Homeಮುಖಪುಟಒಂದೇ ಒಂದು ಚಾಕೊಲೇಟ್ ಕದ್ದ ಆರೋಪ: ಐವರು ಬಾಲಕರ ಬೆತ್ತಲೆ ಮೆರವಣಿಗೆ!

ಒಂದೇ ಒಂದು ಚಾಕೊಲೇಟ್ ಕದ್ದ ಆರೋಪ: ಐವರು ಬಾಲಕರ ಬೆತ್ತಲೆ ಮೆರವಣಿಗೆ!

- Advertisement -
- Advertisement -

ಒಂದೇ ಒಂದು ಚಾಕೊಲೇಟ್ ಕದ್ದ ಆರೋಪದ ಮೇಲೆ ಐವರು ಬಾಲಕರನ್ನು ಅಂಗಡಿ ಮಾಲೀಕನೋರ್ವ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಬಿಹಾರದ ಗ್ರಾಮವೊಂದರಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸೀತಾಮರ್ಹಿ ಜಿಲ್ಲೆಯ ಮಲ್ಲಾಹಿ ಗ್ರಾಮದ ಅಂಗಡಿ ಮಾಲೀಕ ದುಷ್ಕೃತ್ಯವೆಸಗಿದ್ದಾರೆ. ಬಾಲಕರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ, ಒಂದೇ ಹಗ್ಗಕ್ಕೆ ಅವರೆಲ್ಲರನ್ನು ಕಟ್ಟಿ, ಕತ್ತಿಗೆ ಚಪ್ಪಲಿಯ ಹಾರಹಾಕಿ ಗ್ರಾಮದ ಮಾರುಕಟ್ಟೆ ಪ್ರದೇಶದಲ್ಲಿ ಮೆರವಣಿಗೆ ನಡೆಸಿದ್ದಾರೆ.

ಬಿಳಿ ಸೀಮೆಸುಣ್ಣದಿಂದ ಮಕ್ಕಳ ಮೈಮೇಲೆ ಗೆರೆಗಳನ್ನು ಹಾಕಿ ವಿಕೃತಿ ಮೆರೆಯಲಾಗಿತ್ತು. ಮಕ್ಕಳತ್ತ ಗುರಿ ಮಾಡಿ ಕೈಯಲ್ಲಿ ಬಡಿಗೆ ಹಿಡಿದಿದ್ದ ಅಂಗಡಿ ಮಾಲೀಕ, “ಎಲ್ಲ ಮಕ್ಕಳನ್ನು ನನ್ನ ಅಂಗಡಿಯಿಂದ ಕಳವು ಮಾಡಿದಾಗ ಹಿಡಿಯಲಾಗಿದೆ” ಎಂದು ಹೇಳಿದ್ದಾರೆ. ಅವಮಾನದಿಂದ ಮಕ್ಕಳು ಮುಖಮುಚ್ಚಿಕೊಂಡಿದ್ದರೆ, ಅವರ ಸುತ್ತಲೂ ಗ್ರಾಮಸ್ಥರು ಅಣಕವಾಡುತ್ತಿದ್ದರು ಎಂದು ವರದಿಗಳು ವಿವರಿಸಿವೆ.

ಇಷ್ಟೇ ಅಲ್ಲದೆ, ಅಂಗಡಿ ಮಾಲೀಕ ಕ್ಯಾಮರಾ ಮುಂದೆ ಮಕ್ಕಳು ತಮ್ಮ ಹಾಗೂ ತಮ್ಮ ತಂದೆಯಂದಿರ ಹೆಸರು ಹೇಳುವಂತೆ ಬಲವಂತಪಡಿಸಿದ್ದಾರೆ. ಬಾಲಕರ ಪೈಕಿ ಒಬ್ಬನ ತಲೆಯನ್ನು ಜಜ್ಜಿ ಕ್ಯಾಮರಾ ನೋಡು ಎಂದು ದೌರ್ಜನ್ಯ ನಡೆಸಿದ್ದಾರೆ ಎಂದಿವೆ.

ದೌರ್ಜನ್ಯದ ವೇಳೆ “ನಾನು ಒಂದೇ ಒಂದು ಸ್ನಿಕ್ಕರ್ಸ್ (ಚಾಕೊಲೇಟ್) ತೆಗೆದಿದ್ದೆ” ಎಂದು ಒಬ್ಬ ಬಾಲಕ ಹೇಳಿದ್ದಾನೆ. ಜನನಿಬಿಡ ಮಾರುಕಟ್ಟೆಯಲ್ಲಿ ಮಕ್ಕಳನ್ನು ಬೆತ್ತಲು ಮೆರವಣಿಗೆ ಮಾಡಿದರೂ, ದೌರ್ಜನ್ಯ ತಡೆಯಲು ಯಾರೂ ಮಧ್ಯಪ್ರವೇಶಿಸಿಲ್ಲ. ಬದಲಾಗಿ, ಅವರು ದುಷ್ಕೃತ್ಯ ವಿಡಿಯೋ ಸೆರೆ ಹಿಡಿಯುವುದರಲ್ಲಿ ನಿರತರಾಗಿದ್ದರು. ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಪೊಲೀಸರು ಅಂಗಡಿ ಮಾಲೀಕ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ಚಿತ್ರೀಕರಿಸಿದ ಮಾಧ್ಯಮ ಪ್ರತಿನಿಧಿಯ ವಿರುದ್ಧವೂ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸೀತಾಮರ್ಹಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯನ್ನು ಮತ್ತಷ್ಟು ಬಲಪಡಿಸಲು ವಿಶ್ವಸಂಸ್ಥೆಯಿಂದ ಸರಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...