Homeಕರ್ನಾಟಕಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ - ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ...

ಮತಗಳ್ಳತನದ ಆರೋಪ: ಸಂವಿಧಾನದ ಮೇಲೆ ಕೈ ಇಟ್ಟಿದ್ದೇನೆ, ಸುಳ್ಳು ಹೇಳುವುದಿಲ್ಲ – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳ್ಳತನವಾಗಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಪ್ರಮಾಣ ಮಾಡುವಂತೆ ಕೇಳಿದ್ದ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ ಅವರು, “ನಾನು ಈಗಾಗಲೇ ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಕೈಯಿಟ್ಟು ಪ್ರಮಾಣ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಾಡಿದ ಮತ ಕಳ್ಳತನದ ಬಗ್ಗೆ ಸಮಗ್ರ ವರದಿ ನೀಡಲು ಚುನಾವಣಾ ಆಯೋಗ ನಿರಾಕರಿಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿನ ಮತದಾರರ ಪಟ್ಟಿಯಲ್ಲೂ ಗೊಂದಲಗಳಿವೆ ಎಂದು ಉಲ್ಲೇಖಿಸಿ, ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕದ ಒಂದು ಕೋಟಿ ಹೊಸ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಮಹಾದೇವಪುರದಲ್ಲಿ ಮತ ಕಳ್ಳತನದ ಪುರಾವೆಗಳನ್ನು ಮುಂದಿಟ್ಟ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ಕರ್ನಾಟಕದ ಬೆಂಗಳೂರು ಮಹಾದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ಸಮಗ್ರ ವಿಶ್ಲೇಷಣೆಯ ವರದಿಯನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸಿದರು. “ಮಹಾದೇವಪುರದಲ್ಲಿರುವ 6.5 ಲಕ್ಷ ಮತಗಳಲ್ಲಿ 1 ಲಕ್ಷದ 2,250 ಮತಗಳು ಕಳ್ಳತನವಾಗಿವೆ ಎಂದು ನಾವು ಖಚಿತವಾಗಿ ಹೇಳುತ್ತೇವೆ” ಎಂದು ರಾಹುಲ್ ಗಾಂಧಿ ಘೋಷಿಸಿದರು.

ಈ ಮತ ಕಳ್ಳತನದ ಪ್ರಕ್ರಿಯೆಯು ಐದು ವಿಧಗಳಲ್ಲಿ ನಡೆದಿದೆ ಎಂದು ಅವರು ವಿವರಿಸಿದರು:

ದ್ವಿಪ್ರತಿ ನಮೂದು (Duplicate Entries): ಒಬ್ಬ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಸೇರಿಸಲಾಗಿದೆ ಮತ್ತು ಆತ ಐದು ಮತಗಟ್ಟೆಗಳಲ್ಲಿ ಮತದಾನ ಮಾಡಿರುವುದು ಕಂಡುಬಂದಿದೆ. ಈ ರೀತಿಯ 12,000 ಕಳ್ಳ ಮತಗಳನ್ನು ಗುರುತಿಸಲಾಗಿದೆ.

ನಕಲಿ ವಿಳಾಸಗಳು: ಒಂದೇ ಕೊಠಡಿಯಿರುವ ಮನೆಗಳಲ್ಲಿ 40 ರಿಂದ 80 ಮತದಾರರ ಹೆಸರುಗಳನ್ನು ಸೇರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ಆ ವಿಳಾಸಗಳಲ್ಲಿ ಯಾರೂ ಇರಲಿಲ್ಲ. ಈ ರೀತಿಯ 40,000 ನಕಲಿ ಮತದಾರರನ್ನು ಗುರುತಿಸಲಾಗಿದೆ.

ಫೋಟೋ ಇಲ್ಲದ ಮತದಾರರು: ಕೆಲವು ಮತದಾರರ ಗುರುತಿನ ಚೀಟಿಗಳಲ್ಲಿ ಫೋಟೋ ಇರಲಿಲ್ಲ.

ನಮೂನೆ 6ರಲ್ಲಿ ಅಕ್ರಮಗಳು: ಹೊಸ ಮತದಾರರನ್ನು ಸೇರಿಸಲು ಬಳಸುವ ಫಾರ್ಮ್ 6 ರಲ್ಲಿ ಅವ್ಯವಹಾರಗಳು ನಡೆದಿವೆ. 85-90 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಹೊಸ ಮತದಾರರನ್ನಾಗಿ ಸೇರಿಸಲಾಗಿದೆ. ಈ ರೀತಿ 34,000 ಮತದಾರರ ಹೆಸರುಗಳು ಕಂಡುಬಂದಿವೆ.

ಬಹು ಮತದಾನದ ಹಕ್ಕು: ಒಬ್ಬ ವ್ಯಕ್ತಿಗೆ ಬೆಂಗಳೂರು, ಲಕ್ನೋ ಮತ್ತು ವಾರಣಾಸಿಯಲ್ಲೂ ಮತದಾನದ ಹಕ್ಕನ್ನು ನೀಡಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಆಕ್ರೋಶ

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. “ನಾವು ಈ ಅಕ್ರಮಗಳ ಬಗ್ಗೆ ಪ್ರಶ್ನಿಸಿದಾಗ, ಚುನಾವಣಾ ಆಯೋಗ ದಾಖಲೆಗಳನ್ನು ಬದಲಿಸಿ, ದಾಖಲೆಗಳನ್ನು ಅಳಿಸಿಹಾಕುತ್ತಿದೆ” ಎಂದು ಅವರು ಹೇಳಿದರು. ಬಿಹಾರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಚುನಾವಣಾ ಆಯೋಗದ ವೆಬ್‌ಸೈಟ್‌ಗಳನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಜನರು ಪ್ರಶ್ನಿಸಲು ಆರಂಭಿಸಿದರೆ ತಮ್ಮ “ನಾಟಕ” ಕೊನೆಯಾಗುತ್ತದೆ ಎಂಬ ಭಯದಿಂದ ಆಯೋಗವು ಹೀಗೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು, “ನಾವು ಚುನಾವಣಾ ಆಯೋಗದಿಂದ ಕಳೆದ 10 ವರ್ಷಗಳ ಡಿಜಿಟಲ್ ಮತದಾನ ಮಾಹಿತಿ ಮತ್ತು ಮತಗಟ್ಟೆಗಳ ವೀಡಿಯೋ ರೆಕಾರ್ಡ್‌ಗಳನ್ನು ಕೇಳುತ್ತಿದ್ದೇವೆ. ಈ ಮಾಹಿತಿ ಸಿಕ್ಕರೆ ದೇಶಾದ್ಯಂತ ನಡೆದಿರುವ ಮತ ಕಳ್ಳತನದ ಬಗ್ಗೆ ನಾವು ಪುರಾವೆಗಳೊಂದಿಗೆ ತೋರಿಸುತ್ತೇವೆ. ಕೇವಲ ಒಂದು ಕ್ಷೇತ್ರದಲ್ಲಿ ಇದನ್ನು ಸಾಬೀತು ಮಾಡಲು ನಮಗೆ ಆರು ತಿಂಗಳು ಬೇಕಾಯಿತು” ಎಂದು ಹೇಳಿದರು.

ಈ ಮತ ಕಳ್ಳತನ ಕೇವಲ ರಾಜ್ಯಮಟ್ಟದಲ್ಲಿ ನಡೆಯುತ್ತಿಲ್ಲ, ಬದಲಾಗಿ ಇದು ದೇಶಾದ್ಯಂತ ವ್ಯಾಪಕವಾಗಿ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನರೇಂದ್ರ ಮೋದಿ ಕೇವಲ 25 ಸ್ಥಾನಗಳ ಅಂತರದಿಂದ ಪ್ರಧಾನಿಯಾಗಿದ್ದಾರೆ. ಈ ರೀತಿಯ ಮತ ಕಳ್ಳತನ ನಡೆದಿಲ್ಲವೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಿರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಯು 35 ಸಾವಿರ ಅಂತರದಿಂದ ಜಯಗಳಿಸಿದ 25 ಸ್ಥಾನಗಳಲ್ಲೂ ಮತ ಕಳ್ಳತನ ನಡೆದಿದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ರಕ್ಷಣೆಯ ಕರೆ

ಈ ಮತ ಕಳ್ಳತನವು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು. “ಸಂವಿಧಾನವು ನಮ್ಮ ಪವಿತ್ರ ಗ್ರಂಥ. ಅದು ಈ ದೇಶದ ಬಡವರು, ಕಾರ್ಮಿಕರು, ರೈತರು ಮತ್ತು ಮಹಿಳೆಯರ ಧ್ವನಿ” ಎಂದು ಅವರು ಹೇಳಿದರು. ಚುನಾವಣಾ ಆಯೋಗವು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದು, ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಅಂತಿಮವಾಗಿ, ರಾಹುಲ್ ಗಾಂಧಿ ಅವರು ಕರ್ನಾಟಕದ ರಾಜ್ಯ ಸರ್ಕಾರವನ್ನು ಈ ವಿಷಯದ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಿದರು. “ಮಹಾದೇವಪುರದ ಈ ಕ್ರಿಮಿನಲ್ ಕೃತ್ಯದ ತನಿಖೆ ನಡೆಸಿ, ನೈಜತೆ ಹೊರತರುವಂತೆ” ಮನವಿ ಮಾಡಿದರು. ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಿನಿಂದ ಹೋರಾಡುವಂತೆ ಕರೆ ನೀಡಿದರು.

“ಬಿಜೆಪಿಯ ಸಿದ್ಧಾಂತವು ಸಂವಿಧಾನ ವಿರೋಧಿಯಾಗಿದೆ” ಎಂದು ಹೇಳಿದ ರಾಹುಲ್ ಗಾಂಧಿ, ನಾವು ಸತ್ಯವನ್ನು ಹೊರತರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಆಯೋಗವು ನಮಗೆ ಸರಿಯಾದ ಮಾಹಿತಿ ನೀಡದಿದ್ದರೆ ನಾವು ಮತ್ತಷ್ಟು 20 ಕ್ಷೇತ್ರಗಳ ಮಾಹಿತಿಯನ್ನು ಹೊರತರುತ್ತೇವೆ” ಎಂದು ಅವರು ಎಚ್ಚರಿಸಿದರು. ಈ ಮತ ಕಳ್ಳತನವು ದೇಶದಾದ್ಯಂತ ನಡೆದಿರುವ ಕಾರಣ, ಎಲ್ಲ ರಾಜಕೀಯ ಪಕ್ಷಗಳು ಇದರ ವಿರುದ್ಧ ಒಟ್ಟಾಗಿ ಪ್ರಶ್ನೆ ಮಾಡುತ್ತಿವೆ ಎಂದು ಅವರು ಹೇಳಿದರು.

ಲೋಕಸಭೆಯಲ್ಲಿ ಮಣಿಪುರಕ್ಕೆ ಸಂಬಂಧಿಸಿದ ಎರಡು ಮಸೂದೆಗಳು ಚರ್ಚೆಯಿಲ್ಲದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...