Homeಮುಖಪುಟದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

- Advertisement -
- Advertisement -

ಇನ್‌ಸ್ಟಾಗ್ರಾಮ್‌ನ ಮಾತೃ ಕಂಪನಿ ಮೆಟಾ ತನ್ನ ವೇದಿಕೆಗಳಲ್ಲಿ ತನ್ನ ಮಿಲಿಟರಿ ಸೇರಿದಂತೆ ರಷ್ಯಾದ ವಿರುದ್ಧ ಹಿಂಸಾಚಾರಕ್ಕೆ ನೀಡಿರುವ ಕರೆಗಳನ್ನು ಅನುಮತಿಸಿದೆ ಎಂದು ಆರೋಪಿಸಿ ಸೋಮವಾರದಂದು ರಷ್ಯಾದಲ್ಲಿ ಇನ್‌ಸ್ಟಾಗ್ರಾಮ್‌ ಆಪ್‌ ಬಳಕೆಗೆ ತಡೆಯೊಡ್ಡಲಾಗಿದೆ.

ದೇಶದಲ್ಲಿ ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಮುಂಬರುವ ಪರಿಸ್ಥಿತಿ ಕುರಿತು ತಿಳಿಸಲಾಗಿರುವುದರಿಂದ ಈ ನಡೆ ಅನಿವಾರ್ಯವಾಗಿತ್ತು. ಉಕ್ರೇನ್‌ ವಿರುದ್ಧ ನಡೆಸಲಾಗುತ್ತಿರುವ ಯುದ್ಧದ ಮಧ್ಯೆ ರಷ್ಯಾದಲ್ಲಿ ತನ್ನ ಎಲ್ಲಾ ಸೇವೆಗಳನ್ನು ಮಧ್ಯೆರಾತ್ರಿಯ ನಂತರ ಭಾನುವಾರ ಮುಚ್ಚಲಾಗುವುದು ಎಂದು ಇನ್‌ಸ್ಟಾಗ್ರಾಮ್‌ ತಿಳಿಸಿದೆ.

ರಷ್ಯಾದ ಇನ್‌ಸ್ಟಾಗ್ರಾಮ್‌ ಮುಖ್ಯಸ್ಥ ಆಡಮ್ ಮೊಸ್ಸೆರಿ, ಈ ನಿರ್ಧಾರದಿಂದ ಇನ್‌ಸ್ಟಾಗ್ರಾಮ್‌ಗೆ ಎಂಟು ಕೋಟಿ ಬಳಕೆದಾರರು ಕಡಿತಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ರಷ್ಯಾದಲ್ಲಿ ಫೇಸ್ಬುಕ್, ಟ್ವಿಟರ್ ಮತ್ತು ಟಿಕ್‌ಟಾಕ್ ನಂತಹ ವೇದಿಕೆಗಳು ಹೆಚ್ಚು ಜನಪ್ರಿಯವಾಗಿವೆ.

ಇದನ್ನೂ ಓದಿ: ರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP ಸರ್ಕಾರ!

ಮುಚ್ಚುವ ಮೊದಲು ತಮ್ಮ ವಿಡಿಯೊ ಮತ್ತು ಪೋಟೋಗಳನ್ನು ಇನ್ಸ್ಟಾಗ್ರಾಮ್‌ನಿಂದ ತೆಗೆದುಕೊಳ್ಳುವಂತೆ ಸ್ಟೇಟ್ ಕಮ್ಯೂನಿಕೇಶನ್ಸ್ ರೆಗ್ಯುಲೇಟರ್‌ ಬಳಕೆದಾರರಿಗೆ ಇಮೇಲ್ ಸಂದೇಶ ಕಳುಹಿಸಿದ್ದು, ರಷ್ಯಾ ನಿರ್ಮಿತ ಜಾಲತಾಣಗಳನ್ನ ಬಳಸಿ ಪ್ರೋತ್ಸಾಹಿಸಲು ಕೇಳಿಕೊಂಡಿದೆ.

ರಷ್ಯಾ ಈ ಹಿಂದೆ ಮಾರ್ಚ್‌ ಮೊದಲ ವಾರದಲ್ಲಿ ಟ್ವೀಟರ್ ಫೇಸ್‌ಬುಕ್‌ಗಳನ್ನು ನಿರ್ಬಂಧಿಸಿತ್ತು. ಇದೀಗ ಇನ್‌ಸ್ಟಾಗ್ರಾಮ್‌ ಮೇಲೆ ಕೂಡಾ ನಿರ್ಬಂಧ ಹೇರಿದೆ. ಉಕ್ರೇನ್‌ನಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ರಷ್ಯನ್ನರಿಗೆ ಲಭ್ಯವಾಗುವ ಮಾಹಿತಿಯನ್ನು ನಿಯಂತ್ರಿಸಲು ರಷ್ಯಾ ಕ್ರಮ ಜರುಗಿಸಿದೆ ಎಂದು ವರದಿಯಾಗಿವೆ.

ರಷ್ಯಾದ ಮಾಧ್ಯಮ ನಿಯಂತ್ರಕವು ಪ್ರಕಟಿಸಿದ ನಿರ್ಭಂದಿತ ಆನ್‌ಲೈನ್ ಪಟ್ಟಿಯಲ್ಲಿ ಇನ್‌ಸ್ಟಾಗ್ರಾಮ್‌ ಸೋಮವಾರದಂದು ಕಾಣಿಸಿಕೊಂಡಿದೆ.

ರಷ್ಯಾದಲ್ಲಿ VPN ಇಲ್ಲದೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್ ಬಳಕೆಗೆ ಸಿಗುತ್ತಿಲ್ಲ ಎಂದು AFP ಪತ್ರಕರ್ತರು ಹೇಳಿದ್ದಾರೆ. ಫೇಸ್‌‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ರಷ್ಯಾದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿದ್ದು, ಅದರಲ್ಲೂ ಇನ್‌ಸ್ಟಾಗ್ರಾಮ್‌ ಯುವ ರಷ್ಯನ್ನರ ನಡುವೆ ಅತ್ಯಂತ ಜನಪ್ರಿಯ ಸಾಮಾಜಿಕ ಮಾದ್ಯಮವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...