ದಾರೆ. ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು, ಸಚಿವರನ್ನು ಜನರು ಪ್ರಶ್ನೆ ಮಾಡಲಾಗದಂತ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ.  ಸಣ್ಣ ಮತ್ತು ಮಧ್ಯಮ ವರ್ಗಗಳ ಸಮಗ್ರ ಅಭಿವೃದ್ಧಿ ಯೋಜನೆಯ ಸರ್ವೆ ನಂ.826 ರಲ್ಲಿ 1 ಎಕರೆ 32 ಗುಂಟೆ ಜಮೀನನ್ನು ಕೂಡ ಪಡೆದಿದ್ದು, ಅಲ್ಲಿನ ಎಲ್ಲ ಗಾರ್ಡನ್ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹನುಮಂತ ದೂರಿದರು.

ಕೊರಚ ಮತ್ತು ಕೊರಮರಿಗೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅಲ್ಲಿ ಕಟ್ಟಡ ಕಟ್ಟಲಾಗಿದೆ. ಮೂಡಾ ಹಗರಣಕ್ಕಿಂತ ದೊಡ್ಡ ಮಟ್ಟದಲ್ಲಿ ಇಲ್ಲಿ ಅಕ್ರಮ ನಡೆಯುತ್ತಿದ್ದು, ಸಚಿವರ ಕುಟುಂಬ ಗೂಂಡಾಗಿರಿ ಮಾಡುತ್ತಿದ್ದಾರೆ.

ಯಾದಗಿರಿಯ ಯಾವೊಂದು ಸರಕಾರಿ ಸಂಸ್ಥೆಗಳಿಗೆ ಸ್ವಂತ ಜಾಗಗಳಿಲ್ಲ. ಯಾವುದಾದರೊಂದು ಸರಕಾರಿ ಜಾಗದಲ್ಲಿ ಬಡವರು ಗುಡಿಸಲು ಕಟ್ಟಿಕೊಂಡಾಗ ಅದನ್ನು ಎತ್ತಂಗಡಿ ಮಾಡಿಸಿ ಅವರು ಆಕ್ರಮಿಸಿಕೊಳ್ಳುತ್ತಾರೆ. ಎಸ್ಸಿಪಿ-ಟಿಎಸ್ಪಿ ಯೋಜನೆ ಹೆಸರಿನಲ್ಲಿ ಹಣವನ್ನು ಕಬಳಿಸಿರುವ ಶರಣಬಸಪ್ಪ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಸರಕಾರ ಸಚಿವರನ್ನು ಮಂತ್ರಿಮಂಡಲದಿಂದ ಕೈಬಿಡಬೇಕು. ಮುನಿಸಿಪಾಲಿಟಿ ಆಸ್ತಿ ಕಬಳಿಸುವಲ್ಲಿ ಸಹಕರಿಸಿದ ಶಹಾಪೂರ ಪುರಸಭೆಯ ಹಿಂದಿನ ಎಲ್ಲ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಹನುಮಂತ ಯಳಸಂಗಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೇನೆಯ ಉಪಾಧ್ಯಕ್ಷ ಎಂ.ಎ.ಸಿಂದಗಿಕರ್, ಶಾಂತಪ್ಪ ಬಿ.ಸಾಲಿಮನಿ, ಝಾವ್ಹೇದ್ ಖಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಕೆ ವಿರುದ್ಧ ಹರಿರಾಮ್ ನೇತೃತ್ವದಲ್ಲಿ ಪಿಐಎಲ್ ಮತ್ತು ಆ.18ಕ್ಕೆ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...