Homeಮುಖಪುಟಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

ಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

- Advertisement -
- Advertisement -

ಮರಾಠಿ ಚಿತ್ರ ‘ನಾಯ್‌ ವರನ್ ಭಾತ್ ಲೋನ್‌ಚಾ ಕೋನ್ ನಾಯ್‌ ಕೋನ್‌ಚಾ’ದಲ್ಲಿ ಮಹಿಳೆಯರು ಮತ್ತು ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳನ್ನು ಚಿತ್ರಿಸಲಾಗಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮಹೇಶ್ ಮಂಜ್ರೇಕರ್‌ ವಿರುದ್ಧ ಮುಂಬೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜತೆಗೆ ಎರಡು ಕಡೆ ಪ್ರತ್ಯೇಕ ದೂರುಗಳು ದಾಖಲಾಗಿವೆ.

2022ರ ಜನವರಿ 14ರಂದು ಚಲನಚಿತ್ರ ಬಿಡುಗಡೆಯಾಗಿದ್ದು, ಮಹೇಶ್ ಮಂಜ್ರೇಕರ್‌ ಮೇಲೆ ಆಕ್ರೋಶ ವ್ಯಕ್ತವಾಗಿದೆ.

ಸೆಕ್ಷನ್ 292 (ಅಶ್ಲೀಲ ವಿಷಯದ ಮಾರಾಟ ಇತ್ಯಾದಿ) , 295 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯಗಳು ಅಥವಾ ಪದಗಳಿಗೆ ಶಿಕ್ಷೆ), ಐಪಿಸಿಯ 34 (ಸಾಮಾನ್ಯ ಉದ್ದೇಶ) ಮತ್ತು ಮಹಿಳೆಯರನ್ನು ಅಸಭ್ಯವಾಗಿ ಪ್ರಾತಿನಿಧಿಸುವ ನಿಷೇಧ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವಂತೆ ಮುಂಬೈನ ಕ್ಷತ್ರಿಯ ಮರಾಠಾ ಸೇವಾ ಸಂಸ್ಥಾ ಸಂಸ್ಥೆಯು ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಇನ್ನೊಂದೆಡೆ ವಕೀಲ ಡಿ.ವಿ.ಸರೋಜ್, ಸಮಾಜದಲ್ಲಿ ಸಾಮರಸ್ಯ ಕದಡುವ ವಿಚಾರದ ಹಿನ್ನೆಲೆಯಲ್ಲಿ ಚಿತ್ರದ ವಿರುದ್ಧ ಮಹಾರಾಷ್ಟ್ರದಾದ್ಯಂತ ಪ್ರತಿಭಟನೆಗಳು ನಡೆದಿದ್ದು, ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ, ನಿರ್ದೇಶಕರು ಮತ್ತು ಇತರ ತಯಾರಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್ ಸಿ) ಅಧ್ಯಕ್ಷ ಪ್ರಸೂನ್ ಜೋಶಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ನ್ಯಾಯಾಲಯ ಜನವರಿ 31 ರಂದು ಇದರ ವಿಚಾರಣೆ ನಡೆಸಲಿದೆ.

ಭಾರತೀಯ ಸ್ತ್ರೀ ಶಕ್ತಿ ಎನ್‌ಜಿಒನ ಅಧ್ಯಕ್ಷೆ ಸೀಮಾ ದೇಶಪಾಂಡೆ, “ಚಿತ್ರದ ಟ್ರೇಲರ್‌ ಬಗ್ಗೆ ಈ ಹಿಂದೆಯೇ ಮುಂಬೈ ಪೊಲೀಸ್ ಡಿಸಿಪಿ ವಲಯ 5ಕ್ಕೆ ತೆರಳಿ ದೂರು ನೀಡಿದ್ದು, ಅವರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲಾಗಿದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಐಪಿಸಿ ಸೆಕ್ಷನ್ 292 (ಅಶ್ಲೀಲತೆ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಜೊತೆಗೆ ಮಹಿಳೆಯರನ್ನು ಅಸಭ್ಯವಾಗಿ ಪ್ರಾತಿನಿಧಿಸುವ ನಿಷೇಧ ಕಾಯ್ದೆ, 1986ರ ಸೆಕ್ಷನ್ 2 (ಸಿ) ಮತ್ತು ಸೆಕ್ಷನ್ 13 ಆರ್/ಡಬ್ಲ್ಯೂ ಎಸ್ 21 ಪೋಕ್ಸೊ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೀಮಾ ದೇಶಪಾಂಡೆ  ಮನವಿ ಮಾಡಿದ್ದಾರೆ.

ನಾಗ್ಪುರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಭಾರತೀಯ ಸ್ತ್ರೀ ಶಕ್ತಿಯ ಅರ್ಜಿದಾರ ನೀಲಂ ಪಾರ್ವಟೆರ ದೂರಿನ ವಿಚಾರಣೆಯನ್ನು ಮುಂದಿನ ವಾರ ಕೈಗೆತ್ತುಕೊಳ್ಳಲಿದೆ.

ನೀಲಂರ ಅರ್ಜಿಯ ಪ್ರಕಾರ, ಜನವರಿ 10ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಇದನ್ನು ಗಮನಿಸಿದ ನಂತರವಷ್ಟೇ ದೂರು ನೀಡಲಾಗಿದೆ. ಟ್ರೇಲರ್‌‌ ಅಪ್ರಾಪ್ತ ಮಕ್ಕಳೊಂದಿಗಿನ ಆಕ್ಷೇಪಾರ್ಹ ದೃಶ್ಯಗಳನ್ನು ತೋರಿಸಿರುವುದರಿಂದ ಚಿತ್ರ ಬಿಡುಗಡೆಯಾಗಬಾರದೆಂದು ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಮಹೇಶ್ ಮಜ್ರೇಕರ್ ನಿರ್ದೇಶನದ ಸಿನಿಮಾ ಕಳೆದ ವಾರ ಬಿಡುಗಡೆಯಾಗಿದ್ದು, ಅರ್ಜಿದಾರರು ತಮ್ಮ ಅರ್ಜಿಯನ್ನು ತಿದ್ದುಪಡಿ ಮಾಡಿದ್ದಾರೆ. ಚಿತ್ರಕ್ಕೆ ನೀಡಲಾದ ಪ್ರಮಾಣಪತ್ರವನ್ನು ಪರಿಶೀಲಿಸಲು ನ್ಯಾಯಾಲಯವು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಮೂಲಕ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಚಿತ್ರದಲ್ಲಿನ ಅಪ್ರಾಪ್ತರ ಪಾತ್ರಗಳನ್ನು ನಿರ್ವಹಿಸಿರುವ ಮಕ್ಕಳು, ವಯಸ್ಸಾದ ಮಹಿಳೆಯರೊಂದಿಗೆ ಅನೈತಿಕ ಲೈಂಗಿಕ ಸಂಬಂಧ ಹೊಂದಿರುವಂಥ ದೃಶ್ಯಗಳಿವೆ. ಇವು ಕಾನೂನುಬಾಹಿರ ಮತ್ತು ಮಕ್ಕಳ ಅಶ್ಲೀಲತೆ ಕಾಯ್ದೆಯಡಿ ಬರುತ್ತವೆ. ಟ್ರೇಲರ್ ನಲ್ಲಿ ತೋರಿಸಲಾದ ಲೈಂಗಿಕ ದೃಶ್ಯಗಳು ಚಿತ್ರದಲ್ಲಿಲ್ಲ. ಆದರೂ, ಚಿತ್ರದಲ್ಲಿ ಅಪ್ರಾಪ್ತರನ್ನು ಬಳಸಿಕೊಂಡ ಅಸಂಬದ್ಧ ದೃಶ್ಯಗಳು ಸಹ ಕ್ರಿಮಿನಲ್ ಕೃತ್ಯವಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿರಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...