Homeಮುಖಪುಟದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

- Advertisement -
- Advertisement -

ಇನ್‌ಸ್ಟಾಗ್ರಾಮ್‌ನ ಮಾತೃ ಕಂಪನಿ ಮೆಟಾ ತನ್ನ ವೇದಿಕೆಗಳಲ್ಲಿ ತನ್ನ ಮಿಲಿಟರಿ ಸೇರಿದಂತೆ ರಷ್ಯಾದ ವಿರುದ್ಧ ಹಿಂಸಾಚಾರಕ್ಕೆ ನೀಡಿರುವ ಕರೆಗಳನ್ನು ಅನುಮತಿಸಿದೆ ಎಂದು ಆರೋಪಿಸಿ ಸೋಮವಾರದಂದು ರಷ್ಯಾದಲ್ಲಿ ಇನ್‌ಸ್ಟಾಗ್ರಾಮ್‌ ಆಪ್‌ ಬಳಕೆಗೆ ತಡೆಯೊಡ್ಡಲಾಗಿದೆ.

ದೇಶದಲ್ಲಿ ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಮುಂಬರುವ ಪರಿಸ್ಥಿತಿ ಕುರಿತು ತಿಳಿಸಲಾಗಿರುವುದರಿಂದ ಈ ನಡೆ ಅನಿವಾರ್ಯವಾಗಿತ್ತು. ಉಕ್ರೇನ್‌ ವಿರುದ್ಧ ನಡೆಸಲಾಗುತ್ತಿರುವ ಯುದ್ಧದ ಮಧ್ಯೆ ರಷ್ಯಾದಲ್ಲಿ ತನ್ನ ಎಲ್ಲಾ ಸೇವೆಗಳನ್ನು ಮಧ್ಯೆರಾತ್ರಿಯ ನಂತರ ಭಾನುವಾರ ಮುಚ್ಚಲಾಗುವುದು ಎಂದು ಇನ್‌ಸ್ಟಾಗ್ರಾಮ್‌ ತಿಳಿಸಿದೆ.

ರಷ್ಯಾದ ಇನ್‌ಸ್ಟಾಗ್ರಾಮ್‌ ಮುಖ್ಯಸ್ಥ ಆಡಮ್ ಮೊಸ್ಸೆರಿ, ಈ ನಿರ್ಧಾರದಿಂದ ಇನ್‌ಸ್ಟಾಗ್ರಾಮ್‌ಗೆ ಎಂಟು ಕೋಟಿ ಬಳಕೆದಾರರು ಕಡಿತಗೊಳ್ಳುತ್ತಾರೆ ಎಂದು ಹೇಳಿದ್ದಾರೆ. ರಷ್ಯಾದಲ್ಲಿ ಫೇಸ್ಬುಕ್, ಟ್ವಿಟರ್ ಮತ್ತು ಟಿಕ್‌ಟಾಕ್ ನಂತಹ ವೇದಿಕೆಗಳು ಹೆಚ್ಚು ಜನಪ್ರಿಯವಾಗಿವೆ.

ಇದನ್ನೂ ಓದಿ: ರಷ್ಯಾ ಮಾನವೀಯ ಕಾರಿಡಾರ್‌ ಘೋಷಿಸಿದರೂ ಕೈಗೆ ಸಿಕ್ಕ ವಾಹನಗಳಲ್ಲಿ ಸ್ಥಳಾಂತರಗೊಳ್ಳಿ ಎಂದ ಮೋದಿ ನೇತೃತ್ವದ BJP ಸರ್ಕಾರ!

ಮುಚ್ಚುವ ಮೊದಲು ತಮ್ಮ ವಿಡಿಯೊ ಮತ್ತು ಪೋಟೋಗಳನ್ನು ಇನ್ಸ್ಟಾಗ್ರಾಮ್‌ನಿಂದ ತೆಗೆದುಕೊಳ್ಳುವಂತೆ ಸ್ಟೇಟ್ ಕಮ್ಯೂನಿಕೇಶನ್ಸ್ ರೆಗ್ಯುಲೇಟರ್‌ ಬಳಕೆದಾರರಿಗೆ ಇಮೇಲ್ ಸಂದೇಶ ಕಳುಹಿಸಿದ್ದು, ರಷ್ಯಾ ನಿರ್ಮಿತ ಜಾಲತಾಣಗಳನ್ನ ಬಳಸಿ ಪ್ರೋತ್ಸಾಹಿಸಲು ಕೇಳಿಕೊಂಡಿದೆ.

ರಷ್ಯಾ ಈ ಹಿಂದೆ ಮಾರ್ಚ್‌ ಮೊದಲ ವಾರದಲ್ಲಿ ಟ್ವೀಟರ್ ಫೇಸ್‌ಬುಕ್‌ಗಳನ್ನು ನಿರ್ಬಂಧಿಸಿತ್ತು. ಇದೀಗ ಇನ್‌ಸ್ಟಾಗ್ರಾಮ್‌ ಮೇಲೆ ಕೂಡಾ ನಿರ್ಬಂಧ ಹೇರಿದೆ. ಉಕ್ರೇನ್‌ನಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ರಷ್ಯನ್ನರಿಗೆ ಲಭ್ಯವಾಗುವ ಮಾಹಿತಿಯನ್ನು ನಿಯಂತ್ರಿಸಲು ರಷ್ಯಾ ಕ್ರಮ ಜರುಗಿಸಿದೆ ಎಂದು ವರದಿಯಾಗಿವೆ.

ರಷ್ಯಾದ ಮಾಧ್ಯಮ ನಿಯಂತ್ರಕವು ಪ್ರಕಟಿಸಿದ ನಿರ್ಭಂದಿತ ಆನ್‌ಲೈನ್ ಪಟ್ಟಿಯಲ್ಲಿ ಇನ್‌ಸ್ಟಾಗ್ರಾಮ್‌ ಸೋಮವಾರದಂದು ಕಾಣಿಸಿಕೊಂಡಿದೆ.

ರಷ್ಯಾದಲ್ಲಿ VPN ಇಲ್ಲದೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್ ಬಳಕೆಗೆ ಸಿಗುತ್ತಿಲ್ಲ ಎಂದು AFP ಪತ್ರಕರ್ತರು ಹೇಳಿದ್ದಾರೆ. ಫೇಸ್‌‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ರಷ್ಯಾದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿದ್ದು, ಅದರಲ್ಲೂ ಇನ್‌ಸ್ಟಾಗ್ರಾಮ್‌ ಯುವ ರಷ್ಯನ್ನರ ನಡುವೆ ಅತ್ಯಂತ ಜನಪ್ರಿಯ ಸಾಮಾಜಿಕ ಮಾದ್ಯಮವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯರೊಂದಿಗೆ ರಷ್ಯಾ ಅಧ್ಯಕ್ಷ ಸಂವಾದ ನಡೆಸಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...