Homeಕರ್ನಾಟಕಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ - ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ...

ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪ್ರಮಾಣ ಮಾಡುವಂತೆ ಕೇಳಿದ್ದ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ ಅವರು, “ನಾನು ಈಗಾಗಲೇ ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಮತ ಕಳ್ಳತನದ ಬಗ್ಗೆ ಸಮಗ್ರ ವರದಿ ನೀಡಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿನ ಮತದಾರರ ಪಟ್ಟಿಯಲ್ಲೂ ಗೊಂದಲಗಳಿವೆ ಎಂದು ಉಲ್ಲೇಖಿಸಿ, ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕದ ಒಂದು ಕೋಟಿ ಹೊಸ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಹಾದೇವಪುರದಲ್ಲಿ ಮತ ಕಳ್ಳತನದ ಪುರಾವೆಗಳನ್ನು ಮುಂದಿಟ್ಟ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ಕರ್ನಾಟಕದ ಬೆಂಗಳೂರು ಮಹಾದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ವಿಶ್ಲೇಷಣೆಯ ವರದಿಯನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದರು. “ಮಹಾದೇವಪುರದಲ್ಲಿರುವ 6.5 ಲಕ್ಷ ಮತಗಳಲ್ಲಿ 1 ಲಕ್ಷದ 2,250 ಮತಗಳು ಕಳ್ಳತನವಾಗಿವೆ ಎಂದು ನಾವು ಖಚಿತವಾಗಿ ಹೇಳುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಿಸಿದರು.

ಈ ಮತ ಕಳ್ಳತನದ ಪ್ರಕ್ರಿಯೆಯು ಐದು ವಿಧಗಳಲ್ಲಿ ನಡೆದಿದೆ ಎಂದು ಅವರು ವಿವರಿಸಿದರು:

ದ್ವಿಪ್ರತಿ ನಮೂದು (Duplicate Entries): ಒಬ್ಬ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಸೇರಿಸಲಾಗಿದೆ ಮತ್ತು ಆತ ಐದು ಮತಗಟ್ಟೆಗಳಲ್ಲಿ ಮತದಾನ ಮಾಡಿರುವುದು ಕಂಡುಬಂದಿದೆ. ಈ ರೀತಿಯ 12,000 ಕಳ್ಳ ಮತಗಳನ್ನು ಗುರುತಿಸಲಾಗಿದೆ.

ನಕಲಿ ವಿಳಾಸಗಳು: ಒಂದೇ ಕೊಠಡಿಯಿರುವ ಮನೆಗಳಲ್ಲಿ 40 ರಿಂದ 80 ಮತದಾರರ ಹೆಸರುಗಳನ್ನು ಸೇರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ಆ ವಿಳಾಸಗಳಲ್ಲಿ ಯಾರೂ ಇರಲಿಲ್ಲ. ಈ ರೀತಿಯ 40,000 ನಕಲಿ ಮತದಾರರನ್ನು ಗುರುತಿಸಲಾಗಿದೆ.

ಫೋಟೋ ಇಲ್ಲದ ಮತದಾರರು: ಕೆಲವು ಮತದಾರರ ಗುರುತಿನ ಚೀಟಿಗಳಲ್ಲಿ ಫೋಟೋ ಇರಲಿಲ್ಲ.

ನಮೂನೆ 6ರಲ್ಲಿ ಅಕ್ರಮಗಳು: ಹೊಸ ಮತದಾರರನ್ನು ಸೇರಿಸಲು ಬಳಸುವ ಫಾರ್ಮ್ 6 ರಲ್ಲಿ ಅವ್ಯವಹಾರಗಳು ನಡೆದಿವೆ. 85-90 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಹೊಸ ಮತದಾರರನ್ನಾಗಿ ಸೇರಿಸಲಾಗಿದೆ. ಈ ರೀತಿ 34,000 ಮತದಾರರ ಹೆಸರುಗಳು ಕಂಡುಬಂದಿವೆ.

ಬಹು ಮತದಾನದ ಹಕ್ಕು: ಒಬ್ಬ ವ್ಯಕ್ತಿಗೆ ಬೆಂಗಳೂರು, ಲಕ್ನೋ ಮತ್ತು ವಾರಣಾಸಿಯಲ್ಲೂ ಮತದಾನದ ಹಕ್ಕನ್ನು ನೀಡಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. “ನಾವು ಈ ಅಕ್ರಮಗಳ ಬಗ್ಗೆ ಪ್ರಶ್ನಿಸಿದಾಗ, ಚುನಾವಣಾ ಆಯೋಗ ದಾಖಲೆಗಳನ್ನು ಬದಲಿಸಿ, ದಾಖಲೆಗಳನ್ನು ಅಳಿಸಿಹಾಕುತ್ತಿದೆ” ಎಂದು ಅವರು ಹೇಳಿದರು. ಬಿಹಾರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್‌ಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜನರು ಪ್ರಶ್ನಿಸಲು ಆರಂಭಿಸಿದರೆ ತಮ್ಮ “ನಾಟಕ” ಕೊನೆಯಾಗುತ್ತದೆ ಎಂಬ ಭಯದಿಂದ ಆಯೋಗವು ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು, “ನಾವು ಚುನಾವಣಾ ಆಯೋಗದಿಂದ ಕಳೆದ 10 ವರ್ಷಗಳ ಡಿಜಿಟಲ್ ಮತದಾನ ಮಾಹಿತಿ ಮತ್ತು ಮತಗಟ್ಟೆಗಳ ವೀಡಿಯೋ ರೆಕಾರ್ಡ್‌ಗಳನ್ನು ಕೇಳುತ್ತಿದ್ದೇವೆ. ಈ ಮಾಹಿತಿ ಸಿಕ್ಕರೆ ದೇಶಾದ್ಯಂತ ನಡೆದಿರುವ ಮತ ಕಳ್ಳತನದ ಬಗ್ಗೆ ನಾವು ಪುರಾವೆಗಳೊಂದಿಗೆ ತೋರಿಸುತ್ತೇವೆ. ಕೇವಲ ಒಂದು ಕ್ಷೇತ್ರದಲ್ಲಿ ಇದನ್ನು ಸಾಬೀತು ಮಾಡಲು ನಮಗೆ ಆರು ತಿಂಗಳು ಬೇಕಾಯಿತು” ಎಂದು ಹೇಳಿದರು.

ಈ ಮತ ಕಳ್ಳತನ ಕೇವಲ ರಾಜ್ಯಮಟ್ಟದಲ್ಲಿ ನಡೆಯುತ್ತಿಲ್ಲ, ಬದಲಾಗಿ ಇದು ದೇಶಾದ್ಯಂತ ವ್ಯಾಪಕವಾಗಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನರೇಂದ್ರ ಮೋದಿ ಕೇವಲ 25 ಸ್ಥಾನಗಳ ಅಂತರದಿಂದ ಪ್ರಧಾನಿಯಾಗಿದ್ದಾರೆ. ಈ ರೀತಿಯ ಮತ ಕಳ್ಳತನ ನಡೆದಿಲ್ಲವೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಯು 35 ಸಾವಿರ ಅಂತರದಿಂದ ಜಯಗಳಿಸಿದ 25 ಸ್ಥಾನಗಳಲ್ಲೂ ಮತ ಕಳ್ಳತನ ನಡೆದಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ರಕ್ಷಣೆಯ ಕರೆ

ಈ ಮತ ಕಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. “ಸಂವಿಧಾನವು ನಮ್ಮ ಪವಿತ್ರ ಗ್ರಂಥ. ಅದು ಈ ದೇಶದ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿ” ಎಂದು ಅವರು ಹೇಳಿದರು. ಚುನಾವಣಾ ಆಯೋಗವು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದು, ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತಿಮವಾಗಿ, ರಾಹುಲ್ ಗಾಂಧಿ ಅವರು ಕರ್ನಾಟಕದ ರಾಜ್ಯ ಸರ್ಕಾರವನ್ನು ಈ ವಿಷಯದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು. “ಮಹಾದೇವಪುರದ ಈ ಕ್ರಿಮಿನಲ್ ಕೃತ್ಯದ ತನಿಖೆ ನಡೆಸಿ, ನೈಜತೆ ಹೊರತರುವಂತೆ” ಮನವಿ ಮಾಡಿದರು. ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದರು.

“ಬಿಜೆಪಿಯ ಸಿದ್ಧಾಂತವು ಸಂವಿಧಾನ ವಿರೋಧಿಯಾಗಿದೆ” ಎಂದು ಹೇಳಿದ ರಾಹುಲ್ ಗಾಂಧಿ, ನಾವು ಸತ್ಯವನ್ನು ಹೊರತರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಆಯೋಗವು ನಮಗೆ ಸರಿಯಾದ ಮಾಹಿತಿ ನೀಡದಿದ್ದರೆ ನಾವು ಮತ್ತಷ್ಟು 20 ಕ್ಷೇತ್ರಗಳ ಮಾಹಿತಿಯನ್ನು ಹೊರತರುತ್ತೇವೆ” ಎಂದು ಅವರು ಎಚ್ಚರಿಸಿದರು. ಈ ಮತ ಕಳ್ಳತನವು ದೇಶದಾದ್ಯಂತ ನಡೆದಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳು ಇದರ ವಿರುದ್ಧ ಒಟ್ಟಾಗಿ ಪ್ರಶ್ನೆ ಮಾಡುತ್ತಿವೆ ಎಂದು ಅವರು ಹೇಳಿದರು.

ಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...