Homeಮುಖಪುಟದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

- Advertisement -
- Advertisement -

ಇನ್‌ಸ್ಟಾಗ್ರಾಮ್‌ನ ಮಾತೃ ಕಂಪನಿ ಮೆಟಾ ತನ್ನ ವೇದಿಕೆಗಳಲ್ಲಿ ತನ್ನ ಮಿಲಿಟರಿ ಸೇರಿದಂತೆ ರಷ್ಯಾದ ವಿರುದ್ಧ ಹಿಂಸಾಚಾರಕ್ಕೆ ನೀಡಿರುವ ಕರೆಗಳನ್ನು ಅನುಮತಿಸಿದೆ ಎಂದು ಆರೋಪಿಸಿ ಸೋಮವಾರದಂದು ರಷ್ಯಾದಲ್ಲಿ ಇನ್‌ಸ್ಟಾಗ್ರಾಮ್‌ ಆಪ್‌ ಬಳಕೆಗೆ ತಡೆಯೊಡ್ಡಲಾಗಿದೆ.

ದೇಶದಲ್ಲಿ ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಮುಂಬರುವ ಪರಿಸ್ಥಿತಿ ಕುರಿತು ತಿಳಿಸಲಾಗಿರುವುದರಿಂದ ಈ ನಡೆ ಅನಿವಾರ್ಯವಾಗಿತ್ತು. ಉಕ್ರೇನ್‌ ವಿರುದ್ಧ ನಡೆಸಲಾಗುತ್ತಿರುವ ಯುದ್ಧದ ಮಧ್ಯೆ ರಷ್ಯಾದಲ್ಲಿ ತನ್ನ ಎಲ್ಲಾ ಸೇವೆಗಳನ್ನು ಮಧ್ಯೆರಾತ್ರಿಯ ನಂತರ ಭಾನುವಾರ ಮುಚ್ಚಲಾಗುವುದು ಎಂದು ಇನ್‌ಸ್ಟಾಗ್ರಾಮ್‌ ತಿಳಿಸಿದೆ.

ರಷ್ಯಾದ ಇನ್‌ಸ್ಟಾಗ್ರಾಮ್‌ ಮುಖ್ಯಸ್ಥ ಆಡಮ್ ಮೊಸ್ಸೆರಿ, ಈ ನಿರ್ಧಾರದಿಂದ ಇನ್‌ಸ್ಟಾಗ್ರಾಮ್‌ಗೆ ಎಂಟು ಕೋಟಿ ಬಳಕೆದಾರರು ಕಡಿತಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ರಷ್ಯಾದಲ್ಲಿ ಫೇಸ್ಬುಕ್, ಟ್ವಿಟರ್ ಮತ್ತು ಟಿಕ್‌ಟಾಕ್ ನಂತಹ ವೇದಿಕೆಗಳು ಹೆಚ್ಚು ಜನಪ್ರಿಯವಾಗಿವೆ.

ಇದನ್ನೂ ಓದಿ: ರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP ಸರ್ಕಾರ!

ಮುಚ್ಚುವ ಮೊದಲು ತಮ್ಮ ವಿಡಿಯೊ ಮತ್ತು ಪೋಟೋಗಳನ್ನು ಇನ್ಸ್ಟಾಗ್ರಾಮ್‌ನಿಂದ ತೆಗೆದುಕೊಳ್ಳುವಂತೆ ಸ್ಟೇಟ್ ಕಮ್ಯೂನಿಕೇಶನ್ಸ್ ರೆಗ್ಯುಲೇಟರ್‌ ಬಳಕೆದಾರರಿಗೆ ಇಮೇಲ್ ಸಂದೇಶ ಕಳುಹಿಸಿದ್ದು, ರಷ್ಯಾ ನಿರ್ಮಿತ ಜಾಲತಾಣಗಳನ್ನ ಬಳಸಿ ಪ್ರೋತ್ಸಾಹಿಸಲು ಕೇಳಿಕೊಂಡಿದೆ.

ರಷ್ಯಾ ಈ ಹಿಂದೆ ಮಾರ್ಚ್‌ ಮೊದಲ ವಾರದಲ್ಲಿ ಟ್ವೀಟರ್ ಫೇಸ್‌ಬುಕ್‌ಗಳನ್ನು ನಿರ್ಬಂಧಿಸಿತ್ತು. ಇದೀಗ ಇನ್‌ಸ್ಟಾಗ್ರಾಮ್‌ ಮೇಲೆ ಕೂಡಾ ನಿರ್ಬಂಧ ಹೇರಿದೆ. ಉಕ್ರೇನ್‌ನಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ರಷ್ಯನ್ನರಿಗೆ ಲಭ್ಯವಾಗುವ ಮಾಹಿತಿಯನ್ನು ನಿಯಂತ್ರಿಸಲು ರಷ್ಯಾ ಕ್ರಮ ಜರುಗಿಸಿದೆ ಎಂದು ವರದಿಯಾಗಿವೆ.

ರಷ್ಯಾದ ಮಾಧ್ಯಮ ನಿಯಂತ್ರಕವು ಪ್ರಕಟಿಸಿದ ನಿರ್ಭಂದಿತ ಆನ್‌ಲೈನ್ ಪಟ್ಟಿಯಲ್ಲಿ ಇನ್‌ಸ್ಟಾಗ್ರಾಮ್‌ ಸೋಮವಾರದಂದು ಕಾಣಿಸಿಕೊಂಡಿದೆ.

ರಷ್ಯಾದಲ್ಲಿ VPN ಇಲ್ಲದೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್ ಬಳಕೆಗೆ ಸಿಗುತ್ತಿಲ್ಲ ಎಂದು AFP ಪತ್ರಕರ್ತರು ಹೇಳಿದ್ದಾರೆ. ಫೇಸ್‌‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ರಷ್ಯಾದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿದ್ದು, ಅದರಲ್ಲೂ ಇನ್‌ಸ್ಟಾಗ್ರಾಮ್‌ ಯುವ ರಷ್ಯನ್ನರ ನಡುವೆ ಅತ್ಯಂತ ಜನಪ್ರಿಯ ಸಾಮಾಜಿಕ ಮಾದ್ಯಮವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...