Homeಮುಖಪುಟಅಮೆರಿಕದಲ್ಲಿ ಪನ್ನುನ್ ಕೊಲೆಗೆ ಸಂಚು ಆರೋಪ: ತನಿಖೆಗೆ ಸಮಿತಿ ರಚಿಸಿದ ಭಾರತ

ಅಮೆರಿಕದಲ್ಲಿ ಪನ್ನುನ್ ಕೊಲೆಗೆ ಸಂಚು ಆರೋಪ: ತನಿಖೆಗೆ ಸಮಿತಿ ರಚಿಸಿದ ಭಾರತ

- Advertisement -
- Advertisement -

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ಕಾರ್ಯಕರ್ತ ಪನ್ನುನ್ ಕೊಲೆಗೆ ಸಂಚು ಆರೋಪದ ಕುರಿತು ತನಿಖೆ ನಡೆಸಲು ಭಾರತ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿದೆ.

ಯುಎಸ್ ಅಧಿಕಾರಿಗಳು ನನ್ನ ಹತ್ಯೆಯ ಸಂಚನ್ನು ವಿಫಲಗೊಳಿಸಿದ್ದಾರೆ ಮತ್ತು ಹತ್ಯೆಯ ಸಂಚಿನಲ್ಲಿ ಭಾರತದ ಕೈವಾಡ ಇದೆ ಎಂದು ಗುರುಪತ್ವಂತ್ ಸಿಂಗ್ ಪನ್ನುನ್ ಮೊದಲು ಆರೋಪಿಸಿದ್ದರು. ಆ ಬಳಿಕ ಅಮೆರಿಕ ಕೂಡ ಘಟನೆಯ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿತ್ತು. ಭಾರತ ಸರ್ಕಾರ ಈ ಸಂಚಿನ ಬಗ್ಗೆ ತಿಳಿದಿರಬಹುದು ಎಂದು ಹೇಳಿತ್ತು.

ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಪ್ರತಿಕ್ರಿಯಿಸಿದ್ದು, ಅಮೆರಿಕದಲ್ಲಿ ಖಾಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂ ಹತ್ಯೆಗೆ ಯತ್ನಿಸಲಾಗಿತ್ತು ಎಂಬ ಆರೋಪಗಳ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಪನ್ನೂನ್ ಸಿಖ್ ಪತ್ಯೇಕತಾವಾದಿ ಮತ್ತು ಕೆನಡಾದ ಪ್ರಜೆ ಎಂದು ತಿಳಿದು ಬಂದಿದೆ. ವಿವಿಧ ಭಯೋತ್ಪಾದನಾ ಆರೋಪಗಳಲ್ಲಿ ಈತ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದಾನೆ. ಈ ಆರೋಪಗಳ ಕುರಿತು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ವರದಿ ಆಧಾರದ ಮೇಲೆ ಭಾರತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ನಮ್ಮ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳ ಮೇಲೆ ಪ್ರಭಾವ ಬೀರುವುದರಿಂದ ಭಾರತವು ಅಂತಹ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತದೆ ಮತ್ತು ಸಂಬಂಧಿತ ಇಲಾಖೆಗಳು ಈಗಾಗಲೇ ಸಮಸ್ಯೆಯನ್ನು ಪರಿಶೀಲಿಸುತ್ತಿವೆ ಎಂದು ಅವರು ಹೇಳಿದರು.

ಜೂನ್‌ನಲ್ಲಿ ವ್ಯಾಂಕೋವರ್ ಉಪನಗರದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡದ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬಳಿಕ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಹಳಸಿತ್ತು.ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ಮಧ್ಯೆಯೇ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಕೂಡ ಹೇಳಿಕೊಂಡಿತ್ತು.

ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್‌, ಹರ್ದೀಪ್ ಸಿಂಗ್ ನಿಜ್ಜರ್‌ನಂತೆ ದಶಕಗಳ ಕಾಲದ ಸಿಖ್‌ ಪ್ರತ್ಯೇಕವಾದಿ ಪ್ರತಿಪಾದಕನಾಗಿದ್ದಾನೆ.

ಪನ್ನೂನ್ ಗಾರ್ಡಿಯನ್‌ಗೆ ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ, ಕೆನಡಾದಲ್ಲಿರುವ ಭಾರತೀಯ ಅಧಿಕಾರಿಗಳು ನಿಜ್ಜರ್ ಹತ್ಯೆಯ ತನಿಖೆಯನ್ನು ಕುಂಠಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಜ್ಜರ್‌ ಗುಂಡೇಟಿಗೆ ಬಲಿಯಾಗಿ 5 ತಿಂಗಳಾದರೂ ಯಾರನ್ನೂ ಬಂಧಿಸಲಾಗಿಲ್ಲ. ಸರಣಿ ಹತ್ಯೆಗಳ ಈ ತನಿಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇದು ಟೊರೊಂಟೊ ಅಥವಾ ವ್ಯಾಂಕೋವರ್‌ನಲ್ಲಿ ನಡೆದ ಸರಳವಾದ ಕೊಲೆಯಲ್ಲ. ಇದು ಖಲಿಸ್ತಾನ್ ಪರ ಕಾರ್ಯಕರ್ತನ ಸುಸಂಘಟಿತ ಕೊಲೆಯಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ; ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...